Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿತೀಶ್ ಕುಮಾರ್‌ಗಿಂತ ಮಗನೇ ಹೆಚ್ಚು...

ನಿತೀಶ್ ಕುಮಾರ್‌ಗಿಂತ ಮಗನೇ ಹೆಚ್ಚು ಶ್ರೀಮಂತ

ವಾರ್ತಾಭಾರತಿವಾರ್ತಾಭಾರತಿ4 Jan 2016 12:41 AM IST
share
ನಿತೀಶ್ ಕುಮಾರ್‌ಗಿಂತ ಮಗನೇ ಹೆಚ್ಚು ಶ್ರೀಮಂತ

ಪಾಟ್ನಾ,ಜ.3: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಶ್ರೀಮಂತಿಕೆಯಲ್ಲಿ ಅಪ್ಪನನ್ನೇ ಮೀರಿಸಿದ್ದಾರೆ. ಕುಮಾರ್ ಒಟ್ಟು 60 ಲ.ರೂ.ವೌಲ್ಯದ ಚರ ಮತ್ತು ಸ್ಥಿರಾಸ್ತಿಗಳನ್ನು ಹೊಂದಿದ್ದರೆ, ನಿಶಾಂತ್ ಬಳಿ ಅಪ್ಪನ ನಾಲ್ಕು ಪಟ್ಟು ಆಸ್ತಿಯಿದೆ.


ಕುಮಾರ್ ಮತ್ತು ಅವರ ಸಂಪುಟ ಸದಸ್ಯರು ಮೂರು ದಿನಗಳ ಹಿಂದೆ ಘೋಷಿಸಿರುವ ಆಸ್ತಿ ವಿವರಗಳಂತೆ ಮುಖ್ಯಮಂತ್ರಿಯವರು ಸುಮಾರು 19ಲ.ರೂ.ವೌಲ್ಯದ ಚರಾಸ್ತಿ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಫ್ಲಾಟ್ ರೂಪದಲ್ಲಿ 40ಲ.ರೂ.ವೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ. ಅವರ ಬಳಿ ಎರಡು ಕಾರುಗಳಿದ್ದು, 2003ನೆ ಮಾಡೆಲ್‌ನ ಹುಂಡೈ ಸಾಂಟ್ರೋ ಕಾರು ತನಗೆ ಉಡುಗೊರೆಯಾಗಿ ಬಂದಿರುವುದು ಎಂದು ಘೋಷಿಸಿದ್ದಾರೆ.

ಫೋರ್ಡ್ ಇಕೋಸ್ಪೋರ್ಟ್ ಕಾರನ್ನು ಅವರು ಕಳೆದ ವರ್ಷ ಖರೀದಿಸಿದ್ದಾರೆ. ಇದರ ಜೊತೆಗೆ ಆರು ಆಕಳುಗಳು ಮತ್ತು ಎರಡು ಕರುಗಳು ಅವರ ಬಳಿಯಿವೆ.


ಇದಕ್ಕೆ ವ್ಯತಿರಿಕ್ತವಾಗಿ ಪುತ್ರ ನಿಶಾಂತ್ ಬಳಿ 94ಲ.ರೂ.ವೌಲ್ಯದ ಚರಾಸ್ತಿ ಮತ್ತು ಪಾಟ್ನಾ ಮತ್ತು ಸ್ವಗ್ರಾಮ ನಳಂದಾ ಜಿಲ್ಲೆಯ ಕಲ್ಯಾಣ ಬಿಘಾದಲ್ಲಿ ಮನೆಗಳು ಸೇರಿದಂತೆ 1.2ಕೋ.ರೂ.ವೌಲ್ಯದ ಸ್ಥಿರಾಸ್ತಿಗಳಿವೆ.
   ಇನ್ನೊಂದೆಡೆ ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರ ಇಬ್ಬರು ಸಚಿವ ಪುತ್ರರಾದ ತೇಜಸ್ವಿ ಪ್ರಸಾದ್ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ಅವರು ಸಾಕಷ್ಟು ದೊಡ್ಡ ಮೊತ್ತದ ಚರಾಸ್ತಿ ಮತ್ತು ಸ್ಥಿರಾಸ್ತಿಗಳನ್ನು ಘೋಷಿಸಿದ್ದಾರೆ.
 
ರಸ್ತೆ ಇಲಾಖೆಯನ್ನೂ ಹೊಂದಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಬಳಿ 22.55ಲ.ರೂ.ವೌಲ್ಯದ ಚರಾಸ್ತಿಗಳಿವೆ. 91.52ಲ.ರೂ.ಗಳ ಸ್ಥಿರಾಸ್ತಿಯ ಜೊತೆಗೆ ಶೇರು ಮಾರುಕಟ್ಟೆಲ್ಲಿ 5.38ಲ.ರೂ. ಹೂಡಿಕೆಯನ್ನು ಹೊಂದಿದ್ದಾರೆ. ನಿತೀಶ್ ಸರಕಾರದಲ್ಲಿ ಆರೋಗ್ಯ ಸಚಿವರಾಗಿರುವ ಅವರ ಹಿರಿಯ ಸೋದರ ತೇಜ್ ಪ್ರತಾಪ್ ತನ್ನ ಬ್ಯಾಂಕ್ ಖಾತೆಯಲ್ಲಿ 4.56ಲ.ರೂ, ಜೊತೆಗೆ 25.10ಲ.ರೂ ವೌಲ್ಯದ ಶೇರುಗಳು ಮತ್ತು 79.27ಲ.ರೂ.ವೌಲ್ಯದ ಸ್ಥಿರಾಸ್ತಿಯನ್ನು ಹೊಂದಿದ್ದಾರೆ.
 
ತೇಜಸ್ವಿ ಪ್ರಸಾದ್ ಯಾವುದೇ ವಾಹನ ಹೊಂದಿಲ್ಲ,ತೇಜ್ ಪ್ರತಾಪ್ ಬಳಿ 29.43ಲ.ರೂ.ವೌಲ್ಯದ ಬಿಎಂಡಬ್ಲೂ ಕಾರು ಮತ್ತು 15.46ಲ.ರೂ.ವೌಲ್ಯದ ಒಂದು ಬೈಕ್ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X