Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿ.ವಿ. ಕೂಡಾ ಹಿಂದುತ್ವದ ಲ್ಯಾಬ್ ಆಗಿ...

ವಿ.ವಿ. ಕೂಡಾ ಹಿಂದುತ್ವದ ಲ್ಯಾಬ್ ಆಗಿ ಪರಿವರ್ತನೆ ಆಗುತ್ತಿದೆಯೇ?

ವಾರ್ತಾಭಾರತಿವಾರ್ತಾಭಾರತಿ4 Jan 2016 11:23 PM IST
share

ಮಾನ್ಯರೆ,

 ಮಂಗಳೂರಿನಲ್ಲಿಯ ಕಾವೂರಿನ ಬಿಜಿಎಸ್ ವಿದ್ಯಾ ಸಂಸ್ಥೆಯಲ್ಲಿ ಮೊನ್ನೆ ಬುಧವಾರ ಅಧ್ಯಾತ್ಮ ಮತ್ತು ವಿಜ್ಞಾನ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುತ್ತಾ ಮಂಗಳೂರು ವಿ. ವಿ. ಕುಲಪತಿ ಪ್ರೊ.ಕೆ. ಭೈರಪ್ಪಮಾತನಾಡಿ ‘‘ಪ್ರಧಾನಿ ನರೇಂದ್ರ ಮೋದಿ ವೈದಿಕ ವಿಜ್ಞಾನಕ್ಕೆ ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆ, ಭಾರತೀಯ ವಿಜ್ಞಾನವು ಆಧ್ಯಾತ್ಮಿಕ ತಳಹದಿ ಹೊಂದಿದ್ದು ಪುಷ್ಪಕ ವಿಮಾನ, ಕ್ಷಿಪಣಿ ನಿರ್ಮಾಣ, ಅಣು ವಿಜ್ಞಾನ ಪುರಾಣ ಕಾಲದಲ್ಲಿಯೇ ಇತ್ತು, ನ್ಯೂಟನ್ ಗುರುತ್ವಾಕರ್ಷಣಾ ತತ್ವ ಕಂಡು ಹಿಡಿಯುವ ಎರಡು ಸಾವಿರ ವರ್ಷ ಮೊದಲೇ ಭಾರತೀಯರು ಈ ನಿಯಮ ಸಾದರ ಪಡಿಸಿದ್ದರು’’ ಎಂದೆಲ್ಲ ವೈದಿಕ ವಿಜ್ಞಾನದ ಬಗ್ಗೆ ಹೆಮ್ಮೆ ವ್ಯಕ್ತ ಪಡಿಸಿದರು. ಕುಲಪತಿಗಳ ಈ ಅವೈಜ್ಞಾನಿಕ ಮನೋಭಾವ ಸಭಿಕರನ್ನು ದಂಗು ಬಡಿಸಿತು. ಒಂದು ವಿಶ್ವವಿದ್ಯಾನಿಲಯದ ಕುಲಪತಿ ಸ್ಥಾನದಲ್ಲಿರುವವರು ಹೀಗೆಲ್ಲಾ ವೈದಿಕ ಕುವಿಜ್ಞಾನವನ್ನು ಸಮರ್ಥಿಸುತ್ತಾ ಹೋದರೆ ಇಂಹ ವಿಶ್ವ ವಿದ್ಯಾನಿಲಯಗಳಲ್ಲಿ ಕಲಿಯುತ್ತಿರುವ ಮುಂದಿನ ಪೀಳಿಗೆಯಲ್ಲಿ ಎಂತಹ ಮನೋಭೂಮಿಕೆ ತಯಾರಾಗಬಹುದು ಯೋಚಿಸಿ. ಸರಕಾರದ ಜಾತ್ಯತೀತ ಶಿಕ್ಷಣ ನೀತಿಗನುಗುಣವಾಗಿ ಮಂಗಳೂರು ವಿಶ್ವ ವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಎಂದೂ ಧಾರ್ಮಿಕ ಸಮಾರಂಭ ನಡೆದೇ ಇರಲಿಲ್ಲ. ಆದರೆ ಈಗಿನ ಕುಲಪತಿಗಳು ಬಂದ ಮೇಲೆ ಮೊಟ್ಟ ಮೊದಲ ಬಾರಿಗೆ ಕಳೆದ ವರ್ಷ ಸೆಪ್ಟಂಬರಿನಲ್ಲಿ ವಿ.ವಿ. ಕ್ಯಾಂಪಸ್‌ನಲ್ಲಿ ಗಣೇಶೋತ್ಸವ ನಡೆಸಲಾಯಿತು. ಕರಾವಳಿಯೆಲ್ಲ ಹಿಂದುತ್ವದ ಲ್ಯಾಬ್ ಆಗಿರುವುದು ನಿಜ, ಕರಾವಳಿಯ ಪೊಲೀಸ್ ಇಲಾಖೆಯಲ್ಲಿಯೂ ಸಂಘ ಪರಿವಾರದವರು ತುಂಬಿರುವುದು ನಿಜ. ಆದರೆ ವೈಜ್ಞಾನಿಕ ಮನೋಭಾವದ ಭಾವೀ ಪ್ರಜೆಗಳನ್ನು ನಿರ್ಮಿಸುವ ಘನ ಹೊಣೆ ಹೊತ್ತಿರುವ ಕರಾವಳಿಯ ಶಿಕ್ಷಣ ಕ್ಷೇತ್ರ ಮತ್ತು ವಿಶ್ವವಿದ್ಯಾನಿಲಯ ಸಹ ಈಗ ಹಿಂದುತ್ವದ ಲ್ಯಾಬ್ ಆಗಿ ಪರಿವರ್ತನೆ ಆಗುತ್ತಿರುವುದು ಭವಿಷ್ಯದ ದೃಷ್ಟಿಯಿಂದ ತುಂಬಾ ಅಪಾಯಕಾರಿಯಾಗಿ ಕಾಣುತ್ತಿದೆ. ನಮ್ಮ ರಾಜ್ಯದ ಶಿಕ್ಷಣ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಇದನ್ನು ಗಮನಿಸಿರುವರೇ?
 - ರಾಮಕೃಷ್ಣ ಏ. ಕಿಲ್ಲೆ,
ಫಳ್ನೀರ್ ರೋಡ್, ಮಂಗಳೂರು

ಅನುದಾನ ರಹಿತ ಶಾಲಾ ಶಿಕ್ಷಕರ
ಶೋಷಣೆಗೆ ಕೊನೆ ಎಂದು?
ಮಾನ್ಯರೆ,
ಕರ್ನಾಟಕ ಸರಕಾರದ ಆದೇಶ ಸಂಖ್ಯೆ ಇಡಿ:104. ಎಸ್.ಇ.ಪಿ. ದಿನಾಂಕ: 12.01.2006 ಹಾಗೂ ಇಡಿ:208 ಎಸ್.ಇ.ಪಿ. ದಿನಾಂಕ 12.10.2007ರ ಪ್ರಕಾರ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನಿಗದಿಪಡಿಸಿದ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆಯನ್ನು ಕಡ್ಡಾಯವಾಗಿ ನೀಡಲು ಸೂಚಿಸಿದೆ. ವೇತನವನ್ನು ಅಕೌಂಟ್‌ಪೇಯಿ ಚೆಕ್ ಮೂಲಕ ಪಾವತಿ ಮಾಡಬೇಕಾಗಿದೆ. ಆದರೆ ಹೆಚ್ಚಿನ ಶಾಲಾ ಆಡಳಿತ ಮಂಡಳಿಯವರು ತಿಂಗಳ ವೇತನ ನೀಡುವ ಸಂದರ್ಭದಲ್ಲಿ ಸದ್ರಿ ಶಿಕ್ಷಕರಿಂದ ಒತ್ತಾಯ ಪೂರ್ವಕವಾಗಿ ಖಾಲಿ ಚೆಕ್‌ನ್ನು ಪಡೆಯಲಾಗುತ್ತಿದೆ. ಅವರ ಬ್ಯಾಂಕ್ ಖಾತೆಗೆ ಹಣ ಜಮೆ ಆದ ತಕ್ಷಣ ಶಿಕ್ಷಕರಿಂದ ಪಡೆದ ಖಾಲಿ ಚೆಕ್‌ನ್ನು ಭರ್ತಿ ಮಾಡಿಕೊಂಡು ಶಾಲೆಯ ವತಿಯಿಂದ ಕಲೆಕ್ಷನ್‌ಗೆ ಹಾಕಿ ಶಿಕ್ಷಕರಿಗೆ ನೀಡಿದ ವೇತನದಲ್ಲಿ ನಿರ್ದಿಷ್ಟ ಮೊತ್ತವನ್ನು ಶಾಲಾ ಆಡಳಿತ ಮಂಡಳಿಯವರು ಪ್ರತಿ ತಿಂಗಳು ಹಿಂಪಡೆಯುತ್ತಿದ್ದಾರೆ. ಸರಕಾರದ ಕಣ್ಣಿಗೆ ಮಣ್ಣೆರಚಲು ಚೆಕ್ ಮುಖಾಂತರ ವೇತನ ನೀಡಿ ನಿರ್ದಿಷ್ಟ ಮೊತ್ತವನ್ನು ಹಿಂಪಡೆಯುವುದು ಶಿಕ್ಷಕರಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ. ಶಿಕ್ಷಕರು ಈ ಕುರಿತು ಧ್ವನಿ ಎತ್ತಿದಲ್ಲಿ ತಮ್ಮ ಉದ್ಯೋಗವನ್ನು ಕಳಕೊಳ್ಳಬೇಕಾಗುತ್ತದೆ.
ಆದುದರಿಂದ ಸಂಬಂಧಪಟ್ಟ ಅಧಿಕಾರಿಗಳು ಮೇಲ್ಕಾಣಿಸಿದ ಅವ್ಯವಹಾರಗಳನ್ನು ಪತ್ತೆ ಹಚ್ಚುವರೇ ಶಿಕ್ಷಕರ ನೇಮಕಾತಿ ಆದೇಶ ಪತ್ರ, ಸೇವಾ ಪುಸ್ತಕ, ಶಿಕ್ಷಕರ ಬ್ಯಾಂಕ್ ಪಾಸ್‌ಪುಸ್ತಕ ಇತ್ಯಾದಿಗಳನ್ನು ಪರಿಶೀಲಿಸಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ನ್ಯಾಯ ಒದಗಿಸಬೇಕಾಗಿ ವಿನಂತಿ.

-ಹರಿಪ್ರಸಾದ್,

ಕಡಬ- ಪುತ್ತೂರು,ದ.ಕ ಗೊಂದಲ ಪರಿಹರಿಸಿ
ಮಾನ್ಯರೆ,
ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ಸೆಟ್‌ಅಪ್ ಬಾಕ್ಸ್ ಅಳವಡಿಕೆ ವಿಚಾರವು ಜನಸಾಮಾನ್ಯರಿಗೆ ಗೊಂದಲಕಾರಿಯಾಗಿದೆ. ಸುಮಾರು ಎರಡು ಸಾವಿರ ರೂ. ಬೆಲೆಬಾಳುವ ಈ ವಸ್ತು ಅಳವಡಿಕೆ ಒಂದೊಮ್ಮೆ ಕಡ್ಡಾಯವಾದರೆ ಜನಸಾಮಾನ್ಯರಿಗೆ ಬಹಳಷ್ಟು ಹೊರೆಯಾಗಬಹುದು. ಹಿಂದೆಯೂ ಈ ಬಗ್ಗೆ ಅತಿಪ್ರಚಾರವಾಗಿತ್ತು. ಆದರೆ ಮತ್ತೆ ಎಂದಿನಂತೆ ಮುಂದುವರಿದಿತ್ತು. ಹಾಗಾಗಿ ಈ ಬಾರಿ ಸೆಟ್‌ಅಪ್ ಬಾಕ್ಸ್ ಅಳವಡಿಕೆ ಕಡ್ಡಾಯವೇ ಅಥವಾ ಅಲ್ಲವೇ ಎಂಬುದನ್ನು ಸಂಬಂಧಪಟ್ಟವರು ಜನತೆಗೆ ಸ್ಪಷ್ಟವಾಗಿ ತಿಳಿಸಿದರೆ ಜನತೆಯಲ್ಲಿರುವ ಗೊಂದಲ ನಿವಾರಣೆಯಾಗಬಹುದು.
   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X