Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಂಚಾಂಗ-ಕುಂಡಲಿಗಳೆಲ್ಲ ಸುಳ್ಳಿನ...

ಪಂಚಾಂಗ-ಕುಂಡಲಿಗಳೆಲ್ಲ ಸುಳ್ಳಿನ ಕಂತೆಗಳು: ಮುರುಘಾ ಶರಣರು

ವಾರ್ತಾಭಾರತಿವಾರ್ತಾಭಾರತಿ5 Jan 2016 10:43 PM IST
share
ಪಂಚಾಂಗ-ಕುಂಡಲಿಗಳೆಲ್ಲ ಸುಳ್ಳಿನ ಕಂತೆಗಳು: ಮುರುಘಾ ಶರಣರು

ಚಿತ್ರದುರ್ಗ, ಜ. 5: ಜಾತಕ ಮೀರಿ ಮದುವೆಯಾದರೆ ವಧು-ವರರಲ್ಲಿ ಯಾರಾದರೊಬ್ಬರು ಸಾಯುತ್ತಾರೆಂಬ ಮೂಢನಂಬಿಕೆ ಪ್ರಚಲಿತದಲ್ಲಿದೆ. ಆದರೆ, ಪಂಚಾಂಗ, ಜಾತಕ, ಕುಂಡಲಿಗಳೆಲ್ಲ ಅವೈಜ್ಞಾನಿಕ ಮತ್ತು ಸುಳ್ಳಿನ ಕಂತೆಗಳಾಗಿವೆ ಎಂದು ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾಶರಣರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳವಾರ ಬಸವಕೇಂದ್ರ ಮತ್ತು ಎಸ್‌ಜೆಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್ ವತಿಯಿಂದ ಶ್ರೀಮಠದಲ್ಲಿ ನಡೆದ 26ನೆ ವರ್ಷದ ಮೊದಲ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರೀತಿಸುವಾಗ ಯಾವ ಜಾತಕವನ್ನೂ ನೋಡುವುದಿಲ್ಲ.
ಒಬ್ಬ ಯುವತಿ ತಾನು ಪ್ರೀತಿಸಿದ ಹುಡುಗನೊಟ್ಟಿಗೆ ಮದುವೆಯಾಗಲು ಇಚ್ಛಿಸಿದ್ದು, ಹುಡುಗನ ತಾಯಿ ಜಾತಕವನ್ನು ಮುಂದು ಮಾಡಿ ಒಪ್ಪದಿದ್ದಾಗ ಇದನ್ನು ಮೀರಿ ನಾನು ಹೇಗೆ ಹೊರಬರಬೇಕೆಂದು ನನ್ನ ಬಳಿಬಂದು ಅಲವತ್ತುಕೊಂಡಳು. ಆಗ ಯುವಕನ ತಾಯಿಯನ್ನು ಕರೆಸಿಕೊಂಡು ತಿಳಿಹೇಳಿ ಇದನ್ನು ಸುಖಾಂತ್ಯಗೊಳಿಸಿದೆವು ಎಂದು ನೆನಪಿಸಿಕೊಂಡರು.
ವಿದ್ಯಾವಂತ ವೈದ್ಯರು, ಎಂಜಿನಿಯರ್‌ಗಳು ಖಿನ್ನತೆಗೊಳಗಾಗಿ ಕೊನೆಗೆ ಅವರು ಸಾವಿಗೆ ಶರಣಾಗುತ್ತಾರೆ. ಪಂಚಾಂಗ, ಜಾತಕ, ಕುಂಡಲಿ ನೋಡಿ ಮದುವೆಯಾಗದೆ ದುಡಿಯುವ ಹುಡುಗ ಮತ್ತು ಅಡುಗೆ ಮಾಡುವ ಹುಡುಗಿಯನ್ನು ನೋಡಿ ಮದುವೆ ಮಾಡಿಕೊಳ್ಳಿ ಎಂದ ಅವರು, ಶ್ರೀಮಠದಲ್ಲಿ ಯಾವುದೇ ರಾಹುಕಾಲ-ಗುಳಿಗ ಕಾಲ, ಯಮಗಂಡ ಕಾಲ, ಜಾತಕ, ಕುಂಡಲಿ, ಪಂಚಾಂಗವನ್ನು ನೋಡದೆ ಇಪ್ಪತ್ತೈದು ವರ್ಷಗಳಿಂದ ಸಾಮೂಹಿಕ ಕಲ್ಯಾಣ ಮಹೋತ್ಸವ ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.
ಇದೇ ವೇಳೆ ಟಿ.ಆರ್.ಮಾರುತೇಶ (ನಾಯಕ), ಜಿ.ಸಿದ್ದವೀರಮ್ಮ (ಯಾದವ), ಆರ್.ತಿಮ್ಮಪ್ಪ(ಕೊರಚ), ಎನ್.ಲಕ್ಷ್ಮೀದೇವಿ(ನಾಯಕ) ಮತ್ತು ಜಿ.ಆರ್. ಮಂಜಪ್ಪ(ನಾಯಕ), ಜಿ.ಎಸ್.ಲಲಿತಾ(ಯಾದವ) ಮೂರು ಜೋಡಿ ಅಂತರ್ಜಾತಿ ವಿವಾಹ ಸೇರಿದಂತೆ 28 ಜೋಡಿಗಳು ನವದಾಂಪತ್ಯಜೀವನಕ್ಕೆ ಕಾಲಿರಿಸಿದರು.
ಚಿಕ್ಕಮಗಳೂರಿನ ಹಣ್ಣೆ ಮಠದ ಶಿವಾನಂದ ಶಿವಾಚಾರ್ಯ ಸ್ವಾಮಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ವಿಶ್ವನಾಥ ಹೀರೆಮಠ, ಆರ್ಯವೈಶ್ಯ ಮಹಾಸಭಾ ಅಧ್ಯಕ್ಷ ರವಿಶಂಕರ್, ಆಹಾರ ತಜ್ಞ ಕೆ.ಸಿ.ರಘು, ವಕೀಲರ ಪರಿಷತ್ ಸದಸ್ಯ ಅನಿಲ್‌ಕುಮಾರ್ ಹಾಗೂ ದಾಸೋಹಿಗಳಾದ ಅಶ್ವತ್ಥಲಕ್ಷ್ಮೀ ಮತ್ತು ಸುಬ್ರಮಣ್ಯ ಶೆಟ್ಟಿ ದಂಪತಿ ವೇದಿಕೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X