Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠಾಣ್‌ಕೋಟ್ ದಾಳಿ: ಭದ್ರತಾ ಲೋಪ...

ಪಠಾಣ್‌ಕೋಟ್ ದಾಳಿ: ಭದ್ರತಾ ಲೋಪ ಒಪ್ಪಿಕೊಂಡ ಪಾರಿಕ್ಕರ್

ವಾರ್ತಾಭಾರತಿವಾರ್ತಾಭಾರತಿ5 Jan 2016 11:37 PM IST
share
ಪಠಾಣ್‌ಕೋಟ್ ದಾಳಿ: ಭದ್ರತಾ ಲೋಪ ಒಪ್ಪಿಕೊಂಡ ಪಾರಿಕ್ಕರ್

ಪಠಾಣ್‌ಕೋಟ್, ಜ.5: ಭಯೋತ್ಪಾದಕ ದಾಳಿಗೆ ಗುರಿಯಾದ ಇಲ್ಲಿನ ವಾಯುಪಡೆ ನೆಲೆಯಲ್ಲಿ ಭದ್ರತಾ ಲೋಪವಿರುವುದನ್ನು ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಮಂಗಳವಾರ ಒಪ್ಪಿಕೊಂಡಿದ್ದಾರೆ.


ಇಲ್ಲಿನ ಮುಂಚೂಣಿ ವಾಯುಪಡೆ ನೆಲೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 36 ಗಂಟೆಗಳಿಗೂ ಅಧಿಕ ಕಾಲ ನಡೆದ ಕಾರ್ಯಾಚರಣೆಯಲ್ಲಿ ಎಲ್ಲ ಆರೂ ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದರು.


ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಯು ಶನಿವಾರ ಮುಂಜಾನೆ 3:30ಕ್ಕೆ ಆರಂಭವಾಗಿತ್ತು.


ಯಾವುದಾದರೂ ಪ್ರಮುಖ ಭದ್ರತಾ ಲೋಪವು ಭಯೋತ್ಪಾದಕ ದಾಳಿಗೆ ಕಾರಣವಾಯಿತೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘‘ಕೆಲವು ಭದ್ರತಾ ಲೋಪಗಳು ನನ್ನ ಗಮನಕ್ಕೆ ಬಂದಿವೆ. ಆದರೆ, ಭದ್ರತೆಯೊಂದಿಗೆ ರಾಜಿ ಮಾಡಿಕೊಳ್ಳಲಾಗಿದೆ ಎಂದು ನನಗನಿಸುವುದಿಲ್ಲ’’ ಎಂದರು.


ತನಿಖೆ ಪೂರ್ಣಗೊಂಡಾಗ ಎಲ್ಲವೂ ಸ್ಪಷ್ಟಗೊಳ್ಳುವುದು ಎಂದು ಹೇಳಿದ ಪಾರಿಕ್ಕರ್, ಭದ್ರತೆಗೆ ಸಂಬಂಧಿಸಿದ ಪ್ರತಿಯೊಂದು ವಿಷಯದ ಬಗ್ಗೆ ಚರ್ಚಿಸಲು ಸಾಧ್ಯವಿಲ್ಲ ಎಂದರು.


ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ವಹಿಸಿದ ಪಾತ್ರವನ್ನು ರಕ್ಷಣಾ ಸಚಿವರು ಶ್ಲಾಘಿಸಿದರು. ಆದಾಗ್ಯೂ, 24 ಕಿಲೋ ಮೀಟರ್ ಸುತ್ತಳತೆ ಹಾಗೂ 2,000 ಎಕರೆ ವಿಸ್ತೀರ್ಣ ಹೊಂದಿರುವ ವಾಯು ನೆಲೆಯೊಳಗೆ ನುಸುಳಲು ಭಯೋತ್ಪಾದಕರಿಗೆ ಹೇಗೆ ಸಾಧ್ಯವಾಯಿತು ಎಂಬ ಬಗ್ಗೆ ತಾನು ಚಿಂತಿತನಾಗಿದ್ದೇನೆ ಎಂದರು.


ಭಯೋತ್ಪಾದಕ ದಾಳಿಗೂ ಪಾಕಿಸ್ತಾನಕ್ಕೂ ಸಂಬಂಧವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪಾರಿಕ್ಕರ್, ಭಯೋತ್ಪಾದಕರು ಬಳಸಿರುವ ಕೆಲವು ಸಲಕರಣೆಗಳು ಪಾಕಿಸ್ತಾನದಲ್ಲಿ ತಯಾರಾದವು ಎಂಬ ಮಾಹಿತಿಯಿದೆ ಎಂದರು.


ಭಯೋತ್ಪಾದಕರ ಬಳಿ 40-50 ಕೆಜಿ ಗುಂಡುಗಳು, ಸುಧಾರಿತ ಅಂಡರ್ ಬ್ಯಾರಲ್ ಗ್ರೆನೇಡ್ ಲಾಂಚರ್‌ನಿಂದ ಸಿಡಿಸುವ ಮೋರ್ಟರ್‌ಗಳು ಮತ್ತು ಕೆಲವು ಮ್ಯಾಗಝಿನ್‌ಗಳಿದ್ದವು ಎಂದು ಅವರು ತಿಳಿಸಿದರು.


ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲ ಏಳು ಭದ್ರತಾ ಸಿಬ್ಬಂದಿಯನ್ನು ಹುತಾತ್ಮರು ಎಂಬುದಾಗಿ ಪರಿಗಣಿಸಲಾಗುವುದು ಎಂದು ಅವರು ಘೋಷಿಸಿದರು. ಯುದ್ಧದಲ್ಲಿ ಸಾವು ಸಂಭವಿಸಿದರೆ ಸಿಗುವ ಎಲ್ಲ ಸೌಲಭ್ಯಗಳು ಅವರಿಗೆ ಸಿಗುವುದು.


ಗರುಡ್ ಕಮಾಂಡೊ ಗುರುಸೇವಕ್ ಸಿಂಗ್‌ರನ್ನು ಹೊರತುಪಡಿಸಿ ಉಳಿದ ಸೈನಿಕರ ಸಾವು ನೇರ ಮುಖಾಮುಖಿಯಲ್ಲಿ ನಡೆದಿಲ್ಲ ಎಂದು ಪಾರಿಕ್ಕರ್ ಹೇಳಿದರು. ‘‘ಡಿಫೆನ್ಸ್ ಸೆಕ್ಯುರಿಟಿ ಕಾರ್ಪ್ಸ್‌ನ ಐವರು ಸಿಬ್ಬಂದಿಯ ಸಾವು ದುರದೃಷ್ಟದಿಂದಾಗಿ ಸಂಭವಿಸಿದೆ’’ ಎಂದರು.


‘‘ಈಗ ಒಳಗೆ ಶಂಕಿತ ಭಯೋತ್ಪಾದಕರು ಯಾರೂ ಇಲ್ಲ. ಶೋಧ ಕಾರ್ಯಾಚರಣೆ ಮುಗಿಯುವವರೆಗೂ ನಾನು ನಕಾರಾತ್ಮಕ ವರದಿಯನ್ನು ನೀಡುವುದಿಲ್ಲ. ಶೋಧ ಕಾರ್ಯಾಚರಣೆ ನಾಳೆಯ ವೇಳೆ ಮುಕ್ತಾಯಗೊಳ್ಳಬಹುದು’’ ಎಂದು ಪ್ರಶ್ನೆಗಳಿಗೆ ಉತ್ತರಿಸಿದ ಪಾರಿಕ್ಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X