Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚೇತನ ವಿಶೇಷ ಶಾಲೆಯಲ್ಲೊಂದು ಹೊಸತನ:...

ಚೇತನ ವಿಶೇಷ ಶಾಲೆಯಲ್ಲೊಂದು ಹೊಸತನ: ಬೋಧನೆಗೆ ಬಂದ ಜರ್ಮನ್ ಯುವತಿ

ಮುಹಮ್ಮದ್ ಶರೀಫ್ಮುಹಮ್ಮದ್ ಶರೀಫ್6 Jan 2016 12:07 AM IST
share
ಚೇತನ ವಿಶೇಷ ಶಾಲೆಯಲ್ಲೊಂದು ಹೊಸತನ: ಬೋಧನೆಗೆ ಬಂದ ಜರ್ಮನ್ ಯುವತಿ

ಕಾರ್ಕಳ, ಜ.5: ‘‘ಭಾರತೀಯ ಶಿಕ್ಷಣ ಪದ್ಧತಿ ವಿಭಿನ್ನ. ಇಲ್ಲಿ ಸಂಸ್ಕಾರ, ಸಂಸ್ಕೃತಿ ಹಾಗೂ ಹಿರಿಯರನ್ನು ಗೌರವಿಸುವ ಶಿಕ್ಷಣ ಸಿಗುತ್ತಿರುವುದನ್ನು ನಾನು ಕಂಡಿದ್ದೇನೆ. ಒಬ್ಬ ವ್ಯಕ್ತಿಗೆ ಸಮಾಜದಲ್ಲಿ ಸತ್ಪ್ರಜೆಯಾಗಿ ತೊಡಗಿಸಿಕೊಳ್ಳಲು ಪರಿಪೂರ್ಣವಾದ ಶಿಕ್ಷಣ ಇಲ್ಲಿ ಸಿಗುತ್ತಿದೆ. ಜರ್ಮನಿಯ ಶಿಕ್ಷಣವು ನಿರ್ದಿಷ್ಟ ಉದ್ದೇಶವನ್ನು ಈಡೇರಿಸಿಕೊಳ್ಳಲು ಮಾತ್ರ ದೊರಕುವ ಬೋಧನೆ ಹೊರತು ಪರಿಪೂರ್ಣ ವ್ಯಕ್ತಿತ್ವವನ್ನು ರೂಪಿಸುವ ಶಿಕ್ಷಣವಲ್ಲ’’ ಎಂದು ನುಡಿದವರು ಕಾರ್ಕಳದಲ್ಲಿ ಹಲವು ತಿಂಗಳಿಂದ ನೆಲೆಸಿರುವ ಜರ್ಮನ್ ಯುವತಿ ಜುಲೀನಾ.
 

ಜರ್ಮನಿಯ ಪೀಟರ್ ಮತ್ತು ಪೆಟ್ರಾ ದಂಪತಿಯ ಪುತ್ರಿಯಾಗಿರುವ 18ರ ಯುವತಿ ಜುಲೀನಾ ಕಾರ್ಕಳ ಚೇತನಾ ವಿಶೇಷ ಶಾಲೆಯಲ್ಲಿ ಕಳೆದ ಹಲವು ತಿಂಗಳಿಂದ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹನ್ನೆರಡನೆ ತರಗತಿ ಓದುತ್ತಿರುವ ಆಕೆ ಪ್ರೊಜೆಕ್ಟ್ ವರ್ಕ್‌ನ ಕಾರ್ಯ ನಿಮಿತ್ತ ಭಾರತಕ್ಕಾಗಮಿಸಿದ್ದು, ಈ ಶಾಲೆಯಲ್ಲಿ ವಿಕಲಚೇತನ ಮಕ್ಕಳಿಗೆ ಪಠ್ಯವನ್ನು ಬೋಧಿಸುತ್ತಿದ್ದಾರೆ.

ಇಂಗ್ಲಿಷ್ ಭಾಷೆಯನ್ನು ವಿಕಲಚೇತನ ಮಕ್ಕಳಿಗೆ ಪರಿಚಯಿಸುತ್ತಿದ್ದಾರೆ. ಜೊತೆಗೆ ಮಕ್ಕಳನ್ನು ಆಡಿಸುತ್ತಾರೆ, ಕೈ ಹಿಡಿದು ನಡೆಸುತ್ತಾರೆ, ಅವರೊಂದಿಗೆ ಬೆರೆತು ಬಾಳುತ್ತಿದ್ದಾರೆ. ಕನ್ನಡದ ಬಗ್ಗೆ ಒಂದಿಷ್ಟು ತಿಳಿಯದ ಆಕೆ ಕನ್ನಡ ಮಾತನಾಡುವ ಮಕ್ಕಳ ಜೊತೆ ಪೂರ್ಣವಾಗಿ ಬೆರೆಯುತ್ತಿದ್ದಾರೆ. ಕನ್ನಡವನ್ನು ಅರ್ಥೈಸಿಕೊಳ್ಳಲು ಕೂಡಾ ಪ್ರಯತ್ನಿಸುತ್ತಿರುವ ಇವರು ಅಲ್ಪಸ್ವಲ್ಪ ಕನ್ನಡ ಭಾಷೆ ಮಾತನಾಡುತ್ತಿರುವುದು ವಿಶೇಷವಾಗಿದೆ.

‘‘ಇಲ್ಲಿರುವ ವಾತಾವರಣ ನನಗೆ ಅತ್ಯಂತ ಪ್ರಿಯವಾಗಿದೆ. ರುಚಿಕರವಾದ ಊಟೋಪಚಾರ ಕೂಡಾ ನನಗೆ ಖುಷಿಕೊಟ್ಟಿದೆ. ವಿಕಲಚೇತನರಾದ ಈ ಮಕ್ಕಳು ಕೂಡಾ ಸುಂದರ ಪರಿಸರದಲ್ಲಿ ದೈಹಿಕವಾಗಿ ಶಕ್ತರಾಗಿ ಬಾಳಬೇಕೆಂಬ ಆಸೆ ನನಗಿದೆ. ಅದಕ್ಕಾಗಿ ನನ್ನಿಂದಾದ ಸಹಕಾರವನ್ನು ಮಾಡಲಿದ್ದೇನೆ. ಇಲ್ಲಿ ನೀಡಲಾಗುವ ಶಿಕ್ಷಣ ಅದರ ಜೊತೆ ನೃತ್ಯ, ಯೋಗ, ಆಟೋಟಗಳು ಕೂಡಾ ನನಗೆ ಅತ್ಯಂತ ಪ್ರಿಯ’’ ಎನ್ನುತ್ತಾರೆ ಜುಲೀನಾ.

ಇಲ್ಲಿನ ಸಂಸ್ಕೃತಿಯನ್ನರಿತುಕೊಂಡು ಬಾಳಲು ಜುಲೀನಾ ಪ್ರಯತ್ನಿಸಿದ್ದಾರೆ. ಜೊತೆಗೆ ಸ್ನೇಹಿಯಾಗಿ ಎಲ್ಲರೊಂದಿಗೆ ಬೆರೆಯುತ್ತಿದ್ದಾರೆ. ವಿದೇಶಿ ಮಹಿಳೆಯಾದರೂ ನಮ್ಮ ಜೀವನ ಶೈಲಿಯನ್ನೇ ಪ್ರಸ್ತುತ ಅನುಸರಿಸಿಕೊಂಡಿದ್ದಾರೆ. -ಕಾಂತಿ ಹರೀಶ್, ಮುಖ್ಯ ಶಿಕ್ಷಕಿ

share
ಮುಹಮ್ಮದ್ ಶರೀಫ್
ಮುಹಮ್ಮದ್ ಶರೀಫ್
Next Story
X