Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಲ್ಲ ಭಾರತೀಯ ಬೆಸ್ತರ ಬಿಡುಗಡೆಗೆ...

ಎಲ್ಲ ಭಾರತೀಯ ಬೆಸ್ತರ ಬಿಡುಗಡೆಗೆ ಶ್ರೀಲಂಕಾ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ6 Jan 2016 12:25 AM IST
share

ಕೊಲಂಬೊ, ಜ.5: ಸ್ವಾಗತಾರ್ಹ ಕ್ರಮವೊಂದರಲ್ಲಿ ಶ್ರೀಲಂಕಾ ಸರಕಾರವು ತನ್ನ ವಶದಲ್ಲಿರುವ ಎಲ್ಲ ಭಾರತೀಯ ಮೀನುಗಾರರನ್ನು ಜ.15ರ ‘ತೈ ಪೊಂಗಲ್’ ದಿನಕ್ಕೆ ಮೊದಲು ಬಿಡುಗಡೆಗೊಳಿಸಲು ಸೋಮವಾರ ನಿರ್ಧರಿಸಿದೆ.

ತನ್ನ ನೆರೆಯ ದೇಶದೊಂದಿಗೆ ಸಂಬಂಧವನ್ನು ಸರಿಪಡಿಸಿಕೊಳ್ಳುವ ಆಶಯದಿಂದ ಅದು ಈ ನಿರ್ಧಾರ ಕೈಗೊಂಡಿದೆ. ಉಭಯ ದೇಶಗಳ ಪರಸ್ಪರ ತಿಳುವಳಿಕೆಯೊಂದಿಗೆ ಅದನ್ನು ನಡೆಸಲಾಗುವುದು. ಕೊಲಂಬೊದಲ್ಲಿನ ಭಾರತೀಯ ದೂತಾವಾಸವೂ ಈ ವಿಷಯದಲ್ಲಿ ತಮ್ಮನ್ನು ಸಂಪರ್ಕಿಸಿದೆ. ಭಾರತ ಸರಕಾರವೂ ತನ್ನ ಕಾರಾಗೃಹಗಳಲ್ಲಿರುವ ಶ್ರೀಲಂಕಾದ ಬೆಸ್ತರನ್ನು ಬಿಡುಗಡೆ ಮಾಡಬೇಕೆಂದು ತಾವು ಬಯಸುತ್ತಿದ್ದೇವೆಂದು ಶ್ರೀಲಂಕಾದ ಮೀನುಗಾರಿಕೆ ಹಾಗೂ ಸಾಗರ ಸಂಪನ್ಮೂಲ ಸಚಿವ ಮಹಿಂದ ಅಮರವೀರ ಅಲ್ಲಿನ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಆದಾಗ್ಯೂ, ಭಾರತೀಯ ಮೀನುಗಾರರು ಶ್ರೀಲಂಕಾದ ಜಲವನ್ನು ಕಾನೂನು ಬಾಹಿರವಾಗಿ ಪ್ರವೇಶಿಸುವುದನ್ನು ನಿರುತ್ತೇಜಿಸಲು ಅವರ ದೋಣಿಗಳು ಹಾಗೂ ಟ್ರಾಲರ್‌ಗಳನ್ನು ಬಿಡುಗಡೆ ಮಾಡುವುದಿಲ್ಲ. ತಮ್ಮ ಜಲಗಡಿಯನ್ನು ಅನಧಿಕೃತವಾಗಿ ಉಲ್ಲಂಘಿಸಿ, ತಮ್ಮ ಸಾಗರ ಸಂಪನ್ಮೂಲವನ್ನು ನಾಶಗೊಳಿಸದಂತೆ ತಾವು ಈ ನೀತಿ ನಿರ್ಧಾರವನ್ನು ಕೈಗೊಂಡಿದ್ದೇವೆಂದು ಅವರು ಹೇಳಿದ್ದಾರೆ.
 

ಡಿ.29ರಂದು ಶ್ರೀಲಂಕಾದ ಜಲ ಸೇನೆಯು ತಮಿಳುನಾಡಿಗೆ ಸೇರಿರುವ 29 ಮಂದಿ ಬೆಸ್ತರನ್ನು ಬಂಧಿಸಿತ್ತು. ವಿವಾದ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಜೆ.ಜಯಲಲಿತಾ ಮನವಿ ಮಾಡಿದ್ದರು.

ಮೋದಿಯವರಿಗೆ ಬರೆದಿದ್ದ ಪತ್ರವೊಂದರಲ್ಲಿ ಜಯಾ, 84 ಮಂದಿ ಬೆಸ್ತರು ಹಾಗೂ 62 ಮೀನುಗಾರಿಕೆ ದೋಣಿಗಳು ಶ್ರೀಲಂಕಾದ ವಶದಲ್ಲಿವೆಯೆಂದು ಪ್ರತಿಪಾದಿಸಿದ್ದರು.

ಪಾಕ್ ಜಲಸಂಧಿಯಲ್ಲಿ ತಮ್ಮ ಮೀನುಗಾರರ ಮೇಲೆ ದಾಳಿ ಹಾಗೂ ಅಪಹರಣ ಅವ್ಯಾಹತವಾಗಿ ನಡೆಯುತ್ತಿದೆ. ಅದು ತಮಿಳುನಾಡಿನ ಪ್ರಾಣ ಹಾಗೂ ಜೀವನವನ್ನು ಬಾಧಿಸುತ್ತಿರುವ ಗಂಭೀರ ವಿಷಯವಾಗಿದೆಯೆಂದು ಅವರು ಹೇಳಿದ್ದರು.

ಇದೇವೇಳೆ, ಶ್ರೀಲಂಕಾದ ನೌಕಾಪಡೆಯು ಭಾರತೀಯ ಬೆಸ್ತರ ಮೇಲೆ ಸುಳ್ಳು ಆರೋಪ ಹೊರಿಸುವ ಹಾಗೂ ಅದು ಭಾರತೀಯ ಜಲಪ್ರದೇಶಕ್ಕೆ ನುಸುಳುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಅಮಾಯಕ ಬೆಸ್ತರನ್ನು ಬಂಧಿಸಿ, ಅವರನ್ನು 3 ತಿಂಗಳು ಬಂಧನದಲ್ಲಿರಿಸುವುದು ಮಾನವ ಹಕ್ಕು ಉಲ್ಲಂಘನೆಯಾಗಿದೆ. ಇದು ಶ್ರೀಲಂಕಾ ಅನುಸರಿಸುತ್ತಿರುವ ಅಪಾಯಕಾರಿ ಪ್ರವೃತ್ತಿಯಾಗಿದೆಯೆಂದು ಪಿಎಂಕೆ ನಾಯಕ ಎಸ್.ರಾಮದಾಸ್ ಆರೋಪಿಸಿದ್ದಾರೆ.ಆದರೆ, ಶ್ರೀಲಂಕಾದ ನೌಕಾಪಡೆಯ ವಕ್ತಾರ ಕ್ಯಾ.ಅಲಾವಿ ಅಕ್ರಂ ಈ ಆರೋಪ ಸುಳ್ಳೆಂದು ತಳ್ಳಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X