Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪೇಜಾವರ ಶ್ರೀಗಳ ಪ್ರೇಮವಾದ

ಪೇಜಾವರ ಶ್ರೀಗಳ ಪ್ರೇಮವಾದ

ರಾಜು ವಿ. ಬಂಟಕಲ್, ಸುಳ್ಯರಾಜು ವಿ. ಬಂಟಕಲ್, ಸುಳ್ಯ6 Jan 2016 11:54 PM IST
share

ಮಾನ್ಯರೆ,

ಇತ್ತೀಚೆಗೆ ಪೇಜಾವರ ಶ್ರೀ ಅವರು ‘ತಾನು ಕೋಮುವಾದಿಯಲ್ಲ ಪ್ರೇಮವಾದಿ’ ಎಂದು ಸಾರ್ವಜನಿಕವಾಗಿ ಘೋಷಿಸಿದ್ದಾರೆ. ಪ್ರೇಮ ಎನ್ನುವುದಕ್ಕೆ ಅವರು ನೀಡುವ ಮಾನದಂಡಗಳನ್ನು ಸ್ಪಷ್ಟಪಡಿಸುವುದು ಅತ್ಯಗತ್ಯವಾಗಿದೆ. ಇಲ್ಲವಾದರೆ, ದ್ವೇಷವನ್ನೇ ಪ್ರೀತಿಯೆಂದು, ಪ್ರೀತಿಯನ್ನೇ ದ್ವೇಷವೆಂದು ಜನರು ತಪ್ಪು ತಿಳಿದು, ಅವರ ದಾರಿಯನ್ನು ಅನುಸರಿಸುವ ಅಪಾಯವಿದೆ. ಶೂದ್ರರಿಗೆ ಒಂದು ಪಂಕ್ತಿ, ಬ್ರಾಹ್ಮಣರಿಗೊಂದು ಪಂಕ್ತಿ ಯಾವ ಪ್ರೇಮವನ್ನು ಸಾಬೀತು ಪಡಿಸುತ್ತದೆ ಎನ್ನುವುದನ್ನು ಪೇಜಾವರ ಶ್ರೀಗಳು ಹೇಳಬೇಕು. ಪ್ರೇಮವೆನ್ನುವುದು ಎಲ್ಲ ಭೇದಗಳನ್ನು ಅಳಿಸಿ ಜನರನ್ನು ಒಟ್ಟಾಗಿಸುತ್ತದೆ. ಆದರೆ ಪೇಜಾವರ ಶ್ರೀಗಳ ಪ್ರೇಮ, ಜನರನ್ನು ಪಂಕ್ತಿಯಾಗಿ ವಿಭಜಿಸುತ್ತದೆ.
ಇತ್ತೀಚೆಗೆ ಕೃಷ್ಣ ಮಠದಲ್ಲಿ ಮಡೆಸ್ನಾನವನ್ನು ಅನುಸರಿಸಲಾಯಿತು. ಬ್ರಾಹ್ಮಣರ ಎಂಜಲು ಶ್ರೇಷ್ಠ, ರೋಗನಿವಾರಕ ಎನ್ನುವ ಅಂಶವನ್ನು ಎತ್ತಿ ಹಿಡಿಯುವ ಈ ಆಚರಣೆ ಯಾವ ರೀತಿಯ ಪ್ರೇಮವನ್ನು ಬೋಧಿಸುತ್ತದೆ ಎನ್ನುವುದನ್ನು ಪೇಜಾವರಶ್ರೀಗಳು ಸ್ಪಷ್ಟಪಡಿಸಬೇಕು. ಮಡೆಸ್ನಾನ ಅಜ್ಞಾನ, ಜಾತಿಭೇದ, ವೌಢ್ಯಗಳನ್ನು ಎತ್ತಿ ಹಿಡಿಯುತ್ತದೆ. ಇದಕ್ಕೂ ಪ್ರೇಮಕ್ಕೂ ಏನು ಸಂಬಂಧ? ಬಾಬರಿ ಮಸೀದಿ ಧ್ವಂಸ ಸರಿ ಎನ್ನುವುದು ಯಾವ ಪ್ರೇಮವಾದ? ಇದರಿಂದಾಗಿ ಸಹಸ್ರಾರು ಜನರು ಪ್ರಾಣಕಳೆದುಕೊಂಡರು. ಪ್ರೇಮ ಜನರ ಪ್ರಾಣವನ್ನು ರಕ್ಷಿಸುತ್ತದೆಯೇ ಹೊರತು, ಅವರನ್ನು ಕೊಲ್ಲುವುದಿಲ್ಲ. ಆದರೆ, ಧ್ವಂಸವನ್ನು ಪೇಜಾವರರು ಪ್ರೇಮವೆಂದು ಘೋಷಿಸುತ್ತಾರೆ. ಪ್ರೇಮ ಯಾವತ್ತೂ ಕಟ್ಟುತ್ತದೆಯೇ ಹೊರತು, ಕೆಡಹುವುದಿಲ್ಲ. ಪೇಜಾವರಶ್ರೀಗಳು ಜನರ ಈ ಅನುಮಾನಗಳಿಗೆ ಉತ್ತರಿಸುವರೇ?
- 

share
ರಾಜು ವಿ. ಬಂಟಕಲ್, ಸುಳ್ಯ
ರಾಜು ವಿ. ಬಂಟಕಲ್, ಸುಳ್ಯ
Next Story
X