Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮೊದಲ ಟ್ವೆಂಟಿ-20: ನ್ಯೂಝಿಲೆಂಡ್‌ಗೆ...

ಮೊದಲ ಟ್ವೆಂಟಿ-20: ನ್ಯೂಝಿಲೆಂಡ್‌ಗೆ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ7 Jan 2016 11:50 PM IST
share
ಮೊದಲ ಟ್ವೆಂಟಿ-20: ನ್ಯೂಝಿಲೆಂಡ್‌ಗೆ ರೋಚಕ ಜಯ

ಅಂತಿಮ ಓವರ್‌ನಲ್ಲಿ ಎಡವಿದ ಶ್ರೀಲಂಕಾ

ವೆಲ್ಲಿಂಗ್ಟನ್, ಜ.7: ಮಾರ್ಟಿನ್ ಗಪ್ಟಿಲ್(58 ರನ್) ಹಾಗೂ ಕೇನ್ ವಿಲಿಯಮ್ಸನ್ (53 ರನ್) ಅರ್ಧಶತಕದ ಬೆಂಬಲದಿಂದ ನ್ಯೂಝಿಲೆಂಡ್ ತಂಡ ಗುರುವಾರ ಇಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯವನ್ನು 3 ರನ್‌ನಿಂದ ಗೆದ್ದುಕೊಂಡಿದೆ.

ಟಾಸ್ ಜಯಿಸಿದ ಶ್ರೀಲಂಕಾ ತಂಡ ನ್ಯೂಝಿಲೆಂಡ್‌ನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಮೊದಲ ವಿಕೆಟ್‌ಗೆ 101 ರನ್ ಜೊತೆಯಾಟ ನಡೆಸಿದ ಗಪ್ಟಿಲ್(58 ರನ್, 34 ಎಸೆತ) ಹಾಗೂ ವಿಲಿಯಮ್ಸನ್(53 ರನ್, 42 ಎಸೆತ) ಕಿವೀಸ್ 4 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಲು ನೆರವಾದರು.

ಗೆಲ್ಲಲು ಕಠಿಣ ಗುರಿ ಪಡೆದಿದ್ದ ಶ್ರೀಲಂಕಾ 9 ವಿಕೆಟ್‌ಗಳ ನಷ್ಟಕ್ಕೆ 179 ರನ್ ಗಳಿಸಿ ಗೆಲುವಿನ ಹೊಸ್ತಿಲಲ್ಲಿ ಎಡವಿತು. ವಿಶ್ವದ ಅಗ್ರ ರ್ಯಾಂಕಿನ ಟ್ವೆಂಟಿ-20 ತಂಡ ಶ್ರೀಲಂಕಾ ಐದನೆ ಓವರ್‌ನಲ್ಲಿ 42 ರನ್ ಗಳಿಸುವಷ್ಟರಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು.

ತಿಲಕರತ್ನೆ ದಿಲ್ಶನ್(0), ದಿನೇಶ್ ಚಾಂಡಿಮಾಲ್(7), ಶೆಹಾನ್ ಜಯಸೂರ್ಯ(4) ಹಾಗೂ ಆ್ಯಂಜೆಲೊ ಮ್ಯಾಥ್ಯೂಸ್(4) ಬೇಗನೆ ಪೆವಿಲಿಯನ್ ಸೇರಿದರು.

ದನುಶ್ಕಾ ಗುಣತಿಲಕ(46) ಹಾಗೂ ಮಲಿಂದ ಸಿರಿವರ್ಧನ(42) ಶ್ರೀಲಂಕಾವನ್ನು ಗೆಲುವಿನತ್ತ ಕೊಂಡೊಯ್ಯಲು ಯತ್ನಿಸಿದರು. ಲಂಕೆಗೆ ಅಂತಿಮ 5 ಓವರ್‌ಗಳಲ್ಲಿ 4 ವಿಕೆಟ್ ನೆರವಿನಿಂದ 44 ರನ್ ಅಗತ್ಯವಿತ್ತು. ಸಿರಿವರ್ಧನ 17ನೆ ಓವರ್‌ನಲ್ಲಿ ಔಟಾದಾಗ ಶ್ರೀಲಂಕಾ 153 ರನ್‌ಗೆ 7ನೆ ವಿಕೆಟ್ ಕಳೆದುಕೊಂಡಿತು. ಆಗ ಚಾಮರ ಕಪುಗಡೆರಾ ಹಾಗೂ ನುವಾನ್ ಕುಲಸೇಕರಗೆ ತಂಡವನ್ನು ಗೆಲುವಿನ ದಡ ಸೇರಿಸಬೇಕಾದ ಒತ್ತಡ ಎದುರಾಯಿತು.

  ಶ್ರೀಲಂಕಾದ ಗೆಲುವಿಗೆ ಕೊನೆಯ ಓವರ್‌ನಲ್ಲಿ 13 ರನ್ ಅಗತ್ಯವಿತ್ತು. ನಾಯಕ ವಿಲಿಯಮ್ಸನ್ ಕಳೆದ ವರ್ಷ ವಿಶ್ವಕಪ್‌ನ ಹೀರೋ ಗ್ರಾಂಟ್ ಎಲಿಯಟ್‌ಗೆ ಚೆಂಡನ್ನು ನೀಡಿದರು. ಮೊದಲ ಎರಡು ಎಸೆತಗಳಲ್ಲಿ 3 ರನ್ ನೀಡಿದ ಎಲಿಯಟ್ ಅವರು 3ನೆ ಎಸೆತದಲ್ಲಿ ಕುಲಸೇಕರ ವಿಕೆಟ್ ಕಬಳಿಸಿದರು. 4ನೆ ಎಸೆತದಲ್ಲಿ ಕಪುಗಡೆರಾ ರನೌಟ್ ಆದರು. ಆಗ ಒತ್ತಡಕ್ಕೆ ಸಿಲುಕಿದ ಲಂಕಾ ಉಳಿದ ಎರಡು ಎಸೆತಗಳಲ್ಲಿ 5 ರನ್ ಗಳಿಸಿದರೂ ಕೇವಲ 3 ರನ್‌ನಿಂದ ಸೋಲೊಪ್ಪಿಕೊಂಡಿತು.

ಇದಕ್ಕೆ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಝಿಲೆಂಡ್‌ನ ಪರ ಗಪ್ಟಿಲ್ ಏಳನೆ ಟ್ವೆಂಟಿ-20 ಅರ್ಧಶತಕ ಸಿಡಿಸಿ ಶ್ರೇಷ್ಠ ಫಾರ್ಮ್ ಮುಂದುವರಿಸಿದರು. ನುವಾನ್ ಕಪುಗಡೆರಾ ನೇರ ಎಸೆತದಲ್ಲಿ ರನೌಟಾದ ಗಪ್ಟಿಲ್ 34 ಎಸೆತಗಳಲ್ಲಿ ತಲಾ ನಾಲ್ಕು ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದರು.

 ಮೂರನೆ ಟ್ವೆಂಟಿ-20 ಅರ್ಧಶತಕ ಸಿಡಿಸಿದ ವಿಲಿಯಮ್ಸನ್ 42 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಿಡಿಸಿ ಕುಲಸೇಖರಗೆ ವಿಕೆಟ್ ಒಪ್ಪಿಸಿದರು.

ಸಂಕ್ಷಿಪ್ತ ಸ್ಕೋರ್

ನ್ಯೂಝಿಲೆಂಡ್: 20 ಓವರ್‌ಗಳಲ್ಲಿ 182/4

(ಗಪ್ಟಿಲ್ 58, ವಿಲಿಯಮ್ಸನ್ 53, ಮುನ್ರೊ 36, ಟೇಲರ್ ಔಟಾಗದೆ 22, ಕುಲಸೇಕರ 2-26)

ಶ್ರೀಲಂಕಾ: 20 ಓವರ್‌ಗಳಲ್ಲಿ 179/9

(ಗುಣತಿಲಕ 46, ಸಿರಿವರ್ಧನ 42, ಪೆರೇರ 28, ಹೆನ್ರಿ 3-44, ಬೌಲ್ಟ್ 3-21)

ಪಂದ್ಯಶ್ರೇಷ್ಠ: ಟ್ರೆಂಟ್ ಬೌಲ್ಟ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X