Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮರೆಯಾದ ಮುಫ್ತಿ

ಮರೆಯಾದ ಮುಫ್ತಿ

ವಾರ್ತಾಭಾರತಿವಾರ್ತಾಭಾರತಿ7 Jan 2016 11:55 PM IST
share
ಮರೆಯಾದ ಮುಫ್ತಿ

ಹೊಸದಿಲ್ಲಿ, ಜ.7: ರಾಜಕೀಯವಾಗಿ ಪ್ರಭಾವಶಾಲಿಯಾಗಿರುವ ಅಬ್ದುಲ್ಲಾ ಕುಟುಂಬವನ್ನು ಎದುರು ಹಾಕಿಕೊಂಡು ಕುಶಲ ರಾಜಕಾರಣಿಯಾಗಿ ರೂಪುಗೊಂಡು ದೇಶದ ಮೊದಲ ಮುಸ್ಲಿಮ್ ಗೃಹಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮುಹಮ್ಮದ್ ಸಯೀದ್(79) ಅವರು ಗುರುವಾರ ದೇಹದಲ್ಲಿನ ಪ್ಲೇಟ್‌ಲೆಟ್ ಕಣಗಳು ಅಪಾಯಕಾರಿ ಮಟ್ಟಕ್ಕೆ ಕುಸಿದ ಬಳಿಕ ಇಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.


 ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಕಳೆದ ವರ್ಷದ ಮಾ.1ರಂದು ಅಧಿಕಾರ ವಹಿಸಿಕೊಂಡಿದ್ದ ಸಯೀದ್‌ಗೆ ಕಳೆದ ಕೆಲವು ದಿನಗಳಿಂದ ಜೀವರಕ್ಷಕ ಸಾಧನವನ್ನು ಅಳವಡಿಸಲಾಗಿದ್ದು, ಇಂದು ಬೆಳಗ್ಗೆ ಕೊನೆಯುಸಿರೆಳೆದರು.


ಸಯೀದ್‌ರನ್ನು ಡಿ.24ರಂದು ವಿಶೇಷ ವಿಮಾನದಲ್ಲಿ ದಿಲ್ಲಿಗೆ ಕರೆತಂದು ಏಮ್ಸ್‌ಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಪ್ರಾಣಾಂತಿಕ ಸೋಂಕು ಮತ್ತು ನ್ಯುಮೋನಿಯಾ ಇರುವುದು ಪತ್ತೆಯಾಗಿತ್ತು. ಚಿಕಿತ್ಸೆಯ ಅವಧಿಯಲ್ಲಿ ಅವರ ಪ್ಲೇಟ್‌ಲೆಟ್‌ಗಳ ಪ್ರಮಾಣವೂ ಅಪಾಯಕಾರಿ ಮಟ್ಟಕ್ಕೆ ಕುಸಿದಿತ್ತು ಎಂದು ವೈದ್ಯರು ತಿಳಿಸಿದರು.


ಅವರು ಅಧಿಕಾರದಲ್ಲಿ ಇರುವಾಗಲೇ ನಿಧನರಾದ ಜಮ್ಮ-ಕಾಶ್ಮೀರದ ಎರಡನೆ ಮುಖ್ಯಮಂತ್ರಿಯಾಗಿದ್ದಾರೆ. ಇದಕ್ಕೂ ಮುನ್ನ 1982,ಸೆ.8ರಂದು ಆಗಿನ ಮುಖ್ಯಮಂತ್ರಿ ಶೇಖ್ ಮುಹಮ್ಮದ್ ಅಬ್ದುಲ್ಲಾ ನಿಧನರಾಗಿದ್ದರು.


ಸಯೀದ್‌ರ ಪುತ್ರಿ 56ರ ಹರೆಯದ ಮೆಹಬೂಬಾ ಅವರು ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ. ಪಿಡಿಪಿ ನಾಯಕರು ಅವರ ಬೆಂಬಲಕ್ಕೆ ನಿಂತಿದ್ದಾರಾದರೂ ಇದಕ್ಕೆ ಬಿಜೆಪಿಯ ಅನುಮತಿ ಅಗತ್ಯವಾಗಿದೆ.


ಸಯೀದ್ ಪತ್ನಿ,ಮೂವರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.


ಜಮ್ಮು-ಕಾಶ್ಮೀರ ಸರಕಾರವು ಗುರುವಾರ ರಜೆಯನ್ನು ಸಾರಿದ್ದು, ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಧ್ವಜಗಳು ಅರ್ಧ ಮಟ್ಟದಲ್ಲಿ ಹಾರಾಡಲಿವೆ.


ಸಯೀದ್‌ರ ಪಾರ್ಥಿವ ಶರೀರವನ್ನು ಮಧ್ಯಾಹ್ನದ ಬಳಿಕ ಶ್ರೀನಗರಕ್ಕೆ ಒಯ್ದು ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಅವರ ಗುಪ್ಕರ್ ನಿವಾಸದಲ್ಲಿ ಇರಿಸಲಾಗಿತ್ತು.


ಅವರ ಹುಟ್ಟೂರು, ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾದಲ್ಲಿ ಪೂರ್ವಜರ ಸಮಾಧಿ ಸ್ಥಳದಲ್ಲಿ ಅಂತ್ಯಸಂಸ್ಕಾರ ನಡೆಯಿತು ತಿಳಿಸಿವೆ.
 
ಸಯೀದ್ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿಯಾಗಿ ಕಳೆದ ವರ್ಷದ ಮಾ.1ರಂದು ಗದ್ದುಗೆಯನ್ನೇರಿದ್ದರು. 87 ಸದಸ್ಯ ಬಲದ ಜಮ್ಮು-ಕಾಶ್ಮೀರ ವಿಧಾನ ಸಭೆಯಲ್ಲಿ ಪಿಡಿಪಿ 28 ಮತ್ತು ಬಿಜೆಪಿ 25 ಸ್ಥಾನಗಳನ್ನು ಗೆದ್ದಿದ್ದರೆ,ನ್ಯಾಷನಲ್ ಕಾನ್ಫ್‌ರೆನ್ಸ್ 15 ಮತ್ತು ಕಾಂಗ್ರೆಸ್ 12 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X