Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಗಿಝಾ ಪಿರಮಿಡ್ ಬಳಿ ಗುಂಡಿನ ದಾಳಿ

ಗಿಝಾ ಪಿರಮಿಡ್ ಬಳಿ ಗುಂಡಿನ ದಾಳಿ

ವಾರ್ತಾಭಾರತಿವಾರ್ತಾಭಾರತಿ8 Jan 2016 12:19 AM IST
share

ಕೈರೊ, ಜ.7: ಈಜಿಪ್ಟ್‌ನಲ್ಲಿ ಗಿಝಾ ಪಿರಮಿಡ್‌ಗಳು ಹಾಗೂ ಹೊಟೇಲೊಂದರ ಸಮೀಪ ಗುರುವಾರ ಮೋಟಾರ್ ಸೈಕಲ್‌ನಲ್ಲಿ ಬಂದ ಅಜ್ಞಾತ ಬಂದೂಕುಧಾರಿಗಳು ಪ್ರವಾಸಿಗರ ಬಸ್ಸೊಂದನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿರುವುದಾಗಿ ವರದಿಯಾಗಿದೆ.

ಅಲ್ ಹರಂ ರಸ್ತೆಯಲ್ಲಿರುವ ಹೊಟೇಲ್‌ಗೆ ಪ್ರವಾಸಿಗರು ಪ್ರವೇಶಿಸುತ್ತಿರುವುದನ್ನು ಗುರಿಯಾಗಿಸಿ ದಾಳಿ ನಡೆಸಿರುವುದಾಗಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಾವುನೋವಿನ ಬಗ್ಗೆ ತಕ್ಷಣಕ್ಕೆ ಯಾವುದೇ ವರದಿಯಾಗಿಲ್ಲವೆನ್ನಲಾಗಿದೆ. ದಾಳಿಯಿಂದ ಬಸ್ ಹಾಗೂ ಹೊಟೇಲ್‌ನ ಗೋಡೆಗೆ ಸ್ವಲ್ಪ ಮಟ್ಟಿನ ಹಾನಿಯುಂಟಾಗಿದೆ. ದಾಳಿಕಾರರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧಕಾರ್ಯ ನಡೆಸಿವೆ ಎಂದು ಮೂಲಗಳು ತಿಳಿಸಿವೆ.

  ಈಜಿಪ್ಟ್‌ನ ಕಾಪ್ಟಿಕ್ ಆರ್ಥೊಡಾಕ್ಸ್ ಕ್ರಿಶ್ಚಿಯನ್ ಸಮುದಾಯವು ಕ್ರಿಸ್‌ಮಸ್ ಆಚರಿಸುತ್ತಿದ್ದ ಸಂದರ್ಭದಲ್ಲೇ ಪ್ರವಾಸಿಗರ ಮೇಲಿನ ಈ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ. ಹುಸ್ನಿ ಮುಬಾರಕ್ 2011ರ ಜನವರಿಯಲ್ಲಿ ಅಧ್ಯಕ್ಷ ಪದವಿಯಿಂದ ಉಚ್ಚಾಟನೆಗೊಂಡ ಬಳಿಕ ಈಜಿಪ್ಟ್ ನಲ್ಲಿ ಹಲವು ಹಿಂಸಾತ್ಮಕ ದಾಳಿಗಳು ಸಂಭವಿಸಿದ್ದು, ಪ್ರಮುಖವಾಗಿ ಸಿನಾಯ್ ಪ್ರಾಂತದಲ್ಲಿ ಬಂಡುಕೋರರ ವಿರುದ್ಧ ಭದ್ರತಾ ಪಡೆಗಳು ಈಗಲೂ ಹೋರಾಟದಲ್ಲಿ ನಿರತವಾಗಿವೆ.

ಹುಸ್ನಿ ಮುಬಾರಕ್ 2013ರಲ್ಲಿ ಅಧ್ಯಕ್ಷ ಪದವಿಯಿಂದ ಉಚ್ಚಾಟಿಸಲ್ಪಟ್ಟ ಬಳಿಕ ಈಜಿಪ್ಟ್‌ನಲ್ಲಿ ಪೊಲೀಸ್ ಠಾಣೆಗಳು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಬಂಡುಕೋರರು ನಡೆಸುತ್ತಿರುವ ದಾಳಿಗಳ ಪ್ರಮಾಣ ಅಧಿಕವಾಗಿದೆ.

ಉ.ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆಯಿಂದ ಪಾಕ್‌ನ ಪರಮಾಣು ಪ್ರಸರಣ ದಾಖಲೆ ಬಹಿರಂಗ ವಾಷಿಂಗ್ಟನ್, ಜ.7: ಪಾಕಿಸ್ತಾನದ ಅಣ್ವಸ್ತ್ರ ಪ್ರಸರಣ ಇತಿಹಾಸ ಹಾಗೂ ಪರಮಾಣು ಅಸ್ತ್ರಗಳನ್ನು ಹೊಂದುವಲ್ಲಿ ನೆರವಾಗಲು ಉತ್ತರಕೊರಿಯದಂತಹ ರಾಷ್ಟ್ರದೊಂದಿಗೆ ಸಂಬಂಧ ಹೊಂದಿದ್ದ ಬಗ್ಗೆ ತಿಂಗಳೊಂದರ ಹಿಂದೆಯೇ ಅಮೆರಿಕದ ಹಿರಿಯ ಸಂಸದರು ಹಾಗೂ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದರು ಎಂದು ವರದಿಯೊಂದು ತಿಳಿಸಿದೆ.

ಉತ್ತರ ಕೊರಿಯವು ಯಶಸ್ವಿ ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸುವುದಕ್ಕೆ ಮುಂಚೆಯೇ ಅಮೆರಿಕದ ಸಂಸದರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.

ಪಾಕಿಸ್ತಾನದೊಂದಿಗೆ ನಾಗರಿಕ ಪರಮಾಣು ಒಪ್ಪಂದ ಏರ್ಪಡಿಸುವ ಪ್ರಸ್ತಾಪವೊಂದು ಚರ್ಚೆಗೆ ಬಂದಿದ್ದ ವೇಳೆ ಅಮೆರಿಕದ ಸಂಸದರು ಅದನ್ನು ವಿರೋಧಿಸಿದ್ದರು.

 ಉತ್ತರ ಕೊರಿಯ ಹಾಗೂ ಲಿಬಿಯದಂತಹ ರಾಷ್ಟ್ರಗಳಿಗೆ ಪಾಕಿಸ್ತಾನದ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಈ ಹಿಂದೆ ಸೂಕ್ಷ್ಮ ಪರಮಾಣು ತಂತ್ರಜ್ಞಾನಗಳನ್ನು ವಿನಿಮಯ ಮಾಡಿಕೊಂಡಿದ್ದರೆಂಬ ಕಾರಣಕ್ಕೆ ಪಾಕ್‌ನೊಂದಿಗೆ ಪ್ರಸ್ತಾಪಿತ ನಾಗರಿಕ ಅಣು ಒಪ್ಪಂದಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದರು.

ಪಾಕ್‌ನ ಅಣುವಿಜ್ಞಾನಿ ಎ.ಕ್ಯೂ.ಖಾನ್ ಕಾರ್ಯಜಾಲವು ಜಗತ್ತಿನ ಬಹುತೇಕ ಅಸ್ಥಿರ ರಾಷ್ಟ್ರಗಳಿಗೆ ಸೂಕ್ಷ್ಮ ಪರಮಾಣು ತಂತ್ರಜ್ಞಾನಗಳನ್ನು ಮಾರಾಟ ಮಾಡಿತ್ತೆಂದು ನಂಬಲಾಗಿದೆ.

ಹೆಚ್ಚಿನ ನಿರ್ಬಂಧಕ್ಕೆ ಅಮೆರಿಕ ಪರಿಶೀಲನೆ ಹೈಡ್ರೋಜನ್ ಬಾಂಬ್ ಪರೀಕ್ಷೆ ನಡೆಸಿರುವ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಟ್ಟುನಿಟ್ಟಿನ ಕ್ರಮಗಳ ಜೊತೆಗೆ ಉತ್ತರ ಕೊರಿಯದ ವಿರುದ್ಧ ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಅಮೆರಿಕ ಪರಿಶೀಲನೆ ನಡೆಸಿದೆ. ತಾನು ನಡೆಸುತ್ತಿರುವ ಹೈಡ್ರೋಜನ್ ಬಾಂಬ್ ಪರೀಕ್ಷೆಯು ಅಮೆರಿಕದ ಉದ್ಧಟತನದ ವಿರುದ್ಧದ ಪ್ರತಿಕ್ರಿಯೆಯಾಗಿದೆ ಎಂದು ಉತ್ತರಕೊರಿಯ ನೀಡಿರುವ ಹೇಳಿಕೆಯನ್ನು ಅದು ಉಲ್ಲೇಖಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X