60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ‘ದಂತ ಭಾಗ್ಯ’ ವೆನ್ಲಾಕ್ನಲ್ಲಿ ತಪಾಸಣಾ ಶಿಬಿರ ಉದ್ಘಾಟನೆ

ಮಂಗಳೂರು: ರಾಜ್ಯ ಸರಕಾರವು ಜಾರಿಗೆ ತಂದಿರುವ ದಂತ ಭಾಗ್ಯ ಯೋಜನೆಯಡಿ 60 ವರ್ಷ ಮೇಲ್ಪಟ್ಟ ಬಿಪಿಎಲ್ ಪಡಿತರ ಚೀಟಿದಾರ ಹಿರಿಯ ನಾಗರಿಕರಿಗೆ ಉಚಿತ ದಂತ ಪಂಕ್ತಿಯನ್ನು ನೀಡುವ ನಿಟ್ಟಿನಲ್ಲಿ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉಚಿತ ದಂತ ತಪಾಸಣಾ ಶಿಬಿರ ಇಂದು ಉದ್ಘಾಟನೆಗೊಂಡಿತು.
ಯೆನೆಪೋಯ ದಂತ ಕಾಲೇಜಿನ ಸಹಭಾಗಿತ್ವದಲ್ಲಿ ನಡೆಯಲಿರುವ ಶಿಬಿರದಲ್ಲಿ ಪಾಲ್ಗೊಳ್ಳುತ್ತಿರುವ ಹಿರಿಯ ನಾಗರಿಕರಾದ ಲೂಸಿ ಬೆಳ್ತಂಗಡಿ ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಕರ್ನಾಟಕ ರಾಜ್ಯದ ಬಾಯಿ ಆರೋಗ್ಯ ನೀತಿ ಸಮಿತಿಯ ಅಧ್ಯಕ್ಷ ಡಾ. ಗಣೇಶ್ ಶೆಣೈ ಪಂಚಮಾಲ್, ನೋಡಲ್ ಅಧಿಕಾರಿ ಡಾ. ಲವೀನಾ, ಆರ್ಎಂಒ ಡಾ. ಜೂಲಿಯಾನ ಸಲ್ಡಾನಾ, ಕಾರ್ಯಕ್ರಮ ಅಧಿಕಾರಿ ಡಾ. ನವೀನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್, ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕಿ ಡಾ. ರಾಜೇಶ್ವರಿ ದೇವಿ ಉಪಸ್ಥಿತರಿದ್ದರು.
Next Story





