Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಯಭಾರ ಕಚೇರಿ ಮೇಲೆ ಸೌದಿ ದಾಳಿ: ಇರಾನ್...

ರಾಯಭಾರ ಕಚೇರಿ ಮೇಲೆ ಸೌದಿ ದಾಳಿ: ಇರಾನ್ ಆರೋಪ; ಉದ್ವಿಗ್ನತೆ ಮತ್ತೆ ತಾರಕಕ್ಕೆ

ವಾರ್ತಾಭಾರತಿವಾರ್ತಾಭಾರತಿ8 Jan 2016 11:37 PM IST
share

ಟೆಹರಾನ್, ಜ. 8: ಯಮನ್‌ನಲ್ಲಿರುವ ತನ್ನ ರಾಯಭಾರ ಕಚೇರಿಯ ಮೇಲೆ ಸೌದಿ ಅರೇಬಿಯದ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿವೆ ಎಂಬುದಾಗಿ ಇರಾನ್ ಗುರುವಾರ ಆರೋಪಿಸಿದ್ದು, ಉಭಯ ದೇಶಗಳ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದೆ. ಈ ದಾಳಿಯ ವಿರುದ್ಧ ತಾನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ದೂರು ನೀಡುವುದಾಗಿ ಅದು ಹೇಳಿದೆ.

ಯಮನ್‌ನಲ್ಲಿ ಇರಾನ್ ಬೆಂಬಲಿತ ಶಿಯಾ ಬಂಡುಕೋರರ ವಿರುದ್ಧ ಯುದ್ಧ ನಡೆಸುತ್ತಿರುವ ಸೌದಿ ಅರೇಬಿಯ ನೇತೃತ್ವದ ಮೈತ್ರಿಕೂಟ ಇರಾನ್‌ನ ಆರೋಪವನ್ನು ನಿರಾಕರಿಸಿದೆ. ಇರಾನ್ ರಾಯಭಾರ ಕಚೇರಿಯ ಸಮೀಪ ಯಾವುದೇ ದಾಳಿ ನಡೆಸಿಲ್ಲ ಎಂದು ಅದು ಹೇಳಿದೆ.

ಅದೇ ವೇಳೆ, ಸುನ್ನಿ ಪ್ರಾಬಲ್ಯದ ಸೌದಿ ಅರೇಬಿಯದಿಂದ ಮಾಡಿಕೊಳ್ಳಲಾಗುವ ಯಾವುದೇ ಆಮದಿನ ಮೇಲೆ ಶಿಯಾ ಪ್ರಾಬಲ್ಯದ ಇರಾನ್ ನಿಷೇಧ ವಿಧಿಸಿದೆ.

ಇತ್ತೀಚೆಗೆ ಸೌದಿ ಅರೇಬಿಯದಲ್ಲಿ ಪ್ರಮುಖ ಶಿಯಾ ಧಾರ್ಮಿಕ ಮುಖಂಡರೊಬ್ಬರಿಗೆ ಮರಣ ದಂಡನೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನಕಾರರು ಸೌದಿ ಅರೇಬಿಯ ರಾಯಭಾರ ಕಚೇರಿಗೆ ಬೆಂಕಿ ಹಚ್ಚಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಸೌದಿ ಅರೇಬಿಯ ಇರಾನ್‌ನೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿತ್ತು. ಯಮನ್‌ನ ಬಂಡುಕೋರರ ನಿಯಂತ್ರಣದಲ್ಲಿರುವ ರಾಜಧಾನಿ ಸನಾದ ಮೇಲೆ ನಡೆಸಲಾದ ಬಾಂಬ್ ದಾಳಿಯಲ್ಲಿ ತನ್ನ ರಾಯಭಾರ ಕಚೇರಿಯ ಹಲವಾರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಇರಾನ್ ಹೇಳಿದೆ.

‘‘ಇದು ಸೌದಿ ಅರೇಬಿಯ ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯವಾಗಿದ್ದು, ದೂತಾವಾಸಗಳಿಗೆ ರಕ್ಷಣೆ ನೀಡುವ ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗಿದೆ’’ ಎಂದು ವಿದೇಶ ಸಚಿವಾಲಯದ ವಕ್ತಾರ ಹುಸೈನ್ ಜಬ್ಬರ್ ಅನ್ಸಾರಿ ಹೇಳಿರುವುದಾಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

‘‘ಈ ವಿಷಯದಲ್ಲಿ ತನ್ನ ಹಿತಾಸಕ್ತಿಗಳನ್ನು ಕಾಯ್ದುಕೊಳ್ಳುವ ಹಕ್ಕನ್ನು ಇರಾನ್ ಕಾದಿರಿಸಿಕೊಂಡಿದೆ’’ ಎಂದು ಅದು ಹೇಳಿದೆ.

ಬಳಿಕ, ಹೇಳಿಕೆಯೊಂದನ್ನು ನೀಡಿದ ಇರಾನ್‌ನ ಉಪ ವಿದೇಶ ಸಚಿವ ಹುಸೈನ್ ಅಮೀರ್ ಅಬ್ದುಲ್ಲಾ, ‘‘ಸನಾದ ಮೇಲೆ ಸೌದಿ ಅರೇಬಿಯ ವಾಯು ದಾಳಿ ನಡೆಸಿದ ವೇಳೆ ಒಂದು ರಾಕೆಟ್ ನಮ್ಮ ರಾಯಭಾರ ಕಚೇರಿಯ ಬಳಿ ಬಿದ್ದಿದೆ ಹಾಗೂ ದುರದೃಷ್ಟವಶಾತ್, ನಮ್ಮ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ’’ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X