Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೂಡಿಕೆದಾರರಿಗೆ 45 ಸಾವಿರ ಕೋಟಿ ರೂ....

ಹೂಡಿಕೆದಾರರಿಗೆ 45 ಸಾವಿರ ಕೋಟಿ ರೂ. ವಂಚನೆ: ಪರ್ಲ್ಸ್ ಗ್ರೂಪ್ ವರಿಷ್ಠನ ಬಂಧನ

ವಾರ್ತಾಭಾರತಿವಾರ್ತಾಭಾರತಿ8 Jan 2016 11:42 PM IST
share

 ಹೊಸದಿಲ್ಲಿ, ಜ.8: 5.5 ಕೋಟಿಗೂ ಅಧಿಕ ಹೂಡಿಕೆದಾರರು ವಂಚನೆಗೊಳಗಾದ 45 ಸಾವಿರ ಕೋಟಿ ರೂ.ಗಳ ಬೃಹತ್ ಗೋಲ್‌ಮಾಲ್ ಹಗರಣಕ್ಕೆ ಸಂಬಂಧಿಸಿ, ಪರ್ಲ್ಸ್ ಗ್ರೂಪ್‌ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ನಿರ್ಮಲ್ ಸಿಂಗ್ ಭಾಂಗೂ ಹಾಗೂ ಇತರ ಮೂವರು ಉನ್ನತ ಅಧಿಕಾರಿಗಳನ್ನು ಸಿಬಿಐ ಶುಕ್ರವಾರ ಬಂಧಿಸಿದೆ.

 ಪರ್ಲ್ಸ್ ಗ್ರೂಫ್ ಆಫ್ ಫೈನಾನ್ಸ್ (ಪಿಜಿಎಫ್ಢ್) ಲಿಮಿಟೆಡ್‌ನ ಸಿಎಂಡಿ ಭಾಂಗೂ ಜೊತೆ, ಪಿಎಸಿಎಲ್‌ನ ಪ್ರವರ್ತಕ ಹಾಗೂ ಆಡಳಿತ ನಿರ್ದೇಶಕ ಸುಖದೇವ್ ಸಿಂಗ್, ಕಾರ್ಯನಿರ್ವಹಣಾ ನಿರ್ದೇಶಕ (ವಿತ್ತ) ಗುರ್ಮಿತ್ ಸಿಂಗ್ ಮತ್ತು ಕಾರ್ಯಕಾರಿ ನಿರ್ದೇಶಕ ಸುಬ್ರತಾ ಭಟ್ಟಾಚಾರ್ಯ ಅವರನ್ನು ಪಿಜಿಎಫ್/ಪಿಎಸಿಎಲ್ , ಸ್ಕೀಮ್ ವಂಚನೆ ಹಗರಣಕ್ಕೆ ಸಂಬಂಧಿಸಿ ಬಂಧಿಸಲಾಗಿದೆಯೆಂದು ಸಿಬಿಐನ ಪತ್ರಿಕಾ ಮಾಹಿತಿ ಅಧಿಕಾರಿ ಆರ್.ಕೆ.ಗೌರ್ ತಿಳಿಸಿದ್ದಾರೆ. ಹೊಸದಿಲ್ಲಿಯಲ್ಲಿಯ ಸಿಬಿಐ ಮುಖ್ಯ ಕಾರ್ಯಾಲಯದಲ್ಲಿ ನಾಲ್ವರೂ ಆರೋಪಿಗಳನ್ನು ವಿಸ್ತೃತವಾಗಿ ಪ್ರಶ್ನಿಸಿದ ಬಳಿಕ ಅವರನ್ನು ಬಂಧಿಸಲಾಯಿತೆಂದು ಅವರು ಹೇಳಿದ್ದಾರೆ. ವಿಚಾರಣೆಯ ವೇಳೆ, ಆರೋಪಿಗಳು ಅಸಮಂಜಸವಾದ ಹೇಳಿಕೆಗಳನ್ನು ನೀಡತೊಡಗಿದರು ಹಾಗೂ ಅಧಿಕಾರಿಗಳ ಜೊತೆ ಸಹಕರಿಸದಿದ್ದುದರಿಂದ ಅವರನ್ನು ಬಂಧಿಸಲಾಯಿತೆಂದು ಸಿಬಿಐ ಮೂಲಗಳು ತಿಳಿಸಿವೆ

 ಪಿಜಿಎಫ್/ಪಿಎಸಿಎಲ್ ಹೂಡಿಕೆ ಸ್ಕೀಮ್‌ನಡಿ, ಪಿಜಿಎಫ್ ಗ್ರೂಪ್, ದೇಶಾದ್ಯಂತ 5.5 ಕೋಟಿ ಹೂಡಿಕೆದಾರರಿಂದ 45 ಸಾವಿರ ಕೋಟಿ ರೂ. ಸಂಗ್ರಹಿಸಿತ್ತು. ದೊಡ್ಡ ಮೊತ್ತದ ಲಾಭವನ್ನು ನೀಡುವ ಆಮಿಷದೊಂದಿಗೆ, ಸಂಸ್ಥೆಯು ಹೂಡಿಕೆದಾರರಿಗೆ ವಂಚಿಸಿದೆಯೆಂಬು ಸಿಬಿಐ ಆರೋಪಿಸಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 120ಬಿ (ಕ್ರಿಮಿನಲ್ ಸಂಚು) ಹಾಗೂ 420 (ವಂಚನೆ) ಅನ್ವಯ ಪ್ರಕರಣಗಳನ್ನು ದಾಖಲಿಸಲಾಗಿದೆಯೆಂದು ಗೌರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X