Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಒಡಿಶಾ ವಿರುದ್ಧ ಕರ್ನಾಟಕ ತಂಡಕ್ಕೆ ಜಯ

ಒಡಿಶಾ ವಿರುದ್ಧ ಕರ್ನಾಟಕ ತಂಡಕ್ಕೆ ಜಯ

ವಾರ್ತಾಭಾರತಿವಾರ್ತಾಭಾರತಿ8 Jan 2016 11:46 PM IST
share

ಸೈಯದ್ ಮುಶ್ತಾಕ್ ಅಲಿ ಟ್ರೋಫಿ

 ಕಟಕ್, ಜ.8: ಇಲ್ಲಿ ನಡೆದ ಸೈಯದ್ ಮುಶ್ತಾಕ್ ಅಲಿ ಟ್ರೋಫಿ ‘ಡಿ’ ಗ್ರೂಪ್‌ನ ಪಂದ್ಯದಲ್ಲಿ ಕರ್ನಾಟಕ ಒಡಿಶಾ ವಿರುದ್ಧ 6 ವಿಕೆಟ್‌ಗಳ ಜಯ ಗಳಿಸಿದೆ.

ಬಾರಬತಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 103 ರನ್‌ಗಳ ಸವಾಲನ್ನು ಪಡೆದ ಕರ್ನಾಟಕ ತಂಡ ಇನ್ನೂ 13 ಎಸೆತಗಳು ಬಾಕಿ ಇರುವಾಗಲೇ 4 ವಿಕೆಟ್ ನಷ್ಟದಲ್ಲಿ 106 ರನ್ ಗಳಿಸಿತು.

ರಾಬಿನ್ ಉತ್ತಪ್ಪ (48) ಮತ್ತು ಸ್ಟುವರ್ಟ್ ಬಿನ್ನಿ (ಔಟಾಗದೆ 32) ಕರ್ನಾಟಕ ತಂಡಕ್ಕೆ ಗೆಲುವಿಗೆ ದೊಡ್ಡ ಕೊಡುಗೆ ನೀಡಿದರು.

ಕರ್ನಾಟಕ ತಂಡದ ಅಗ್ರ ಸರದಿಯ ಮೂರು ವಿಕೆಟ್‌ಗಳನ್ನು 6.4 ಓವರ್‌ಗಳಲ್ಲಿ 37 ರನ್‌ಗಳಿಗೆ ಕಳೆದುಕೊಂಡಿದ್ದರೂ, ಬಳಿಕ ಉತ್ತಪ್ಪ ಮತ್ತು ಬಿನ್ನಿ ನಾಲ್ಕನೆ ವಿಕೆಟ್‌ಗೆ 53 ರನ್ ಸೇರಿಸಿದರು.

ಉತ್ತಪ್ಪ 59 ನಿಮಿಷಗಳ ಬ್ಯಾಟಿಂಗ್‌ನಲ್ಲಿ 41 ಎಸೆತಗಳನ್ನು ಎದುರಿಸಿ 6 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಲ್ಲಿ 48 ರನ್ ಗಳಿಸಿದರು. ಬಿನ್ನಿ 44 ನಿಮಿಷಗಳ ಬ್ಯಾಟಿಂಗ್‌ನಲ್ಲಿ 30 ಎಸೆತಗಳನ್ನು ಉತ್ತರಿಸಿದರು. 2 ಬೌಂಡರಿ ಮತ್ತು 1 ಸಿಕ್ಸರ್ ಇರುವ 32ರನ್ ಗಳಿಸಿ ಅಜೇಯರಾಗಿ ಉಳಿದರು.

ಇದಕ್ಕೆ ಮೊದಲು ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಒಡಿಶಾ ತಂಡ 85 ನಿಮಿಷಗಳ ಬ್ಯಾಟಿಂಗ್‌ನಲ್ಲಿ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 102 ರನ್ ಗಳಿಸಿತ್ತು.

 ಕೆ.ಸಿ. ಕಾರಿಯಪ್ಪ (2-14), ಎಸ್.ಗೋಪಾಲ್(2-15), ಅಭಿಮನ್ಯು ಮಿಥುನ್(2-13) ಮತ್ತು ಎಸ್.ಅರವಿಂದ್(1-31) ಒಡಿಶಾ ತಂಡ ದೊಡ್ಡ ಮೊತ್ತ ಸಂಪಾದಿಸದಂತೆ ತಡೆಯೊಡ್ಡಿದರು.

 ಸರಾಂಗಿ (11), ಸಮಂಟ್ರಾಯ್(19), ಅಭಿಷೇಕ್ ಯಾದವ್(31), ಎ.ಕೆ.ಶಾವೂ (ಔಟಾಗದೆ 17) ಎರಡಂಕೆಯ ಸ್ಕೋರ್ ದಾಖಲಿಸಿದರು.

ಸಂಕ್ಷಿಪ್ತ ಸ್ಕೋರ್ 

ಒಡಿಶಾ 20 ಓವರ್‌ಗಳಲ್ಲಿ 102/7(ಅಭಿಷೇಕ್ ಯಾದವ್ 31, ಎಕೆ ಶಾವೊ ಔಟಾಗದೆ 17; ಮಿಥುನ್ 2-13)

ಕರ್ನಾಟಕ 17.5 ಓವರ್‌ಗಳಲ್ಲಿ 106/4(ಉತ್ತಪ್ಪ 48, ಬಿನ್ನಿ ಔಟಾಗದೆ 32; ಶಾವೊ 2-17).

ಉತ್ತರ ಪ್ರದೇಶಕ್ಕೆ ಏಕಲವ್ಯ ಆಸರೆ

 ಕಟಕ್, ಜ.8: ನಾಯಕ ಏಕಲವ್ಯ ದ್ವಿವೇದಿ ಬಾರಿಸಿದ ಅರ್ಧಶತಕದ(89 ರನ್, 53 ಎಸೆತ) ನೆರವಿನಿಂದ ಉತ್ತರ ಪ್ರದೇಶ ತಂಡ ಸೈಯದ್ ಮುಶ್ತಾಕ್ ಅಲಿ ಟ್ರೋಫಿ ಟ್ವೆಂಟಿ-20 ಟೂರ್ನಿಯಲ್ಲಿ ಸರ್ವಿಸಸ್ ತಂಡವನ್ನು 57 ರನ್‌ಗಳಿಂದ ಸುಲಭವಾಗಿ ಮಣಿಸಿದೆ. ಇಲ್ಲಿನ ಬಾರಬತಿ ಸ್ಟೇಡಿಯಂನಲ್ಲಿ ಶುಕ್ರವಾರ ಬ್ಯಾಟಿಂಗ್‌ಗೆ ಆಹ್ವಾನಿಸಲ್ಪಟ್ಟ ಉತ್ತರಪ್ರದೇಶ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿತು. ಗೆಲ್ಲಲು ಕಠಿಣ ಗುರಿ ಪಡೆದಿದ್ದ ಸರ್ವಿಸಸ್ ತಂಡ 9 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಲಷ್ಟೇ ಶಕ್ತವಾಯಿತು.

ಅರ್ಧಶತಕ ಸಿಡಿಸಿದ ದ್ವಿವೇದಿ(89 ರನ್, 53 ಎಸೆತ, 8 ಬೌಂಡರಿ, 5 ಸಿಕ್ಸರ್)ಆರಂಭಿಕ ದಾಂಡಿಗ ಪ್ರಶಾಂತ್ ಗುಪ್ತಾ(43) ಅವರೊಂದಿಗೆ 3ನೆ ವಿಕೆಟ್‌ಗೆ 109 ರನ್ ಜೊತೆಯಾಟ ನಡೆಸಿ ತಂಡ ಸ್ಪರ್ಧಾತ್ಮಕ ಸ್ಕೋರ್ ದಾಖಲಿಸಲು ನೆರವಾದರು.

ರೋಶನ್ ರಾಜ್(3-42) ಸರ್ವಿಸಸ್ ತಂಡದ ಯಶಸ್ವಿ ಬೌಲರ್ ಎನಿಸಿಕೊಂಡರು.

ಗೆಲುವಿಗೆ ಕಠಿಣ ಸವಾಲು ಬೆನ್ನಟ್ಟಿದ ಸರ್ವಿಸಸ್‌ನ ಪರ ಯಶ್ಪಾಲ್ ಸಿಂಗ್(47ರನ್, 32 ಎಸೆತ) ಹಾಗೂ ವಿಕಾಸ್ ಹಥ್ವಾಲಾ(31 ರನ್, 33 ಎಸೆತ) ಹೊರತುಪಡಿಸಿ ಉಳಿದ ದಾಂಡಿಗರು ವಿಫಲರಾದರು. ಯುಪಿ ಪರ ಸೌರಭ್ ಕುಮಾರ್, ಅಂಕಿತ್ ರಾಜ್‌ಪುರ್, ಪಿಯೂಷ್ ಚಾವ್ಲಾ ಹಾಗೂ ಕುಲ್‌ದೀಪ್ ಯಾದವ್ ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X