Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಓಮನ್ ಮಾಬೆಲಾ ‘ಇಂಡಿಯನ್ ಪ್ರವಾಸಿ ಫೋರಂ’...

ಓಮನ್ ಮಾಬೆಲಾ ‘ಇಂಡಿಯನ್ ಪ್ರವಾಸಿ ಫೋರಂ’ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ9 Jan 2016 4:21 PM IST
share
ಓಮನ್ ಮಾಬೆಲಾ ‘ಇಂಡಿಯನ್ ಪ್ರವಾಸಿ ಫೋರಂ’ ರಕ್ತದಾನ ಶಿಬಿರ

    ಮಸ್ಕತ್: ಓಮನ್‌ನ ಮಾಬೆಲಾದ ‘ಇಂಡಿಯನ್ ಪ್ರವಾಸಿ ಫೋರಂ’ ಸಂಘವು ಸುಲ್ತಾನೇಟ್ ಆಫ್ ಓಮನ್‌ನ ಆರೋಗ್ಯ ಸಚಿವಾಲಯ ಹಾಗೂ ಮಾಡರ್ನ್ ಅಲ್ ಸಲಾಮಾ ಪಾಲಿಕ್ಲಿನಿಕ್ ಆಸ್ಪತ್ರೆಯ ಸಹಕಾರದೊಂದಿಗೆ ‘ಉಚಿತ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ’ವನ್ನು ಜನವರಿ 1ರಂದು ಮಾಬೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಧಿಯಾ ಅಲ್ ಮುಸ್ತಾಕ್‌ಬಿಲ್ ಖಾಸಗಿ ಶಾಲೆಯ ಆವರಣದಲ್ಲಿ ಏರ್ಪಡಿಸಿತ್ತು.

    ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ, ಇಂಡಿಯನ್ ಪ್ರವಾಸಿ ಫೋರಂನ ಉತ್ತರ ಭಾರತ ವಲಯದ ಅಧ್ಯಕ್ಷ ಮಕ್ಸೂದ್ ಶೇಖ್ ಮಾತನಾಡಿ, ರಕ್ತದಾನ ಶಿಬಿರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕೆಲವು ದಿನಗಳ ಹಿಂದೆ ಓಮನ್ ವೈದ್ಯರು, ರಕ್ತದ ಲಭ್ಯತೆಯ ಪ್ರಮಾಣವನ್ನು ಹೆಚ್ಚಿಸಲು ಜನತೆ ರಕ್ತದಾನಕ್ಕೆ ಮುಂದೆ ಬರಬೇಕೆಂದು ಕರೆ ನೀಡಿದ ಸಂದರ್ಭದಲ್ಲೇ ಈ ಶಿಬಿರ ನಡೆದಿರುವುದು ಸಕಾಲಿಕವಾಗಿದೆಯೆಂದು ಪ್ರಶಂಸಿಸಿದರು. ಓಮನ್‌ನ ಇಂಡಿಯನ್ ಪ್ರವಾಸಿ ಫಾರಂ ಹಮ್ಮಿಕೊಂಡಿರುವ ಇತರ ಸಮಾಜಸೇವಾ ಚಟುವಟಿಕೆಗಳನ್ನೂ ಅವರು ಶ್ಲಾಘಿಸಿದರು.

ಇನ್ನೋರ್ವ ಮುಖ್ಯ ಅತಿಥಿ, ಮಾಡರ್ನ್ ಅಲ್ ಸಾಮ್ನಾ ಪಾಲಿಕ್ಲಿನಿಕ್ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಮುಹಮ್ಮದ್ ಮುಸ್ತಫಾ ಅವರು ಸಭಿಕರಿಗೆ ಆರೋಗ್ಯ ಸಲಹೆಗಳನ್ನು ಹಾಗೂ ರಕ್ತದಾನದ ಪ್ರಯೋಜನಗಳನ್ನು ವಿವರಿಸಿದರು. ಕೇವಲ 400 ಮಿ.ಲೀ. ರಕ್ತವನ್ನು ದಾನ ಮಾಡುವುದರಿಂದ ಮೂರು ಜನರ ಜೀವವನ್ನು ಉಳಿಸಲು ಸಾಧ್ಯವಿದೆಯೆಂದು ಅವರು ಹೇಳಿದರು.

      

 ಓಮನ್‌ನ ಇಂಡಿಯನ್ ಪ್ರವಾಸಿ ಫಾರಂ, ಕರ್ನಾಟಕ ಚಾಪ್ಟರ್‌ನ ಅಧ್ಯಕ್ಷ ಯೂಸುಫ್ ಹೈದರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾಡರ್ನ್ ಅಲ್ ಸಲಾಮ ಪಾಲಿಕ್ಲಿನಿಕ್‌ನ ಆಡಳಿತ ನಿರ್ದೇಶಕ ಅಬೂಬಕರ್ ಸಿದ್ದೀಕಿ, ಝಿಯಾವುಲ್ ಮುಷ್ತಾಕ್ ಬೀಲ್ ಪ್ರೈವೇಟ್ ಸ್ಕೂಲ್‌ನ ಪ್ರಾಂಶುಪಾಲೆ ಇಬ್ತಿಝಾಮ್ ಮುಹಮ್ಮದ್, ಇಂಡಿಯನ್ ಪ್ರವಾಸಿ ಫಾರಂನ ಬರ್ಕ್ ಪ್ರದೇಶದ ಅಧ್ಯಕ್ಷ ಅಬ್ಬಾಸ್ ಗುರುಪುರ ಉಪಸ್ಥಿತರಿದ್ದರು. ಇಂಡಿಯನ್ ಪ್ರವಾಸಿ ಫಾರಂನ ಬರ್ಕಾ ಪ್ರದೇಶದ ಅಧ್ಯಕ್ಷ ಇರ್ಫಾನ್ ಉಜಿರೆ ಮೊದಲಿಗರಾಗಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ 56ಮಂದಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಉಚಿತ ವೈದ್ಯಕೀಯ ತಪಾಸಣೆಯ ಪ್ರಯೋಜನವನ್ನು 300 ಮಂದಿ ಪಡೆದರು.

ಅಬ್ದುಲ್ ರಶೀದ್ ಬೆಳ್ತಂಗಡಿ ಸ್ವಾಗತಿಸಿದರು ಹಾಗೂ ಝಕಾರಿಯಾ ಬಪ್ಪಳಿಗೆ ಧನ್ಯವಾದ ಅರ್ಪಿಸಿದರು. ಅಬ್ದುಲ್ ಹಕೀಂ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X