Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವೆಂಟಿ-20: ಝಿಂಬಾಬ್ವೆ ವಿರುದ್ಧ...

ಟ್ವೆಂಟಿ-20: ಝಿಂಬಾಬ್ವೆ ವಿರುದ್ಧ ಅಫ್ಘಾನಿಸ್ತಾನಕ್ಕೆ ರೋಚಕ ಜಯ

ವಾರ್ತಾಭಾರತಿವಾರ್ತಾಭಾರತಿ9 Jan 2016 11:25 PM IST
share
ಟ್ವೆಂಟಿ-20: ಝಿಂಬಾಬ್ವೆ ವಿರುದ್ಧ ಅಫ್ಘಾನಿಸ್ತಾನಕ್ಕೆ ರೋಚಕ ಜಯ

ಶಾರ್ಜಾ, ಜ.9: ಅತ್ಯಂತ ರೋಚಕ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡ ಝಿಂಬಾಬ್ವೆ ತಂಡವನ್ನು 5 ರನ್‌ಗಳ ಅಂತರದಿಂದ ಮಣಿಸಿತು. ಈ ಗೆಲುವಿನ ಮೂಲಕ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.

ಶುಕ್ರವಾರ ಇಲ್ಲಿ ನಡೆದ ಮೊದಲ ಟ್ವೆಂಟಿ-20 ಪಂದ್ಯದ ಗೆಲುವಿಗೆ 188 ರನ್ ಗುರಿ ಪಡೆದ ಝಿಂಬಾಬ್ವೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 182 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಝಿಂಬಾಬ್ವೆಗೆ ಅಂತಿಮ ಎಸೆತದಲ್ಲಿ ಗೆಲುವಿಗೆ 6 ರನ್ ಅಗತ್ಯವಿತ್ತು. ಸ್ಟ್ರೈಕ್‌ನಲ್ಲಿದ್ದ ಲೂಕ್ ಜಾಂಗ್ವೆ(11) ಅಫ್ಘಾನ್‌ನ ವೇಗದ ಬೌಲರ್ ದೌಲತ್ ಝದ್ರಾನ್ ಎಸೆದ ಅಂತಿಮ ಓವರ್‌ನ ಅಂತಿಮ ಎಸೆತದಲ್ಲಿ ಔಟಾಗುವುದರೊಂದಿಗೆ ಝಿಂಬಾಬ್ವೆ ಕೇವಲ 5 ರನ್‌ನಿಂದ ಸೋಲೊಪ್ಪಿಕೊಂಡಿತು.

 ಜಾಂಗ್ವೆ ಅವರು ಝದ್ರಾನ್ ಎಸೆದ ಕೊನೆಯ ಓವರ್‌ನ 3 ಹಾಗೂ 4ನೆ ಎಸೆತದಲ್ಲಿ ಬೌಂಡರಿ ಹಾಗೂ ಸಿಕ್ಸರ್ ಸಿಡಿಸಿದ್ದರು. ಆದರೆ, ಕೊನೆಯ ಎಸೆತದಲ್ಲಿ ದೊಡ್ಡ ಹೊಡೆತ ಬಾರಿಸಲು ವಿಫಲರಾದರು. ಝದ್ರಾನ್ 20ನೆ ಓವರ್‌ನಲ್ಲಿ 15 ರನ್ ನೀಡಿದ್ದರು.

ಝದ್ರಾನ್ ತನ್ನ ಕೊನೆಯ ಓವರ್‌ನಲ್ಲಿ ಎರಡು ಬಾರಿ ನೋ-ಬಾಲ್ ಎಸೆದರೂ ಬೌಲಿಂಗ್ ಮುಂದುವರಿಸಲು ಅವಕಾಶ ನೀಡಿದ ಅಂಪೈರ್‌ಗಳು ವಿವಾದಾಸ್ಪದ ನಿರ್ಧಾರ ಕೈಗೊಂಡರು.

ಝಿಂಬಾಬ್ವೆಯ ಪರ ಮಾಲ್ಕಂ ವಾಲ್ಲರ್(ಔಟಾಗದೆ 49 ರನ್, 37 ಎಸೆತ, 2 ಬೌಂಡರಿ, 2 ಸಿಕ್ಸರ್) ಅಗ್ರ ಸ್ಕೋರರ್ ಎನಿಸಿಕೊಂಡರು. ಅಫ್ಘಾನ್‌ನ ಪರ ಝದ್ರಾನ್(3-32) ಯಶಸ್ವಿ ಬೌಲರ್ ಎನಿಸಿಕೊಂಡರು.

ಅಫ್ಘಾನಿಸ್ತಾನ 182/7: ಇದಕ್ಕೆ ಮೊದಲು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟದಲ್ಲಿ 187 ರನ್ ಗಳಿಸಿತು.

ಉಸ್ಮಾನ್ ಘನಿ(42ರನ್, 38 ಎಸೆತ, 5 ಬೌಂಡರಿ, 1 ಸಿಕ್ಸರ್) ಅಗ್ರ ಸ್ಕೋರರ್ ಎನಿಸಿಕೊಂಡರು. ಗುಲ್ಬದಿನ್ ನಾಯಿಬ್(37), ನಾಯಕ ಮುಹಮ್ಮದ್ ಶಹಝಾದ್(33) ಉಪಯುಕ್ತ ಕೊಡುಗೆ ನೀಡಿದರು. ಕೇವಲ 20 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್‌ಗಳನ್ನು ಒಳಗೊಂಡ 37 ರನ್ ಗಳಿಸಿ ರನೌಟಾದ ನಾಯಿಬ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಝಿಂಬಾಬ್ವೆಯ ಹಿರಿಯ ಆಫ್-ಸ್ಪಿನ್ನರ್ ಗ್ರೇಮ್ ಕ್ರೀಮರ್(3-17) ಯಶಸ್ವಿ ಬೌಲರ್ ಎನಿಸಿಕೊಂಡರು. ಉಭಯ ತಂಡಗಳು ಶಾರ್ಜಾದಲ್ಲಿ ರವಿವಾರ ಎರಡನೆ ಹಾಗೂ ಅಂತಿಮ ಪಂದ್ಯವನ್ನು ಆಡುತ್ತವೆ.

ಸಂಕ್ಷಿಪ್ತ ಸ್ಕೋರ್

ಅಫ್ಘಾನಿಸ್ತಾನ: 20 ಓವರ್‌ಗಳಲ್ಲಿ 187/7

(ಉಸ್ಮಾನ್ ಘನಿ 42, ಗುಲ್ಬದಿನ್ ನಾಯಿಬ್ 37, ಮುಹಮ್ಮದ್ ಶಹಝಾದ್ 33, ಗ್ರೇಮ್ ಕ್ರೆಮೆರ್ 3-17)

ಝಿಂಬಾಬ್ವೆ: 20 ಓವರ್‌ಗಳಲ್ಲಿ 182/7

(ಮಾಲ್ಕಂ ವಾಲ್ಲರ್ ಔಟಾಗದೆ 49, ಹ್ಯಾಮಿಲ್ಡನ್ ಮಸಕಝ 33, ದೌಲತ್ ಝದ್ರಾನ್ 3-32)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X