Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್‌ನಿಂದ ಪಿಡಿಪಿಗೆ ಸ್ನೇಹಹಸ್ತ?...

ಕಾಂಗ್ರೆಸ್‌ನಿಂದ ಪಿಡಿಪಿಗೆ ಸ್ನೇಹಹಸ್ತ? ಇಂದು ಸೋನಿಯಾ-ಮೆಹಬೂಬ ಭೇಟಿ

ವಾರ್ತಾಭಾರತಿವಾರ್ತಾಭಾರತಿ9 Jan 2016 11:44 PM IST
share
ಕಾಂಗ್ರೆಸ್‌ನಿಂದ ಪಿಡಿಪಿಗೆ ಸ್ನೇಹಹಸ್ತ? ಇಂದು ಸೋನಿಯಾ-ಮೆಹಬೂಬ ಭೇಟಿ

ಶ್ರೀನಗರ,ಜ.9: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ರವಿವಾರ ಶ್ರೀನಗರಕ್ಕೆ ಆಗಮಿಸಿ, ಮೆಹಬೂಬ ಮುಫ್ತಿಯವರನ್ನು ಭೇಟಿಯಾಗಲಿರುವುದು, ಕಾಶ್ಮೀರದಲ್ಲಿ ರಾಜಕೀಯ ಶಕ್ತಿಗಳ ಮರುಧ್ರುವೀಕರಣದ ಸಾಧ್ಯತೆಯನ್ನು ಹೆಚ್ಚಿಸಿದೆ. ಸೋನಿಯಾ ಅವರ ಶ್ರೀನಗರ ಭೇಟಿಯು, ಸಂಪೂರ್ಣ ಖಾಸಗಿಯೆಂದು ಕಾಂಗ್ರೆಸ್ ಹಾಗೂ ಪಿಡಿಪಿ ಪಕ್ಷಗಳೆರಡೂ ಬಣ್ಣಿಸಿವೆ. ಮುಫ್ತಿಯವರ ಶೋಕತಪ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಸೋನಿಯಾ ಆಗಮಿಸುತ್ತಿದ್ದಾರೆಂದು ಅವು ತಿಳಿಸಿವೆ. ಈ ಮಧ್ಯೆ ಬಿಜೆಪಿ ಕೂಡಾ ಮೆಹಬೂಬ ಅವರಿಗೆ ಬೆಂಬಲ ನೀಡಲು ಸಿದ್ಧವೆಂದು ಹೇಳಿಕೊಂಡಿದೆಯಾದರೂ ಆ ಬಗ್ಗೆ ಅದನ್ನು ಅಧಿಕೃತಾಗಿ ಘೋಷಿಸಿಲ್ಲ.
 
     ರಾಜ್ಯಸಭೆಯ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್ ಶುಕ್ರವಾರ ಬಿಜ್‌ಬೆಹ್ರಾದಲ್ಲಿ ಮುಫ್ತಿಯವರ ಸಮಾಧಿಗೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿರುವುದು ಕೂಡಾ ಕಾಂಗ್ರೆಸ್ ಹಾಗೂ ಪಿಡಿಪಿ ಪರಸ್ಪರ ಹತ್ತಿರುವಾಗುತ್ತಿರುವ ಸೂಚನೆಗಳನ್ನು ನೀಡಿದೆ. ಮೆಹಬೂಬಾ ಅವರಿಗೆ ಸಾಂಪ್ರದಾಯಿಕ ನಾಲ್ಕು ದಿನಗಳ ಶೋಕಾಚರಣೆಯ ಬಳಿಕವೂ, ಮುಖ್ಯಮಂತ್ರಿ ಹುದ್ದೆಯನ್ನು ಏರುವ ಬಗ್ಗೆ ಯೋಚಿಸಲು ಇನ್ನೂ ಕಾಲಾವಕಾಶ ಬೇಕಿದೆಯೆಂದು ಪಿಡಿಪಿಯ ಹಿರಿಯ ವಕ್ತಾರ ನಯೀಮ್ ಆಖ್ತರ್ ಹೇಳಿದ್ದಾರೆ. ‘‘ಪಕ್ಷದ ಸಹ ಸಂಸ್ಥಾಪಕಿಯಾದ ಮೆಹಬೂಬ ತನ್ನ ಕರ್ತವ್ಯದಿಂದ ಪಲಾಯನಗೈಯುತ್ತಿಲ್ಲ. ಮುಫ್ತಿ ಅವರ ನಿಧನವು ಆಕೆಗೊಂದು ದೊಡ್ಡ ನಷ್ಟವಾಗಿದೆ. ಇದರಿಂದ ಚೇತರಿಸಲುಆಕೆಗೆ ಇನ್ನೂ ಸ್ವಲ್ಪ ಸಮಯ ಬೇಕಾಗಬಹುದು ಎಂದವರು ಹೇಳಿದ್ದಾರೆ.
  ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ನಿರ್ಮಲ್‌ಸಿಂಗ್, ಶನಿವಾರ ಸಂಜೆ ಪಕ್ಷದ ನಾಯಕತ್ವದ ಜೊತೆ ರಹಸ್ಯಸಭೆ ನಡೆಸಿ, ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಮುಫ್ತಿ ಅವರ ನಿಧನದ ಶೋಕಾಚರಣೆಯ ಮುಗಿಯುವವರೆಗೂ, ಕಾದು ನೋಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ರವಿವಾರ ಬಿಜೆಪಿ ಶಾಸಕರು ಸಭೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಆದಾಗ್ಯೂ ಪಿಡಿಪಿಯ ನಾಯಕರು ಬಿಜೆಪಿ ಜೊತೆಗಿನ ಮೈತ್ರಿಯು ಮುಂದುವರಿಯಲಿದ್ದು, ಶೀಘ್ರದಲ್ಲೇ ಸರಕಾರವು ಪುನಾರಚನೆಯಾಗಲಿದೆಯೆಂದು ಸ್ಪಷ್ಟಪಡಿಸಿದ್ದಾರೆ.
 ಆದರೆ ಪಿಡಿಪಿಯ ಹಿರಿಯ ನಾಯಕ ಅಲ್ತಾಫ್ ಬುಖಾರಿ, ಬಿಜೆಪಿ ಜೊತೆಗೆ ತಮ್ಮ ಪಕ್ಷದ ಮೈತ್ರಿ ಅಚಲವಾಗಿದ್ದು, ಇತರ ಪಕ್ಷದ ಬೆಂಬಲನನ್ನು ಕೋರುವ ಪ್ರಶ್ನೆಯೇ ಇಲ್ಲವೆಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X