Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2ನೆ ಟ್ವೆಂಟಿ-20 ಪಂದ್ಯ: ಕಾಲಿನ್ 14...

2ನೆ ಟ್ವೆಂಟಿ-20 ಪಂದ್ಯ: ಕಾಲಿನ್ 14 ಎಸೆತಗಳಲ್ಲಿ ಅರ್ಧಶತಕ; ನ್ಯೂಝಿಲೆಂಡ್‌ಗೆ ಸರಣಿ ಜಯ

ವಾರ್ತಾಭಾರತಿವಾರ್ತಾಭಾರತಿ10 Jan 2016 8:59 PM IST
share
2ನೆ ಟ್ವೆಂಟಿ-20 ಪಂದ್ಯ: ಕಾಲಿನ್ 14 ಎಸೆತಗಳಲ್ಲಿ ಅರ್ಧಶತಕ; ನ್ಯೂಝಿಲೆಂಡ್‌ಗೆ ಸರಣಿ ಜಯ

ಆಕ್ಲೆಂಡ್, ಜ.10: ಕಾಲಿನ್ ಮುನ್ರೊ 14 ಎಸೆತಗಳಲ್ಲಿ ದಾಖಲಿಸಿದ ಅರ್ಧ ಶತಕದ ನೆರವಿನಲ್ಲಿ ನ್ಯೂಝಿಲೆಂಡ್ ತಂಡ ಇಲ್ಲಿ ನಡೆದ ಎರಡನೆ ಟ್ವೆಂಟಿ-20 ಪಂದ್ಯದಲ್ಲಿ 9 ವಿಕೆಟ್‌ಗಳ ಜಯ ಗಳಿಸಿದ್ದು, ಈ ಮೂಲಕ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿದೆ.

ಇಲ್ಲಿನ ಈಡನ್‌ಪಾರ್ಕ್‌ನಲ್ಲಿ ರವಿವಾರ ನಡೆದ ಪಂದ್ಯದಲ್ಲಿ ಗೆಲುವಿಗೆ 143 ರನ್‌ಗಳ ಸವಾಲನ್ನು ಪಡೆದ ನ್ಯೂಝಿಲೆಂಡ್ ತಂಡ ಇನ್ನೂ 60 ಎಸೆತಗಳು ಬಾಕಿ ಇರುವಂತೆಯೇ ಭರ್ಜರಿ ಗೆಲುವು ದಾಖಲಿಸಿತು.

ಮುನ್ರೊ ಗೆಲುವಿನ ಸಿಕ್ಸರ್ ಬಾರಿಸಿದರು. ಯುವರಾಜ್ ಸಿಂಗ್ 2007ರಲ್ಲಿ ಇಂಗ್ಲೆಂಡ್ ವಿರುದ್ಧ 12 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ್ದರು. ಆದರೆ ಅವರ ದಾಖಲೆಯನ್ನು ಮುರಿಯಲು ಕಾಲಿನ್‌ಗೆ ಸಾಧ್ಯವಾಗಲಿಲ್ಲ.
ಕಾಲಿನ್ 16 ನಿಮಿಷಗಳ ಬ್ಯಾಟಿಂಗ್‌ನಲ್ಲಿ 14 ಎಸೆತಗಳನ್ನು ಎದುರಿಸಿದರು. 1 ಬೌಂಡರಿ ಮತ್ತು 7 ಸಿಕ್ಸರ್ ನೆರವಿನಲ್ಲಿ ಅರ್ಧಶತಕ ಪೂರೈಸಿದರು.

ವ್ಯಾಂಡರ್ಸ್‌ಸೆ ಅವರ ಓವರ್‌ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ್ದರು.
ಆರಂಭಿಕ ದಾಂಡಿಗರಾದ ಮಾರ್ಟಿನ್ ಗಪ್ಟಿಲ್ ಮತ್ತು ಕೇನ್ ವಿಲಿಯಮ್ಸನ್ ಮೊದಲ ವಿಕೆಟ್‌ಗೆ 6.4 ಓವರ್‌ಗಳಲ್ಲಿ 89 ರನ್‌ಗಳನ್ನು ಜಮೆ ಮಾಡಿ ತಂಡಕ್ಕೆ ಭದ್ರ ಅಡಿಪಾಯ ಹಾಕಿಕೊಟ್ಟರು.
ಮಾರ್ಟಿನ್ ಗಪ್ಟಿಲ್ 29 ನಿಮಿಷಗಳ ಬ್ಯಾಟಿಂಗ್‌ನಲ್ಲಿ 25 ಎಸೆತಗಳನ್ನು ಎದುರಿಸಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಲ್ಲಿ 63 ರನ್ ಗಳಿಸಿ ಔಟಾದರು. ಎರಡನೆ ವಿಕೆಟ್‌ಗೆ ನಾಯಕ ವಿಲಿಯಮ್ಸನ್‌ಗೆ ಕಾಲಿನ್ ಮುನ್ರೊ ಜೊತೆಯಾದರು.
 ಮುನ್ರೊ ಮತ್ತು ವಿಲಿಯಮ್ಸನ್ ಎರಡನೆ ವಿಕೆಟ್‌ಗೆ ಮುರಿಯದ ಜೊತೆಯಾಟದಲ್ಲಿ 58 ರನ್ ಗಳಿಸಿದರು.
ವಿಲಿಯಮ್ಸನ್ 45 ನಿಮಿಷಗಳ ಬ್ಯಾಟಿಂಗ್‌ನಲ್ಲಿ 21 ಎಸೆತಗಳನ್ನು ಎದುರಿಸಿದರು. 3 ಬೌಂಡರಿಗಳ ಸಹಾಯದಿಂದ ಔಟಾಗದೆ 32 ರನ್ ಗಳಿಸಿದರು.
ಇದಕ್ಕೂ ಮೊದಲು ಟಾಸ್ ಜಯಿಸಿದ ನ್ಯೂಝಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಶ್ರೀಲಂಕಾವನ್ನು ಬ್ಯಾಟಿಂಗ್‌ಗೆ ಇಳಿಸಿದ್ದರು.
 ನ್ಯಾಯಕ ಆ್ಯಂಜೆಲೊ ಮ್ಯಾಥ್ಯೂಸ್ ಔಟಾಗದೆ 81 ರನ್ ಮತ್ತು ತಿಲಕರತ್ನೆ ದಿಲ್ಶನ್ 28 ರನ್ ಗಳಿಸಿರುವುದು ಬಿಟ್ಟರೆ ತಂಡದ ಸಹ ಆಟಗಾರರಿಗೆ ಎರಡಂಕೆಯ ಸ್ಕೋರ್ ದಾಖಲಿಸಲು ಸಾಧ್ಯವಾಗಲಿಲ್ಲ.
ಗ್ರಾಂಟ್ ಎಲಿಯೊಟ್ 22ಕ್ಕೆ 4 ವಿಕೆಟ್ ಮತ್ತು ಸ್ಯಾಂಟ್ನರ್ 24ಕ್ಕೆ 2 ವಿಕೆಟ್ ಎಗರಿಸಿ ಶ್ರೀಲಂಕಾವನ್ನು 142 ರನ್‌ಗಳಿಗೆ ನಿಯಂತ್ರಿಸಿದರು. ಲಂಕಾದ ಮಾಥ್ಯೂಸ್ 60 ನಿಮಿಷಗಳ ಬ್ಯಾಟಿಂಗ್‌ನಲ್ಲಿ 49 ಎಸೆತಗಳನ್ನು ಎದುರಿಸಿ 7 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ 81 ರನ್ ಗಳಿಸಿದರು.
  ನ್ಯೂಝಿಲೆಂಡ್ ಈ ಗೆಲುವಿನೊಂದಿಗೆ ಮೂರು ವಿಧದ ಕ್ರಿಕೆಟ್‌ನಲ್ಲಿ ಸರಣಿ ಜಯಿಸಿದೆ. ಕಿವೀಸ್ ಟೆಸ್ಟ್‌ನಲ್ಲಿ 2-0, ಏಕದಿನ ಕ್ರಿಕೆಟ್‌ನಲ್ಲಿ 3-1ಮತ್ತು ಟ್ವೆಂಟಿ-20 ಪಂದ್ಯದಲ್ಲಿ 2-0 ಅಂತರದಲ್ಲಿ ಜಯ ಗಳಿಸಿದೆ.

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142
( ಮ್ಯಾಥ್ಯೂಸ್ 81, ದಿಲ್ಶನ್28; ಎಲಿಯೊಟ್ 4-22, ಮಿಲ್ನೆ 2-36).
ನ್ಯೂಝಿಲೆಂಡ್ 10 ಓವರ್‌ಗಳಲ್ಲಿ 147/1
( ಗಪ್ಟಿಲ್ 63, ಮುನ್ರೊ ಔಟಾಗದೆ 50, ವಿಲಿಯಮ್ಸನ್ ಔಟಾಗದೆ 32 ; ಪೆರೆರಾ 1-26).
ಪಂದ್ಯಶ್ರೇಷ್ಠ: ಕಾಲಿನ್ ಮುನ್ರೊ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X