Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹವಾಲಾ ದಂಧೆ: 13 ಮಂದಿ ಆರೋಪಿಗಳ ಬಂಧನ; 1...

ಹವಾಲಾ ದಂಧೆ: 13 ಮಂದಿ ಆರೋಪಿಗಳ ಬಂಧನ; 1 ಕೋಟಿ ರೂ.ನಗದು ವಶ

ವಾರ್ತಾಭಾರತಿವಾರ್ತಾಭಾರತಿ10 Jan 2016 11:54 PM IST
share
ಹವಾಲಾ ದಂಧೆ: 13 ಮಂದಿ ಆರೋಪಿಗಳ ಬಂಧನ; 1 ಕೋಟಿ ರೂ.ನಗದು ವಶ

ಬೆಂಗಳೂರು, ಜ.10: ಸರಕಾರಕ್ಕೆ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸದೆ ಹವಾಲಾ ದಂಧೆ ನಡೆಸುತ್ತಿದ್ದ 13 ಜನ ಆರೋಪಿಗಳನ್ನು ಬಂಧಿಸಿ 1 ಕೋಟಿ ರೂ.ನಗದನ್ನು ವಶಪಡಿಸಿಕೊಂಡಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಬಂಧಿತರನ್ನು ರಾಜಸ್ಥಾನ ಮೂಲದವರಾದ ಆರ್.ಧರ್ಮೇಂದರ್(42), ಚಂಪಾಲಾಲ್(30), ಮಹದೇವ್(22), ಜೀತುಸಿಂಗ್(18), ಚಿತ್ರದುರ್ಗದ ವಿಕ್ರಮ್(21), ಹೆಗ್ಗನಹಳ್ಳಿ ಕ್ರಾಸ್‌ನ ಅರುಣ್‌ಕುಮಾರ್(36), ಲಗ್ಗೆರೆ ಪ್ರಕಾಶ್(30), ಚಿಕ್ಕಬಳ್ಳಾಪುರ ಗೋಪಾಲ್(36), ಹನುಮಂತನಗರ ದಿನೇಶ್(46), ಕಾಮಾಕ್ಷಿಪಾಳ್ಯ ಪುರುಷೋತ್ತಮ್(45), ತ್ಯಾಗರಾಜನಗರ ಸುನೀಲ್(42), ಅವಿನ್ಯೂ ರಸ್ತೆ ಭಗವಾನ್(30), ಕಬ್ಬನ್‌ಪೇಟೆ ಕುನಾಲ್‌ಸಿಂಗ್(34) ಎಂದು ಗುರುತಿಸಲಾಗಿದೆ.

ಆರೋಪಿಗಳು ನಗರ್ತಪೇಟೆಯಲ್ಲಿ ಅಂಗಡಿಯೊಂದನ್ನು ತೆರೆದು ದೇಶದ ಅನಧಿಕೃತ ಹಣವನ್ನು ಸ್ವೀಕರಿಸಿ, ಸಂಗ್ರಹಿಸಿಟ್ಟುಕೊಂಡು ಸರಕಾರಕ್ಕೆ ಮೋಸ ಮಾಡಿ ಸಾಗಣೆ ಮಾಡುತ್ತಿದ್ದರು. ಈ ಮಾಹಿತಿಯನ್ನು ಕಲೆ ಹಾಕಿದ ಪೊಲೀಸರು ಅಂಗಡಿಯ ಮೇಲೆ ದಾಳಿ ನಡೆಸಿ ಪ್ರಮುಖ ಆರೋಪಿ ಹಾಗೂ ಅಂಗಡಿಯ ಮಾಲಕನಾಗಿರುವ ಧರ್ಮೇಂದರ್ ಸಹಿತ ಒಟ್ಟು 13 ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳ ಬಳಿಯಿದ್ದ 1 ಕೋಟಿ ರೂ.ನಗದು, 16 ಮೊಬೈಲ್ ಪೋನ್‌ಗಳು, ಎರಡು ನೋಟು ಎಣಿಕೆ ಯಂತ್ರಗಳು, ಕೃತ್ಯಕ್ಕೆ ಬಳಕೆ ಮಾಡುತ್ತಿದ್ದ 24 ರಬ್ಬರ್ ಸೀಲುಗಳು, ಎರಡು ಕ್ಯಾಲ್ಕುಲೇಟರ್, ಒಂದು ಕಂಪ್ಯೂಟರ್ ಹಾಗೂ ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಮುಖ ಆರೋಪಿ ಧರ್ಮೇಂದರ್ ಮತ್ತೊಬ್ಬ ಆರೋಪಿ ಚಂಪಾಲಾಲ್‌ನನ್ನು ನೇಮಿಸಿಕೊಂಡು ಕೃತ್ಯ ಎಸಗುತ್ತಿದ್ದನು. ಉಳಿದ ಆರೋಪಿಗಳು ನೇರವಾಗಿ ಹಾಗೂ ತಮ್ಮ ಮಾಲಕರ ಸೂಚನೆ ಮೇರೆಗೆ ಹಣವನ್ನು ಬೇರೆಡೆಗೆ ಸಾಗಿಸುತ್ತಿದ್ದರು.

ಪ್ರಮುಖ ಆರೋಪಿ ಧರ್ಮೇಂದರ್ ಚಿನ್ನದ ವ್ಯಾಪಾರಿಯೆಂದು ಹೇಳಿಕೊಂಡು ಹವಾಲಾ ದಂಧೆ ನಡೆಸುತ್ತಿದ್ದನು. ಅಲ್ಲದೆ, ಸ್ಥಳಕ್ಕೆ ಅನುಗುಣವಾಗಿ ಕನಿಷ್ಠ 300 ರೂ. ಹಾಗೂ ಗರಿಷ್ಠ 400 ರೂ. ಹಣ ಪಡೆಯುತ್ತಿದ್ದ. ಈ ಮೊಕದ್ದಮೆಯನ್ನು ದಾಖಲಿಸಿಕೊಂಡಿರುವ ಹಲಸೂರು ಗೇಟ್ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X