Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೈಡ್ರೋಜನ್ ಬಾಂಬ್ ಪರೀಕ್ಷೆ: ಕಿಮ್...

ಹೈಡ್ರೋಜನ್ ಬಾಂಬ್ ಪರೀಕ್ಷೆ: ಕಿಮ್ ಸಮರ್ಥನೆ

ವಾರ್ತಾಭಾರತಿವಾರ್ತಾಭಾರತಿ11 Jan 2016 12:07 AM IST
share
ಹೈಡ್ರೋಜನ್ ಬಾಂಬ್ ಪರೀಕ್ಷೆ: ಕಿಮ್ ಸಮರ್ಥನೆ

ಸಿಯೋಲ್,ಜ.10: ತನ್ನ ದೇಶದ ಚೊಚ್ಚಲ ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಉತ್ತರ ಕೊರಿಯದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಸಮರ್ಥಿಸಿದ್ದಾರೆ. ಅಮೆರಿಕದ ಜೊತೆ ಅಣ್ವಸ್ತ್ರ ಸಮರವನ್ನು ತಡೆಗಟ್ಟುವ ಉದ್ದೇಶದಿಂದ, ಆತ್ಮರಕ್ಷಣೆಗಾಗಿ ಉತ್ತರ ಕೊರಿಯ ಹೈಡ್ರೋಜನ್ ಬಾಂಬ್‌ನ ಪರೀಕ್ಷೆ ನಡೆಸಿರುವುದಾಗಿ ಅವರು ಹೇಳಿದ್ದಾರೆ. ಉತ್ತರ ಕೊರಿಯವು ತಥಾಕಥಿತ ಹೈಡ್ರೋಜನ್ ಬಾಂಬ್ ಪರೀಕ್ಷಿಸಿದ ಬಳಿಕ ನೀಡಿದ ಕಿಮ್ ನೀಡಿದ ಚೊಚ್ಚಲ ಹೇಳಿಕೆ ಇದಾಗಿದೆ.
ಉತ್ತರಕೊರಿಯ ಕಳೆದ ಬುಧವಾರ ತನ್ನ ನಾಲ್ಕನೆ ಪರಮಾಣು ಪರೀಕ್ಷೆಯನ್ನು ನಡೆಸಿರುವುದು ಅಂತಾ ರಾಷ್ಟ್ರೀಯ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಹಾಗೂ ನೆರೆಯ ರಾಷ್ಟ್ರವಾದ ದಕ್ಷಿಣ ಕೊರಿಯ ಕೂಡಾ ಹೈಡ್ರೋಜನ್ ಬಾಂಬ್ ಪರೀಕ್ಷೆಯನ್ನು ಖಂಡಿಸಿದೆ.

 ‘‘ಕೊರಿಯ ಪರ್ಯಾಯದ್ವೀಪದಲ್ಲಿ ಶಾಂತಿಯನ್ನು ಕಾಪಾಡಲು ಹಾಗೂ ಅಮೆರಿಕ ನೇತೃತ್ವದ ಸಾಮ್ರಾಜ್ಯ ಶಾಹಿಗಳಿಂದ ಉಂಟಾಗಿರುವ ಅಣ್ವಸ್ತ್ರ ಸಮರದ ಅಪಾಯ ದಿಂದ ಪ್ರಾದೇಶಿಕ ಭದ್ರತೆಯನ್ನು ನೆಲೆಗೊಳಿಸಲು ಕೈಗೊಳ್ಳಲಾದ ಆತ್ಮರಕ್ಷಣೆಯ ನಡೆ ಇದಾಗಿದೆ’’ ಎಂದು ಕಿಮ್ ಹೇಳಿರುವುದಾಗಿ, ಉತ್ತರ ಕೊರಿಯದ ಅಧಿಕೃತ ಸುದ್ದಿ ಸಂಸ್ಥೆ ಕೆಸಿಎನ್‌ಎ ವರದಿ ಮಾಡಿದೆ.

ಅಣ್ವಸ್ತ್ರ ಪರೀಕ್ಷೆಯು ಸಾರ್ವಭೌಮ ದೇಶದ ಕಾನೂನು ಬದ್ಧ ಹಕ್ಕಾಗಿದೆ. ಒಂದು ನ್ಯಾಯಯುತವಾದ ಕಾರ್ಯ ವನ್ನು ಯಾರೂ ಟೀಕಿಸುವಂತಿಲ್ಲ ಎಂದವರು ಹೇಳಿದ್ದಾರೆ. ಉತ್ತರ ಕೊರಿಯದ ಜನತಾ ಸೇನೆಯ ಪ್ರತಿಯೊಂದು ವಿಧದಲ್ಲೂ ತನ್ನ ಮಿಲಿಟರಿ ಹಾಗೂ ರಾಜಕೀಯ ಬಲಾಢ್ಯತೆಯನ್ನು ಹೆಚ್ಚಿಸಲು ಶ್ರಮಿಸಬೇಕೆಂದು ಅವರು ಕರೆ ನೀಡಿದರು. ಉತ್ತರ ಕೊರಿಯದ ಜನತಾ ಸಶಸ್ತ್ರ ಪಡೆ ಗಳ ಸಚಿವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಿಮ್ ಈ ಹೇಳಿಕೆ ನೀಡಿರುವುದಾಗಿ ಕೆಸಿಎನ್‌ಎ ತಿಳಿಸಿದೆ. ಆದರೆ ಅವರು ಭೇಟಿ ನೀಡಿದ ದಿನಾಂಕವನ್ನು ಉಲ್ಲೇಖಿಸಿಲ್ಲ.

 ಉತ್ತರ ಕೊರಿಯ ಸರಕಾರ ಶುಕ್ರವಾರ ಬಿಡುಗಡೆ ಗೊಳಿಸಿದ ಅಧಿಕೃತ ಹೇಳಿಕೆಯು ಕೂಡಾ ಕಿಮ್ ಅವರ ಅನಿಸಿಕೆಗಳನ್ನೇ ಪ್ರತಿಧ್ವನಿಸಿದೆ. ಅಣುಶಕ್ತಿಯನ್ನು ಸಂಪಾ ದಿಸುವ ಮಹತ್ವಾಕಾಂಕ್ಷೆಯನ್ನು ರಾಷ್ಟ್ರಗಳು ತ್ಯಜಿಸಿದಲ್ಲಿ, ಅವುಗಳ ಗತಿ ಏನಾಗಲಿದೆ ಎಂಬುದಕ್ಕೆ ಇರಾಕ್‌ನ ಸದ್ದಾಂ ಹುಸೈನ್ ಹಾಗೂ ಲಿಬಿಯದ ಮುಹಮ್ಮದ್ ಗದಾಫಿ ಉದಾಹರಣೆಯಾಗಿದ್ದಾರೆ ಎಂದು ಅಧಿಕೃತ ಹೇಳಿಕೆಯು ತಿಳಿಸಿದೆ.
ಉತ್ತರ ಕೊರಿಯದ ಅಣ್ವಸ್ತ್ರ ಪರೀಕ್ಷೆಯು, ಅದರ ಪ್ರಮುಖ ಮಿತ್ರ ಚೀನಾ ಸೇರಿದಂತೆ ವಿಶ್ವದ ಶಕ್ತಿಶಾಲಿ ರಾಷ್ಟ್ರ ಗಳನ್ನು ಕೆರಳಿಸಿದೆ. ಉತ್ತರ ಕೊರಿಯವನ್ನು ದಂಡಿಸಲು ತಾನು ನೂತನ ಕ್ರಮಗಳನ್ನು ಜಾರಿಗೊಳಿಸುವುದಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತಿಳಿಸಿದೆ. ಉತ್ತರ ಕೊರಿಯವು, ವಿಭಜಿತ ಪರ್ಯಾಯ ದ್ವೀಪವನ್ನು ಯುದ್ಧದಂಚಿನೆಡೆಗೆ ಕೊಂಡೊಯ್ಯುತ್ತಿದೆಯೆಂದು ನೆರೆಯ ರಾಷ್ಟ್ರವಾದ ದ.ಕೊರಿಯ ಆಕ್ರೋಶ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X