Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾಷಾ ಮಸೂದೆ ತಿದ್ದುಪಡಿ ಆಗ್ರಹಿಸಿ ಧರಣಿ

ಭಾಷಾ ಮಸೂದೆ ತಿದ್ದುಪಡಿ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ11 Jan 2016 1:21 PM IST
share
ಭಾಷಾ ಮಸೂದೆ ತಿದ್ದುಪಡಿ ಆಗ್ರಹಿಸಿ ಧರಣಿ

 ಕಾಸರಗೋಡು: ಕೇರಳ ಸರಕಾರದ ನೂತನ ಭಾಷಾ ಮಸೂದೆಯಲ್ಲಿ ಕನ್ನಡಿಗರಿಗೆ ಅನುಕೂಲವಾಗುವಂತೆ ಬದಲಾವಣೆಯಾಗಲೇಬೇಕು. ಭಾಷಾ ಅಲ್ಪಸಂಖ್ಯಾತ ಕನ್ನಡಿಗರಿಗೆ 1969ರಲ್ಲಿ ಜಾರಿಯಾದ ಭಾಷಾ ಮಸೂದೆಯಲ್ಲಿ ನೀಡಿದ ಎಲ್ಲ ಸವಲತ್ತುಗಳನ್ನು ಮರುಸ್ಥಾಪಿಬೇಕು. ಇದನ್ನು ಸರಕಾರದ ಗಮನಕ್ಕೆ ತರುವಲ್ಲಿ ಕನ್ನಡಿಗರೆಲ್ಲರು ಒಗ್ಗಟ್ಟಾಗಬೇಕು. ಕನ್ನಡ ಬಳಸುವ ಆಂದೋಲನದ ಮೂಲಕ ಸರಕಾರಿ ಕಚೇರಿಗಳಲ್ಲಿ, ಸಾಮಾಜಿಕ ಚಟುವಟಿಕೆಗಳಲ್ಲಿ ಕನ್ನಡ ಮನೆಮಾತಾಗಬೇಕು. ಯಾವ ರೀತಿ ಮಲಯಾಳ ಭಾಷೆ ಕೇರಳದಲ್ಲಿ ಆಡಳಿತ ಭಾಷೆಯೋ ಅಷೇ ಸ್ಥಾನಮಾನ ಕನ್ನಡಕ್ಕೆ ಸಿಗಲೇಬೇಕು. ಇದಕ್ಕಾಗಿ ಕನ್ನಡ ಬಳಸಿ ಉಳಿಸಿ ಆಂದೋಲನವನ್ನು ಜಿಲ್ಲೆಯಾದ್ಯಂತ ನಡೆಸಬೇಕು ಎಂದು ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕೇಂದ್ರಾಧ್ಯಕ್ಷ ಮಹಾಲಿಂಗೇಶ್ವರ ಭಟ್ ನುಡಿದರು.

ಅವರು ಪೆರಡಾಲ ಜಿಬಿಯುಪಿ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲೆಯ ಮುಖ್ಯ ಶಿಕ್ಷಕರು ಮತ್ತು ಉಪಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿಯ ಸಂಯುಕ್ತ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಕನ್ನಡ ನೌಕರರನ್ನು ನೇಮಿಸಿ ಕನ್ನಡ ಕಡತಗಳನ್ನು ವಿಲೇವಾರಿ ಮಾಡುವುದು ಸರಕಾರದ ಕೆಲಸ.

ಇತರ ಸಾರ್ವಜನಿಕ ಸಂಸ್ಥೆಗಳಲ್ಲಿಯೂ ಕನ್ನಡ ಉದ್ಯೋಗಸ್ಥರಿರಬೇಕಾಗಿದೆ. ಈ ಹಿಂದಿನ ಮಸೂದೆಯಲ್ಲಿ ಇಂತಹ ಹಕ್ಕುಗಳನ್ನು ಕನ್ನಡಿಗರಿಗೆ ನೀಡಲಾಗಿತ್ತಾದರೂ ಅವುಗಳ ಬಳಕೆಯಲ್ಲಿ ವ್ಯತ್ಯಯ ಉಮಟಾದುದರಿಂದ ಈಗ ಈ ಸ್ಥಿತಿ ಬಂದೊದಗಿದೆ. ಮುಂದೆ ನೂತನ ಭಾಷಾ ಮಸೂದೆಯಲ್ಲಿ ತಿದ್ದುಪಡಿ ಉಂಟಾಗಬೇಕಾದರೆ ಕನ್ನಡ ಬಳಸುವವರ ಸಂಖ್ಯೆಯೂ ಹೆಚ್ಚಾಗಬೇಕು. ಗತ ವರ್ಷಗಳಲ್ಲಿ ರಾಜ್ಯ ಸರಕಾರ ಕಡತ ವಿಲೇವಾರಿಯಲ್ಲಿ ಭಾಷಾವಾರು ಲೆಕ್ಕ ತೆಗೆದು ಕನ್ನಡ ಕಡತಗಳಿಲ್ಲ ಎಂಬ ಜಾಣತನವನ್ನು ಹೊರಹಾಕಿದೆ.

ಇದಕ್ಕೆ ಇಲ್ಲಿನ ಸರಕಾರಿ ಕಚೇರಿಗಳಲ್ಲಿರುವ ನೌಕರರು ಹೊಣೆಯಾಗಿದ್ದಾರೆ. ಕಾರ್ಯಬಾಹುಳ್ಯವಿರುವ ಸಾಮಾನ್ಯರನ್ನು ಒತ್ತಾಯಿಸಿ ಅಥವಾ ಕನ್ನಡ ಕಡತವನ್ನು ತಿರಸ್ಕರಿಸಿ ಕನ್ನಡ ಕಡತಗಳೇ ರಕಾರಿ ಕಚೇರಿಗಳಲ್ಲಿ ಇಲ್ಲದ ಸ್ಥಿತಿ ನಿರ್ಮಾಣಗೊಂ ಇಂದಿನ ಸ್ಥಿತಿಯನ್ನು ಸುಧಾರಿಸಬೇಕಾದರೆ ಕಾಸರಗೋಡಿನ ಎಲ್ಲ ಕನ್ನಡ ಸಂಘ-ಸಂಸ್ಥೆಗಳು, ಸಾಂಸ್ಕೃತಿಕ ಸಂಘಟನೆಗಳು, ಜಾತಿ ಸಂಘಟನೆಗಳು , ನ್ಯಾಯವಾದಿಗಳು, ರಾಜಕೀಯ ಸಂಘಟನೆಗಳು ಪರಸ್ಪರ ಕೈಜೋಡಿಸಿ ಒಗ್ಗಟ್ಟಿನಿಂದ ಹೋರಾಡಬೇಕಿದೆ ಎಂದರು. ಭಾಷಾ ಮಸೂದೆಯಲ್ಲಿ ತಿದ್ದುಪಡಿಗಾಗಿ ನಡೆಸುವ ಹೋರಾಟ ತೀವ್ರಗೊಳಿಸಲು, ಇದರಂಗವಾಘಿ ಕಾಸರಗೋಡು ಜಿಲ್ಲೆಯ ಪ್ರಮುಖ ಶಿಕ್ಷಣ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
  
ಘಟಕದ ಅಧ್ಯಕ್ಷೆ ಜ್ಯೋತಿ ಕೆ. ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಉಪಾಧ್ಯಕ್ಷ ಕೆ. ವಿ. ಸತ್ಯನಾರಾಯಣ ರಾವ್, ಪೆರಡಾಲ ನವಜೀವನ ಶಾಲಾ ಮುಖ್ಯ ಶಿಕ್ಷಕ ಶಂಕರ ಸಾರಡ್ಕ, ನಿವೃತ್ತ ಪ್ರಾಂಶುಪಾಲ ಬೇಸಿ ಗೋಪಾಲಕೃಷ್ಣ ಭಟ್, ಮುಳ್ಳೇರಿಯ ಶಾಲಾ ಮುಖ್ಯ ಶಿಕ್ಷಕ ಎ. ವಿಷ್ಣು ಭಟ್, ಕಾರಡ್ಕ ಶಾಲೆಯ ಮುಖ್ಯ ಶಿಕ್ಷಕ ಕೇಶವ ಪ್ರಸಾದ್ ಎಸ್., ಅಗಲ್ಪಾಡಿ ಶಾಲಾ ಮುಖ್ಯ ಶಿಕ್ಷಕ ನಾಗರಾಜ ಬಿ., ನೀರ್ಚಾಲು ಶಾಲಾ ಮುಖ್ಯಶಿಕ್ಷಕ ವೆಂಕಟರಾಜ ಸಿ. ಎಚ್., ವಿದ್ಯಾಗಿರಿ ಶಾಲಾ ಮುಖ್ಯಶಿಕ್ಷಕಿ ಅಂಬಿಕ ಸರಸ್ವತಿ ಐ., ಕಿಳಿಂಗಾರು ಶಾಲಾ ಮುಖ್ಯ ಸಿಕ್ಷಕ ಕೆ. ರಾಮಕೃಷ್ಣ ಭಟ್, ಅಗಲ್ಪಾಡಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ ಭಟ್ ಕೆ. ಎಮ., ಏತಡ್ಕ ಶಾಲಾ ಮುಖ್ಯ ಶಿಕ್ಷಕಿ ಸರೋಜ ಪಿ., ನಾರಾಯಣ ಮಂಗಲ ಶಾಲಾ ಮುಖ್ಯಶಿಕ್ಷಕ ಗೋಪಾಲಕೃಷ್ಣ ಭಟ್ ಕೆ., ಬಾಳೆಮೂಲೆ ಶಾಲಾ ಮುಖ್ಯ ಶಿಕ್ಷಕ ಜನಾರ್ಧನ ನಾಯಕ್ ಚೆರ್ಚೆಯಲ್ಲಿ ಭಾಗವಹಿಸಿದ್ದರು. ಕುಂಬಳೆ ಉಪಜಿಲ್ಲಾ ಘಟಕ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಕಮಲಾಕ್ಷ ನಾಯಕ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಕೆ. ವಿಷಯ ಪ್ರಸ್ತಾಪಿಸಿದರು. ಚಿತ್ರ:11ಕೆಎಸ್‌ಸಭೆ, 11ಕೆಎಸ್‌ಸಭೆ1

share
ವಾರ್ತಾಭಾರತಿ
ವಾರ್ತಾಭಾರತಿ
Next Story
X