Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಿಸಾನ್ ಆನ್‌ಲೈನ್ ಮಾರುಕಟ್ಟೆಗೆ ಚಾಲನೆ

ಕಿಸಾನ್ ಆನ್‌ಲೈನ್ ಮಾರುಕಟ್ಟೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ11 Jan 2016 11:35 PM IST
share
ಕಿಸಾನ್ ಆನ್‌ಲೈನ್ ಮಾರುಕಟ್ಟೆಗೆ ಚಾಲನೆ

ಬೆಂಗಳೂರು, ಜ.11: ಆನ್‌ಲೈನ್ ಮಾರುಕಟ್ಟೆ ವ್ಯವಸ್ಥೆಯು ರೈತರು ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಿಕೊಂಡು, ತಮ್ಮ ಬೆಳೆಗಳಿಗೆ ಉತ್ತಮ ಬೆಲೆಯನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ಗುಂಡೂರಾವ್ ತಿಳಿಸಿದ್ದಾರೆ.
ಸೋಮವಾರ ನಗರದ ಖಾಸಗಿ ಹೊಟೇಲ್ ಒಂದರಲ್ಲಿ ‘ಕಿಸಾನ್‌ಮಾರುಕಟ್ಟೆ’ (ಜಿಚ್ಞಞಚ್ಟಛಿಠಿ.್ಚಟಞ) ವೆಬ್‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ಆನ್‌ಲೈನ್ ಮಾರುಕಟ್ಟೆ ವ್ಯವಸ್ಥೆ ಜಾರಿಯಿಂದ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪುತ್ತದೆ ಎಂದರು.
ಎಪಿಎಂಸಿ ಮೂಲಕ ಈ ಮಾರುಕಟ್ಟೆ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಬೀದರ್‌ನಿಂದ ಚಾಮರಾಜನಗರದವರೆಗೆ ಯಾರು ಎಲ್ಲಿ ಬೇಕಾದರೂ ತಮ್ಮ ಕೃಷಿ ಉತ್ಪನ್ನಗಳನ್ನು ಬಿಡ್ ಮಾಡಬಹುದು. ಹಣಕಾಸಿನ ವ್ಯವಹಾರ ಪಾರದರ್ಶಕವಾಗಿ ನಡೆಯುತ್ತದೆ. ಇದರಿಂದಾಗಿ, ರೈತರಿಗೆ ಯಾವುದೇ ರೀತಿಯ ಮೋಸ, ವಂಚನೆ ಮಾಡಲು ಸಾಧ್ಯವಾಗುವುದಿಲ್ಲ ಎಂದು ದಿನೇಶ್ ಹೇಳಿದರು.
ರೈತರಿಗೆ ತಂತ್ರಜ್ಞಾನ ಬಳಕೆಯ ಕುರಿತು ಹೆಚ್ಚಿನ ಮಾಹಿತಿ ಇರುವುದಿಲ್ಲ. ಆದುದರಿಂದ, ಅವರನ್ನು ವಂಚನೆ ಮಾಡುವ ಸಾಧ್ಯತೆ ಇರುತ್ತದೆ. ಈ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾಲ್‌ಸೆಂಟರ್‌ಗಳನ್ನು ಆರಂಭಿಸಲಾಗಿದೆ. ರೈತರು ತಾವು ಬೆಳೆಯುವ ಉತ್ಪನ್ನಗಳ ಬೆಲೆಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ನೀಡುವ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ದಿನೇಶ್‌ಗುಂಡೂರಾವ್ ತಿಳಿಸಿದರು.
ಕಿಸಾನ್ ಮಾರುಕಟ್ಟೆ ವ್ಯವಸ್ಥೆಯ ಮುಖ್ಯಸ್ಥ ತ್ಯಾಗರಾಜು ರಾಳಪಲ್ಲಿ ಮಾತನಾಡಿ, ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ, ದೇಶದ ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲವಾಗುವಂತೆ ಈ ವೆಬ್‌ಸೈಟ್ ಆರಂಭಿಸಲಾಗಿದೆಯೇ ಹೊರತು, ಇದರಲ್ಲಿ ಯಾವುದೇ ಲಾಭದ ಉದ್ದೇಶವಿಲ್ಲ ಎಂದರು.
ರೈತರು ಈ ಆನ್‌ಲೈನ್ ಮಾರುಕಟ್ಟೆಯಲ್ಲಿ ಸದಸ್ಯರಾಗಲು ಯಾವುದೇ ಶುಲ್ಕವನ್ನು ಪಾವತಿಸುವ ಅಗತ್ಯವಿಲ್ಲ. ಉಚಿತವಾಗಿ ಸದಸ್ಯತ್ವ ಪಡೆದುಕೊಂಡು ತಾವು ಬೆಳೆದಂತಹ ಬೆಳೆಗಳನ್ನು ನ್ಯಾಯಯುತವಾದ ಬೆಲೆಗೆ ಮಾರಾಟ ಮಾಡಬಹುದಾಗಿದೆ ಎಂದು ಅವರು ಹೇಳಿದರು.
ಹೂ, ಹಣ್ಣು, ಧಾನ್ಯ, ಮಸಾಲೆ ಪದಾರ್ಥಗಳು, ಕುರಿ, ಮೀನು, ಕೋಳಿ, ಗೊಬ್ಬರ, ವ್ಯವಸಾಯಕ್ಕೆ ಬಳಸುವ ಉಪಕರಣಗಳನ್ನು ಈ ಆನ್‌ಲೈನ್ ವ್ಯವಸ್ಥೆಯ ಮೂಲಕ ಮಾರಾಟ ಮಾಡಬಹುದು ಎಂದು ತ್ಯಾಗರಾಜು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕ ಆರ್.ವಿ.ವೆಂಕಟೇಶ್, ಮಾಜಿ ಮೇಯರ್ ವೆಂಕಟೇಶ್‌ಮೂರ್ತಿ, ಕಿಸಾನ್ ಮಾರುಕಟ್ಟೆಯ ಸಹ ಮುಖ್ಯಸ್ಥ ಆರ್.ಸುರೇಶ್‌ಕುಮಾರ್, ಮುಖಂಡರಾದ ಮೋಹನ್‌ಕುಮಾರ್, ಅಮರ್‌ನಾರಾಯಣ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X