ದುಬೈ: ಗಲ್ಫ್ ಇಶಾರ ಪತ್ರಿಕೆ ಬಿಡುಗಡೆ

ದುಬೈ, ಜ.11: ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರ ಸಮಸ್ಯೆಗಳಿಗೆ ಸರಕಾರ ಸಕರಾತ್ಮಕವಾಗಿ ಸ್ಪಂದಿಸಬೇಕಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಕಲ್ಚರಲ್ ಫೌಂಡೇಶನ್(ಕೆಸಿಎಫ್) ಅನಿವಾಸಿ ಕನ್ನಡಿಗರಿಗೆ ಸಿಗಬೇಕಾಗಿರುವ ಸೌಲಭ್ಯಗಳನ್ನು ಒದಗಿಸಲು ನಡೆಸುತ್ತಿರುವ ಪ್ರಯತ್ನದೊಂದಿಗೆ ಕೈಜೋಡಿಸಲು ಸಿದ್ಧ ಎಂದು ಕರ್ನಾಟಕ ವಿಧಾನಸಭೆೆಯ ಸ್ಪೀಕರ್ ಕಾಗೋಡು ತಿಮ್ಮಪ್ಪ ಭರವಸೆ ನೀಡಿದರು. ಕೆಸಿಎಫ್ ಸಾರಥ್ಯದಲ್ಲಿ ಆರಂಭಗೊಂಡ ‘ಗಲ್ಫ್ ಇಶಾರ’ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತಾಡಿದರು.
Next Story





