Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿರುವ...

ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿರುವ ಪಿಡಿಪಿ ಅಧ್ಯಕ್ಷೆಯ ವೌನ

ವಾರ್ತಾಭಾರತಿವಾರ್ತಾಭಾರತಿ12 Jan 2016 11:31 PM IST
share
ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿರುವ ಪಿಡಿಪಿ ಅಧ್ಯಕ್ಷೆಯ ವೌನ

ಹೊಸದಿಲ್ಲಿ,ಜ.12: ಪಿಡಿಪಿ ಅಧ್ಯಕ್ಷೆ ಮುಫ್ತಿ ಮೆಹಬೂಬ ಅವರ ವೌನವು ಮುಖ್ಯಮಂತ್ರಿ ಮುಫ್ತಿ ಮುಹಮ್ಮದ್ ಸಯೀದ್ ಅವರ ನಿಧನದ ಬಳಿಕ ರಾಜಕೀಯ ಅನಿಶ್ಚಿತತೆಯ ಸುಳಿಯಲ್ಲಿ ಸಿಲುಕಿರುವ ಜಮ್ಮು-ಕಾಶ್ಮೀರದಲ್ಲಿ ಸರಕಾರ ರಚನೆಯ ಕುರಿತಂತೆ ಬಿಜೆಪಿಯಲ್ಲಿ ತಲ್ಲಣಕ್ಕೆ ಕಾರಣವಾಗಿದೆ,ಅದರ ತವಕ,ಕಾತರಗಳು ಹೆಚ್ಚುತ್ತಿವೆ.

ಪ್ರಸಕ್ತ ತನ್ನ ತಂದೆಯ ನಿಧನದ ಶೋಕಾಚರಣೆಯಲ್ಲಿರುವ ಮೆಹಬೂಬ ತಾನು ಮೈತ್ರಿಯನ್ನು ಮುಂದುವರಿಸಲು ಬಯಸಿರುವೆನೇ ಎನ್ನುವುದನ್ನು ಬಿಜೆಪಿಗೆ ಇನ್ನಷ್ಟೇ ತಿಳಿಸಬೇಕಾಗಿದೆ. ರಾಜ್ಯದಲ್ಲಿ ಸ್ಥಿರ ಸರಕಾರವನ್ನೊದಗಿಸಲು ಸಯೀದ್ 10 ತಿಂಗಳ ಹಿಂದೆ ಬಿಜೆಪಿಯೊಡನೆ ಮೈತ್ರಿಯನ್ನು ಮಾಡಿಕೊಂಡಿದ್ದರು. ಸೈದ್ಧಾಂತಿಕವಾಗಿ ವಿಭಿನ್ನ ನಿಲುವುಗಳನ್ನು ಹೊಂದಿರುವ ಈ ಪಕ್ಷಗಳ ಮೈತ್ರಿ ಮುಂದುವರಿಯುವ ಬಗ್ಗೆ ಆಗಿನಿಂದಲೇ ಊಹಾಪೋಹಗಳು ಕೇಳಿ ಬರುತ್ತಲೇ ಇದ್ದವು.


ಮುಂದೇನಾಗಲಿದೆ?

ಮೆಹಬೂಬ ಅವರು ಅವಸರದಲ್ಲಿ ಮುಖ್ಯಮಂತ್ರಿ ಗಾದಿಯನ್ನೇರಲು ಇಷ್ಟ ಪಡುತ್ತಿಲ್ಲ ಎನ್ನುವುದು ಈಗಿನ ಗೊಂದಲಮಯ ಸ್ಥಿತಿಯಲ್ಲಿ ಸ್ಪಷ್ಟವಾಗಿರುವ ಏಕೈಕ ಸಂಗತಿಯಾಗಿದೆ. ಇದು ಮೆಹಬೂಬ ಅವರ ವೌನದಲ್ಲಿ ಕಣ್ಣಿಗೆ ಕಾಣದ ಹಲವಾರು ವಿಷಯಗಳು ಅಡಗಿರಬಹುದು ಎಂಬ ಬಿಜೆಪಿ ಪಾಳೆಯದಲ್ಲಿನ ಶಂಕೆಯನ್ನು ಹೆಚ್ಚಿಸಿದೆ.
ತನ್ನ ಷರತ್ತುಗಳ ಮೇರೆಗೆ ಮೈತ್ರಿಕೂಟವನ್ನು ಮುಂದುವರಿಸಲು ಮೆಹಬೂಬ ಬಯಸುತ್ತಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಸರಕಾರ ರಚನೆಗಾಗಿ ಚರ್ಚಿಸಲು ಒಟ್ಟಿಗೆ ಕುಳಿತಾಗ ಕಠಿಣ ಷರತ್ತುಗಳನ್ನು ಮುಂದಿಡಲು ಅವರು ವೇದಿಕೆಯನ್ನು ಸಿದ್ಧಪಡಿಸಿಕೊಳ್ಳುತ್ತಿರಬಹುದು ಎಂದು ಬಿಜೆಪಿ ನಾಯಕರು ಶಂಕಿಸಿದ್ದಾರೆ. ಹಿಂದಿನ ಸರಕಾರದಲ್ಲಿ ಉಭಯ ಪಕ್ಷಗಳು ಹೊಂದಿದ್ದ ಖಾತೆಗಳ ವಿನಿಮಯದ ಮೇಲೂ ಮೆಹಬೂಬ ಕಣ್ಣಿರಿಸಿರಬಹುದು ಎನ್ನಲಾಗಿದೆ.

ತನ್ನ ತಂದೆ ಸಯೀದ್ ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾಗ ಪ್ರಧಾನಿ ನರೇಂದ್ರ ಮೋದಿಯವರಾಗಲೀ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆಗಲೀ ಅವರನ್ನು ನೋಡಲು ಬಂದಿರಲಿಲ್ಲವೆಂಬ ಅಸಮಾಧಾನ ಮೆಹಬೂಬರನ್ನು ಕಾಡುತ್ತಿದೆ ಎನ್ನುವುದು ಮೂಲಗಳ ಹೇಳಿಕೆ. ಅದೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಎರಡು ಬಾರಿ ಆಸ್ಪತ್ರೆಗೆ ತೆರಳಿ ಸಯೀದ್‌ರನ್ನು ಭೇಟಿಯಾಗಿದ್ದರು.

 ಸರಕಾರ ರಚನೆಯ ಸಂದರ್ಭ ಉಭಯ ಪಕ್ಷಗಳು ಒಪ್ಪಿಕೊಂಡಿದ್ದ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪ್ರಮುಖ ಅಂಶಗಳಲ್ಲೊಂದಾಗಿದ್ದ ಜಮ್ಮು-ಕಾಶ್ಮೀರಕ್ಕೆ ಪ್ಯಾಕೇಜ್ ಬಗ್ಗೆ ಬಿಜೆಪಿ ಶ್ರಮಿಸಿಲ್ಲ ಎಂದೂ ಪಿಡಿಪಿ ಅಸಮಾಧಾನಗೊಂಡಿದೆ ಎನ್ನಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X