Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಘರ್ಷಪೀಡಿತ ವಲಯಗಳು ಮಕ್ಕಳ ನರಕ: ಪ್ರತಿ...

ಸಂಘರ್ಷಪೀಡಿತ ವಲಯಗಳು ಮಕ್ಕಳ ನರಕ: ಪ್ರತಿ 4ರಲ್ಲಿ 1 ಮಗುವಿನ ಭವಿಷ್ಯ ಅಪಾಯದಲ್ಲಿ; ಯುನಿಸೆ ಫ್

ವಾರ್ತಾಭಾರತಿವಾರ್ತಾಭಾರತಿ13 Jan 2016 12:00 AM IST
share

ಲಂಡನ್, ಜ. 12: ಸಂಘರ್ಷ ವಲಯಗಳಲ್ಲಿ ಬೆಳೆಯುವ ಪ್ರತಿ ನಾಲ್ಕು ಮಕ್ಕಳ ಪೈಕಿ ಒಂದು ಮಗು ಶಿಕ್ಷಣದಿಂದ ವಂಚಿತವಾಗುತ್ತದೆ ಎಂದು ವಿಶ್ವಸಂಸ್ಥೆಯ ಮಕ್ಕಳ ಸಂಸ್ಥೆ ಯುನಿಸೆಫ್ ಮಂಗಳವಾರ ಹೇಳಿದೆ. ದಕ್ಷಿಣ ಸುಡಾನ್, ನೈಜರ್, ಸುಡಾನ್ ಮತ್ತು ಅಫ್ಘಾನಿಸ್ತಾನ ಮುಂತಾದ ದೇಶಗಳಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ಅದು ಹೇಳಿದೆ.
ಸಂಘರ್ಷ ಪೀಡಿತ 22 ದೇಶಗಳಲ್ಲಿ ಶಾಲೆಗೆ ಹೋಗುವ ಪ್ರಾಯದ ಸುಮಾರು 2.4 ಕೋಟಿ ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂದು ಯುನಿಸೆಫ್ ನಡೆಸಿದ ಅಧ್ಯಯನವೊಂದರ ವೇಳೆ ಬೆಳಕಿಗೆ ಬಂದಿದೆ.
ಈ ಪೈಕಿ ಶಾಲೆಯಿಂದ ಹೊರಗಿರುವ ಮಕ್ಕಳ ಪ್ರಮಾಣ ದಕ್ಷಿಣ ಸುಡಾನ್‌ನಲ್ಲಿ 51% ಆಗಿದ್ದು ಅತ್ಯಧಿಕವಾಗಿದೆ. ನಂತರದ ಸ್ಥಾನದಲ್ಲಿ ಬರುವುದು ನೈಜರ್ (47%), ಸುಡಾನ್ (41%) ಮತ್ತು ಅಫ್ಘಾನಿಸ್ತಾನ (40%).
‘‘ಮಕ್ಕಳು ಶಾಲೆಯಲ್ಲಿಲ್ಲದಿರುವಾಗ ಅವರು ಶೋಷಣೆಗೊಳಗಾಗುವ ಅಪಾಯ ಅತಿ ಹೆಚ್ಚು. ಅವರನ್ನು ಸಶಸ್ತ್ರ ಗುಂಪುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ’’ ಎಂದು ಯುನಿಸೆಫ್‌ನ ಶಿಕ್ಷಣ ಮುಖ್ಯಸ್ಥೆ ಜೋ ಬೌರ್ನ್ ಹೇಳುತ್ತಾರೆ.
‘‘ಒಮ್ಮೆ ಸಂಘರ್ಷ ಮುಗಿದ ಬಳಿಕ, ತಮ್ಮ ಸಮುದಾಯಗಳನ್ನು ಹೇಗೆ ಮರುನಿರ್ಮಿಸಬೇಕು ಎಂಬ ಬಗ್ಗೆ ಜ್ಞಾನ ಮತ್ತು ಕೌಶಲಗಳನ್ನು ಶಾಲೆಗಳು ಮಕ್ಕಳಿಗೆ ನೀಡುತ್ತವೆ. ತಾವು ಅನುಭವಿಸಿದ ಆಘಾತವನ್ನು ನಿಭಾಯಿಸಲು ಅಗತ್ಯವಾದ ಸ್ಥಿರತೆ ಮತ್ತು ವ್ಯವಸ್ಥೆಯನ್ನು ಶಾಲೆಗಳು ಕಡಿಮೆ ಅವಧಿಯಲ್ಲಿ ಮಕ್ಕಳಿಗೆ ಒದಗಿಸುತ್ತವೆ’’ ಎಂದು ಬೌರ್ನ್ ನುಡಿದರು.
ಶಿಕ್ಷಣವಿಲ್ಲದೆ ಮಕ್ಕಳು ಬೆಳೆದರೆ, ಅವರ ಭವಿಷ್ಯ ಡೋಲಾಯಮಾನವಾಗಿರುತ್ತದೆ ಎಂದು ಯುನಿಸೆಫ್ ಹೇಳುತ್ತದೆ.
‘‘ಪ್ರಾಥಮಿಕ ಓದುವಿಕೆ ಮತ್ತು ಬರೆಯುವಿಕೆ ಜ್ಞಾನವಿಲ್ಲದೆ, ಈ ಮಕ್ಕಳು ತಮ್ಮ ಭವಿಷ್ಯವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಾರೆ ಹಾಗೂ ದೊಡ್ಡವರಾದಾಗ ತಮ್ಮ ಸಮಾಜ ಮತ್ತು ಆರ್ಥಿಕತೆಗೆ ದೇಣಿಗೆ ನೀಡುವ ಅವಕಾಶವನ್ನು ಕಳೆದುಕೊಳ್ಳುತ್ತಾರೆ’’’ ಎಂದು ಬೌರ್ನ್ ಹೇಳುತ್ತಾರೆ.
ಮಾನವೀಯ ಪರಿಹಾರ ಕಾರ್ಯಗಳಲ್ಲಿ ಶಿಕ್ಷಣ ಅತ್ಯಂತ ನಿರ್ಲಕ್ಷಕ್ಕೊಳಗಾದ ಕ್ಷೇತ್ರವಾಗಿದೆ. 2014ರಲ್ಲಿ, ಒಟ್ಟು ಮಾನವೀಯ ನೆರವಿನ ಕೇವಲ 2 ಶೇಕಡ ಶಿಕ್ಷಣಕ್ಕೆ ಲಭಿಸಿದೆ ಎಂದು ಯುನೆಸ್ಕೊ ಜೂನ್‌ನಲ್ಲಿ ಹೇಳಿತ್ತು.
ಆದರೆ, ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಶಿಕ್ಷಣಕ್ಕೆ ಇದಕ್ಕಿಂತ 10 ಪಟ್ಟು ಹೆಚ್ಚು, ಅಂದರೆ ಹೆಚ್ಚುವರಿಯಾಗಿ 230 ಕೋಟಿ ಡಾಲರ್ ನಿಧಿ ಬೇಕಾಗಿದೆ ಎಂದು ಯುನೆಸ್ಕೊ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X