Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಸೇನೆ ಯಾವುದಕ್ಕೂ ಸನ್ನದ್ಧ ಸೇನಾ...

ಭಾರತೀಯ ಸೇನೆ ಯಾವುದಕ್ಕೂ ಸನ್ನದ್ಧ ಸೇನಾ ಮುಖ್ಯಸ್ಥ ಜ| ದಲ್ಬೀರ್ ಸಿಂಗ್ ಗುಡುಗು

ವಾರ್ತಾಭಾರತಿವಾರ್ತಾಭಾರತಿ13 Jan 2016 6:32 PM IST
share
ಭಾರತೀಯ ಸೇನೆ ಯಾವುದಕ್ಕೂ ಸನ್ನದ್ಧ ಸೇನಾ ಮುಖ್ಯಸ್ಥ ಜ| ದಲ್ಬೀರ್ ಸಿಂಗ್ ಗುಡುಗು

ಹೊಸದಿಲ್ಲಿ,ಜ.13: ಭಾರತಕ್ಕೆ ನೋವನ್ನುಂಟು ಮಾಡಿದವರಿಗೆ ನಮ್ಮ ಆಯ್ಕೆಯ ಸಮಯ ಮತ್ತು ಸ್ಥಳದಲ್ಲಿ ಅಂತಹುದೇ ನೋವನ್ನುಣ್ಣಿಸುವುದಾಗಿ ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಅವರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಭೂಸೇನೆಯ ದಂಡನಾಯಕ ಜ| ದಲ್ಬೀರ್ ಸಿಂಗ್ ಅವರು,ಭಾರತೀಯ ಸೇನೆಯು ಯಾವುದೇ ಕಾರ್ಯಕ್ಕೂ ಸನ್ನದ್ಧವಾಗಿದೆ ಎಂದು ಗುಡುಗಿದ್ದಾರೆ.


ಆದರೆ ರಕ್ಷಣಾ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಲು ತಾನು ಬಯಸುವುದಿಲ್ಲ ಎಂದು ಅವರು ಹೇಳಿದರು.ಬುಧವಾರ ಇಲ್ಲ್ಲಿ ಸುದ್ದಿಗಾರರೊಂದಿಗೆ ಜ.2ರ ಪಠಾಣ್‌ಕೋಟ್ ದಾಳಿಯ ಕುರಿತು ಮಾತನಾಡಿದ ಅವರು,ವಾಯುನೆಲೆಯ ಮೇಲೆ ದಾಳಿ ನಡೆಸಿದ್ದ ಆರು ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆ ಸಂದರ್ಭ ಭದ್ರತಾ ಪಡೆಗಳ ನಡುವೆ ಸಮನ್ವಯದ ಸಮಸ್ಯೆಯಿರಲಿಲ್ಲ ಎಂದು ಒತ್ತಿ ಹೇಳಿದರು.


ಕಾರ್ಯಾಚರಣೆಯ ಸಂದರ್ಭ ಭದ್ರತಾ ಪಡೆಗಳ ನಡುವೆ ಸಮನ್ವಯದ ಕೊರತೆಯಿತ್ತು,ಎಲ್ಲ ಭಯೋತ್ಪಾದಕರನ್ನು ಕೊಲ್ಲಲು ಮತ್ತು ವಾಯುನೆಲೆಯನ್ನು ಆತಂಕಮುಕ್ತಗೊಳಿಸಲು ತಗುಲಿದ ಮೂರು ದಿನಗಳ ಸಮಯ ತುಂಬ ದೀರ್ಘವಾಗಿತ್ತು ಎಂಬ ಆರೋಪಗಳಿಗೆ ಅವರು ಉತ್ತರಿಸುತ್ತಿದ್ದರು.
ಇಬ್ಬರು ಭಯೋತ್ಪಾದಕಕರು ಅಡಗಿಕೊಂಡಿದ್ದ ಕಟ್ಟಡದಲ್ಲಿ ಇಬ್ಬರು ಯೋಧರಿದ್ದರು. ನಾವು ಅವರನ್ನು ಮೊದಲು ಸುರಕ್ಷಿತವಾಗಿ ಹೊರಗೆ ತೆಗೆದು ಬಳಿಕ ಪ್ರತಿದಾಳಿಯನ್ನು ನಡೆಸಬೇಕಾಗಿತ್ತು. ಅದು ಸುಲಭದ ಕಾರ್ಯಾಚರಣೆಯಾಗಿರಲಿಲ್ಲ ಮತ್ತು ಸಾವುನೋವುಗಳನ್ನು ಕನಿಷ್ಠಗೊಳಿಸಲು ನಾವು ನಮ್ಮದೇ ಸಮಯವನ್ನು ತೆಗೆದುಕೊಂಡಿದ್ದೆವು ಎಂದು ಸುಹಾಗ್ ವಿವರಿಸಿದರು.


ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಸಮಯದ ನಿರ್ಧಾರವನ್ನು ಸ್ಥಳದಲ್ಲಿರುವ ಅದರ ಮುಖ್ಯಸ್ಥರಿಗೇ ಬಿಡಬೇಕಾಗುತ್ತದೆ ಎಂದರು.
  ಭಯೋತ್ಪಾದಕರೊಂದಿಗೆ ಮೊದಲ ಮುಖಾಮುಖಿಯ ಮೊದಲ ಕೆಲವು ನಿಮಿಷಗಳಲ್ಲಿ ನಮ್ಮ ಯೋಧರು ಕೊಲ್ಲಲ್ಪಟ್ಟಿದ್ದರು, ಆ ಬಳಿಕ ನಮ್ಮ ಪಡೆಗಳಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ಅವರು ಹೇಳಿದರು. ಭಾರೀ ಬಿಗಿಭದ್ರತೆಯ ವಾಯುನೆಲೆಯಲ್ಲಿ ಪ್ರವೇಶಿಸಲು ಭಯೋತ್ಪಾದಕರಿಗೆ ಅವಕಾಶ ನೀಡಿದ್ದೇ ಭದ್ರತಾ ವ್ಯವಸ್ಥೆಯಲ್ಲಿನ ಲೋಪದೋಷಗಳು ಎಂಬ ಟೀಕೆಗಳಿಗೆ ಸರಕಾರವು ಗುರಿಯಾಗಿತ್ತು.


 ಸಂಭವನೀಯ ದಾಳಿಗಳ ಬಗ್ಗೆ ಗುಪ್ತಚರ ಮಾಹಿತಿಗಳಿದ್ದರೂ ಭಯೋತ್ಪಾದಕರು ಹೇಗೆ ಒಳಪ್ರವೇಶಿಸಿದ್ದರು ಎಂಬ ಬಗ್ಗೆ ಎನ್‌ಐಎ ತನಿಖೆಯನ್ನು ನಡೆಸುತ್ತಿದೆ. ಅದು ಕಳವಳಕಾರಿ ವಿಷಯವಾಗಿದೆ ಮತ್ತು ನಾವು ಕಲಿಯಬೇಕಾದ ಮುಖ್ಯ ಪಾಠಗಳಲ್ಲಿ ಒಂದಾಗಿದೆ ಎಂದ ಅವರು, ಭಯೋತ್ಪಾದಕರು ಜಮ್ಮು-ಕಾಶ್ಮೀರದ ಮೂಲಕ ಗಡಿಯೊಳಕ್ಕೆ ನುಗ್ಗುವ ಪ್ರಯತ್ನ ವಿಫಲಗೊಂಡ ನಂತರ ಪಂಜಾಬ್ ಗಡಿಯನ್ನು ಬಳಸಿಕೊಂಡಿದ್ದರು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X