Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾವಿನ ವಿಷದ ಮೂಲಕ ಹೃದಯ ಸಂಬಂಧಿ...

ಹಾವಿನ ವಿಷದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಔಷಧ

ವಾರ್ತಾಭಾರತಿವಾರ್ತಾಭಾರತಿ13 Jan 2016 11:21 PM IST
share
  • ಹಾವಿನ ವಿಷದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಔಷಧ
  • ಹಾವಿನ ವಿಷದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಔಷಧ

ಶಿವಮೊಗ್ಗ, ಜ. 13: ಮೂಲತಃ ಶಿವಮೊಗ್ಗದವರಾದ ಪ್ರಸ್ತುತ ಸಿಂಗಾಪುರದ ‘ನ್ಯಾಷನಲ್ ಯುನಿವರ್ಸಿಟಿ ಆಫ್ ಸಿಂಗಾಪುರ್, ವಿಶ್ವವಿದ್ಯಾನಿಲಯದಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿರುವ ಆರ್.ಮಂಜುನಾಥ ಕಿಣಿಯವರು ಔಷಧ ಕ್ಷೇತ್ರದಲ್ಲಿ ಮಹತ್ವದ ಸಂಶೋಧನೆಯೊಂದನ್ನು ಕೈಗೊಂಡಿದ್ದಾರೆ. ಹಾವಿನ ವಿಷದ ಮೂಲಕ ಹೃದಯ ಸಂಬಂಧಿ ಕಾಯಿಲೆ ಗುಣಪಡಿಸುವ ಔಷಧವೊಂದರ ಪತ್ತೆ ಕಾರ್ಯ ನಡೆಸುತ್ತಿದ್ದಾರೆ. ಇವರ ಈ ಪ್ರಯತ್ನ ಇಡೀ ವಿಶ್ವದ ವೈದ್ಯಲೋಕದ ಗಮನ ಸೆಳೆದಿದೆ.
ಆರ್.ಮಂಜುನಾಥ ಕಿಣಿಯವರು ಕಾರ್ಯನಿಮಿತ್ತ ತಮ್ಮ ತವರೂರು ಶಿವಮೊಗ್ಗ ನಗರಕ್ಕೆ ಆಗಮಿಸಿದ್ದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವಿನ ವಿಷದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಔಷಧ ಕಂಡುಹಿಡಿಯುತ್ತಿರುವ ಸಂಶೋಧನೆಯ ಬಗ್ಗೆ ಮಾಹಿತಿ ಹಂಚಿಕೊಂಡರು. ಜೊತೆಗೆ ಶಿವಮೊಗ್ಗದಲ್ಲಿ ಕಳೆದ ತಮ್ಮ ಬಾಲ್ಯದ ಜೀವನದ ಕ್ಷಣಗಳನ್ನು ಮೆಲುಕು ಹಾಕಿದರು. ಯಶಸ್ವಿಯಾಗಿದೆ: ಈಗಾಗಲೇ ಹಾವಿನ ವಿಷದ ಮೂಲಕ ಮನುಷ್ಯನಲ್ಲಿ ಕಂಡುಬರುವ ಕೆಲ ರೋಗ-ರುಜಿನಗಳನ್ನು ಗುಣಪಡಿಸುವ ಔಷಧಗಳನ್ನು ಕಂಡುಹಿಡಿಯಲಾಗಿದೆ. ತಾವು ಹೃದಯ ಸಂಬಂಧಿ ಕಾಯಿಲೆ ಗುಣಪಡಿಸುವ ಔಷಧವನ್ನು, ಹಾವಿನ ವಿಷದ ಮೂಲಕ ಕಂಡುಹಿಡಿಯುತ್ತಿದ್ದೇನೆ. ಈಗಾಗಲೇ ಸಂಶೋಧನೆ ಪ್ರಾರಂಭಗೊಂಡಿದೆ. ಪ್ರಾರಂಭಿಕ ಹಂತದ ಯಶಸ್ಸು ಸಿಕ್ಕಿದೆ ಎಂದು ಮಾಹಿತಿ ನೀಡಿದರು. ಹಾವುಗಳ ವಿಷದಲ್ಲಿ ಹಲವು ಮಾದರಿಗಳಿವೆ. ಹಾಗೆಯೇ ಹಾವೊಂದರ ವಿಷದಲ್ಲಿ ಸುಮಾರು 250 ರಿಂದ 300 ‘ಫ್ರೊಟೀನ್’ ಅಂಶಗಳಿರುತ್ತವೆ. ಇದರಲ್ಲಿ ಒಂದು ‘ಟಾಕ್ಸಿನ್’ ಅಂಶದ ಮೂಲಕ ಹೃದಯ ಸಂಬಂಧಿ ಕಾಯಿಲೆಗಳಿಗೆ ಔಷಧ ಕಂಡುಹಿಡಿಯುವ ಪ್ರಯತ್ನ ನಡೆಸುತ್ತಿದ್ದೇನೆ ಎಂದು ವಿವರಣೆ ನೀಡಿದರು. ತಾವು ಕೈಗೊಂಡಿರುವ ಈ ಸಂಶೋಧನೆ ಪೂರ್ಣಗೊಳ್ಳಬೇಕಾದರೆ ಸುಮಾರು 25 ವಿವಿಧ ಹಂತದ ಪರೀಕ್ಷೆಗಳನ್ನು ನಡೆಸಬೇಕಾಗಿದೆ. ಈಗಾಗಲೇ 15 ಹಂತದ ಪರೀಕ್ಷೆಗಳನ್ನು ನಡೆಸಿದ್ದು, ಎಲ್ಲ ಪರೀಕ್ಷೆಗಳು ಯಶಸ್ವಿಯಾಗಿವೆ. ಸಕಾರಾತ್ಮಕ ಫಲಿತಾಂಶ ಹೊರಬಂದಿದೆ. ಇದು ತಮ್ಮಲ್ಲಿ ಹೊಸ ಆತ್ಮವಿಶ್ವಾಸ ಮೂಡುವಂತೆ ಮಾಡಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಇತರ ಹಂತಗಳ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದೇನೆ. ಎಲ್ಲ ಪರೀಕ್ಷೆ ಪೂರ್ಣಗೊಂಡು ಸಕಾರಾತ್ಮಕ ಫಲಿತಾಂಶ ಹೊರಬಂದರೆ, ನೀತಿ-ನಿಯಮಾವಳಿಗಳಿಗೆ ಅನುಗುಣವಾಗಿ ಔಷಧವನ್ನು ಮಾರುಕಟ್ಟೆಗೆ ಬಿಡುಗಡೆ ವಾಡುತ್ತೇನೆ ಎಂದು ಹೇಳಿದ್ದಾರೆ. ಹಾವಿನ ವಿಷದ ಮೂಲಕ ತಾವು ಕಂಡುಹಿಡಿಯುತ್ತಿರುವ ಹೊಸ ಔಷಧವು ರಕ್ತ ಹೆಪ್ಪುಗಟ್ಟುವಿಕೆ, ಬೈಪಾಸ್ ಸರ್ಜರಿ, ಹೃದಯ ವೈಫಲ್ಯ ಹಾಗೂ ಸಕ್ಕರೆ ಕಾಯಿಲೆಯಿಂದ ದೃಷ್ಟಿ ಹೀನದ ವೇಳೆ ಬಳಸುವಂತದ್ದಾಗಿದೆ. ಸಾಕಷ್ಟು ಪರಿಣಾಮಕಾರಿಯಾದುದ್ದಾಗಿದೆ ಎಂದು ಮಾಹಿತಿ ನೀಡಿದರು. ಹಿನ್ನೆಲೆ: ತಾವು ಮೂಲತಃ ಶಿವಮೊಗ್ಗ ನಗರದ ಬಸವನಗುಡಿ ಬಡಾವಣೆಯಲ್ಲಿ ಹುಟ್ಟಿ ಬೆಳೆದಿದ್ದೇನೆ. ತಾಯಿ ಅನುಸೂಯಾ ಬಾಯಿಯವರು ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬಾಲ್ಯದ ವಿದ್ಯಾಭ್ಯಾಸವನ್ನು ಶಿವಮೊಗ್ಗದಲ್ಲಿಯೇ ನಡೆಸಿದ್ದೇನೆ. ಎಂಎಸ್ಸಿ, ಪಿಎಚ್‌ಡಿ ಸೇರಿದಂತೆ ಹಲವು ಪದವಿಗಳನ್ನು ಸಂಪಾದಿಸಿದ್ದೇನೆ. ಹಲವು ದೇಶಗಳಿಗೆ ಭೇಟಿ ನೀಡಿದ್ದೇನೆ. ಪ್ರಸ್ತುತ ಸಿಂಗಾಪೂರದ ನ್ಯಾಷನಲ್ ಯುನಿವರ್ಸಿಟಿ ಆಫ್ ಸಿಂಗಾಪುರ್‌ದಲ್ಲಿ ಪ್ರೊಫೆಸರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದೇನೆ ಎಂದು ಹೇಳಿದರು. ‘ಇತ್ತೀಚೆಗೆ ಮೈಸೂರಿನಲ್ಲಿ ನಡೆದ ವಿಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಲು ಸಿಂಗಾಪೂರದಿಂದ ಆಗಮಿಸಿದ್ದೆ. ಹಾಗೆಯೇ ಹುಟ್ಟಿ ಬೆಳೆದ ಶಿವಮೊಗ್ಗಕ್ಕೆ ಬಂದು ಇಲ್ಲಿರುವ ಸ್ನೇಹಿತರು, ಒಡನಾಡಿಗಳು, ಸಂಬಂಧಿಕರನ್ನು ಮಾತನಾಡಿಸಿಕೊಂಡು ಹೋಗುತ್ತಿದ್ದೇನೆ. ಅವಕಾಶ ಸಿಕ್ಕಾಗಲೆಲ್ಲ ಶಿವಮೊಗ್ಗಕ್ಕೆ ಬರುತ್ತೇನೆ. ಇದು ನನ್ನ ನೆಚ್ಚಿನ ನಗರವಾಗಿದೆ’ ಎಂದು ಆರ್.ಮಂಜುನಾಥ ಕಿಣಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X