Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮ್ ಜೇಠ್ಮಲಾನಿಯ ನೆರವಿನ ಕೊಡುಗೆ;...

ರಾಮ್ ಜೇಠ್ಮಲಾನಿಯ ನೆರವಿನ ಕೊಡುಗೆ; ಇನ್ನೂ ಅಂಗೀಕರಿಸದ ಸೋನಿಯಾ ನ್ಯಾಶನಲ್ ಹೆರಾಲ್ಡ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ13 Jan 2016 11:52 PM IST
share

ಹೊಸದಿಲ್ಲಿ, ಜ.13: ನ್ಯಾಶನಲ್ ಹೆರಾಲ್ಡ್ ಶೇರು ಅವ್ಯವಹಾರದ ಕುರಿತು ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಹೂಡಿರುವ ಮೊಕದ್ದಮೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್‌ಗಾಂಧಿಯವರ ಪರ ನ್ಯಾಯಾಲಯದಲ್ಲಿ ವಾದಿಸುವ ಕೊಡುಗೆಯನ್ನು ಬಿಜೆಪಿಯ ಮಾಜಿ ನಾಯಕ ಹಾಗೂ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಅವರ ಮುಂದಿರಿಸಿದ್ದಾರೆ.

ಅಸಾಮಾನ್ಯ ನಡೆಯೊಂದರಲ್ಲಿ ತನ್ನ ಹಾಗೂ ರಾಹುಲ್ ವಿರುದ್ಧ ಜಾರಿಗೊಳಿಸಿರುವ ಸಮನ್ಸನ್ನು ರದ್ದುಪಡಿಸುವಂತೆ ಕೋರಿದ್ದ ಸೋನಿಯಾರ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಳ್ಳಿಹಾಕಿದ 2 ದಿನಗಳ ಬಳಿಕ ಡಿ.11ರಂದು ಜೇಠ್ಮಲಾನಿ, ಸೋನಿಯಾರಿಗೆ ಪತ್ರವೊಂದನ್ನು ಬರೆದಿದ್ದರು.
ತಮ್ಮ ಪಕ್ಷದಲ್ಲಿ ಹಲವು ಮಂದಿ ಮಹಾನ್ ವಕೀಲರಿದ್ದಾರೆಂಬುದು ತನಗೆ ತಿಳಿದಿದೆ. ಆದರೂ, ತಮಗೆ ಅಗತ್ಯವಾದಲ್ಲಿ ತನ್ನ ಸೇವೆಯು ತಮಗೆ ಲಭ್ಯವಾಗುವುದು ಎಂದು ಸೋನಿಯಾರಿಗೆ ಪತ್ರ ಬರೆದಿರುವ ಜೇಠ್ಮಲಾನಿ, ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಹಾಗೂ ರಾಹುಲ್‌ರ ಪರ ವಾದಿಸಲು ತನಗೆ ಯಾವುದೇ ಶುಲ್ಕ ನೀಡುವ ಅಥವಾ ಬೇರೆ ‘ಉಪಕಾರ’ ಮಾಡುವ ಅಗತ್ಯವಿಲ್ಲವೆಂಬ ಭರವಸೆ ನೀಡಿದ್ದಾರೆ.
ಸೋನಿಯಾ ಹಾಗೂ ರಾಹುಲ್ ಯಾವುದೇ ತಪ್ಪು ಮಾಡಿಲ್ಲವೆಂಬುದು ತನಗೆ ಮನವರಿಕೆಯಾಗಿದೆ. ತಾನು ವಿಚಾರಣಾ ನ್ಯಾಯಾಲಯದಲ್ಲಿ ಅವರ ಪರ ನಿಃಶುಲ್ಕವಾಗಿ ವಾದಿಸಲು ಸಿದ್ಧನಿದ್ದೇನೆ. ತನ್ನ ಕ್ರಮ ಸದಾ ಸ್ವಚ್ಛ ರಾಜಕೀಯದಿಂದ ಪ್ರೇರಿತವಾಗಿರುತ್ತದೆ. ಸೋನಿಯಾ ಹಾಗೂ ರಾಹುಲ್ ಯಾವುದೇ ತಪ್ಪು ಮಾಡದಿದ್ದರೂ, ರಾಜ್ಯಸಭೆಯಲ್ಲಿ ನಡೆಯುತ್ತಿರುವುದರ ಬಗ್ಗೆ ತನಗೆ ಅಸಮಾಧಾನವಿದೆ. ಅವರು ತಪ್ಪು ಮಾಡಿದ್ದಾರೆಂದು ಶಂಕಿಸಲು ತನಗೆ ಯಾವ ಕಾರಣವೂ ಇಲ್ಲ. ಅವರ ವಿರುದ್ಧದ ಆರೋಪಗಳು ಸುಳ್ಳು ಹಾಗೂ ದುರುದ್ದೇಶಪೂರಿತವೆಂದು ಜೇಠ್ಮಲಾನಿ ಪ್ರತಿಪಾದಿಸಿದ್ದಾರೆ. ‘ಇತ್ತೀಚಿನ ಬಿಹಾರ ಚುನಾವಣೆಯಲ್ಲಿ’ ತನ್ನ ಪಾತ್ರದ ಕುರಿತು ಜ್ಞಾಪಿಸಿ ಸೋನಿಯಾ ಹಾಗೂ ರಾಹುಲ್‌ರ ಮೇಲೆ ಪ್ರಭಾವ ಬೀರಲು ಅವರು ಯತ್ನಿಸಿದ್ದಾರೆ.
ಸೋನಿಯಾ ತನ್ನ ಕೊಡುಗೆ ಸ್ವೀಕರಿಸುವರೆಂದು ಜೇಠ್ಮಲಾನಿ ಯೋಚಿಸಿದ್ದರೆ, ಆ ರೀತಿ ಆಗಲೇ ಇಲ್ಲ. ಅವರಿಗೆ ಸರಿಯಾದ ಉತ್ತರ ದೊರಕದಿದ್ದಾಗ, ಡಿ.12ರಂದು ಸೋನಿಯಾರಿಗೆ ಇನ್ನೊಂದು ಪತ್ರ ಬರೆದರು. ತನ್ನ ಕೊಡುಗೆಯ ಬಗ್ಗೆ ಸೋನಿಯಾ ಪ್ರತಿಕ್ರಿಯೆ ನೀಡದಿರುವುದರಿಂದ ತಾನು ಸ್ವಯಂ ಹೇರಿಕೊಂಡಿದ್ದ ಕರ್ತವ್ಯದಿಂದ ಬಿಡುಗಡೆಗೊಂಡಿದ್ದೇನೆಂದು ಭಾವಿಸುತ್ತೇನೆಂದು ಅವರು ಹೇಳಿದ್ದರು.
ಆದಾಗ್ಯೂ, ಕೆಲವು ದಿನಗಳ ಬಳಿಕ ಜೇಠ್ಮಲಾನಿಯವರಿಗೆ ಸೋನಿಯಾರಿಂದ ಪತ್ರವೊಂದು ಬಂದಿತು. ಆದರೆ, ಅದರಲ್ಲಿ ಅವರ ಮೊದಲ ಪತ್ರ ತಲುಪಿದ ಬಗ್ಗೆ ಮಾತ್ರ ಉಲ್ಲೇಖವಿತ್ತು.
ಜೇಠ್ಮಲಾನಿ ಹಾಗೂ ಸ್ವಾಮಿಯವರ ನಡುವೆ ಸುದೀರ್ಘ ಕಾಲದಿಂದ ದ್ವೇಷವಿದೆ. ರಾಜೀವ್‌ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಪರಸ್ಪರರು ವಿಕೃತ ಟೀಕೆಗಳನ್ನು ಮಾಡಿಕೊಂಡಂದಿನಿಂದ ಅದು ಬೆಳೆದುಬಂದಿದೆ. ಸ್ವಾಮಿ, ಜೇಠ್ಮಲಾನಿಯವರಿಂದ ತೀವ್ರ ಪಾಟಿ ಸವಾಲಿಗೆ ಗುರಿಯಾಗಿದ್ದರು. ಜೇಠ್ಮಲಾನಿಯವರ ವಿರುದ್ಧ ವ್ಯಕ್ತಿಗತ ಆರೋಪ ಮಾಡುವ ಮೂಲಕ ಸ್ವಾಮಿ ಮುಯ್ಯಿ ತೀರಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X