Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 8 ಸಾವಿರ ಕಿ.ಮೀ. ರಾಜ್ಯ ಹೆದ್ದಾರಿ...

8 ಸಾವಿರ ಕಿ.ಮೀ. ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ: ಸಚಿವ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ14 Jan 2016 11:08 PM IST
share
8 ಸಾವಿರ ಕಿ.ಮೀ. ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ: ಸಚಿವ ಮಹದೇವಪ್ಪ

ಬೆಂಗಳೂರು, ಜ. 14: ಕೇಂದ್ರ ಸರಕಾರ ಪ್ರಸಕ್ತ ವರ್ಷ 1,656 ಕಿ.ಮೀ ರಾಜ್ಯ ಹೆದ್ದಾರಿಯನ್ನು (ಎಸ್.ಎಚ್) ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಸಮ್ಮತಿಸಿದೆ. ಇದರಿಂದಾಗಿ ಕರ್ನಾಟಕದ 8ಸಾವಿರ ಕಿ.ಮೀ. ಉದ್ದದ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಸಿದ್ದಾಪುರವನ್ನು ಸಂಪರ್ಕಿಸುವ ಯಲ್ಲಾಪುರ ಜಂಕ್ಷನ್‌ನಿಂದ ತಾಳಗುಪ್ಪ ಮತ್ತು ಭಟ್ಕಳ ನಡುವಿನ 219 ಕಿ.ಮೀ, ರಾಷ್ಟ್ರೀಯ ಹೆದ್ದಾರಿ-48ರಿಂದ 167ನ್ನು ಸಂಪರ್ಕಿಸುವ ಬಾಲಗಕೋಟೆಯಿಂದ ರಾಯಚೂರು ನಡುವಿನ 336 ಕಿ.ಮೀ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಯಾಗಿ ಕೇಂದ್ರ ಸರಕಾರ ಘೋಷಿಸಿದೆ ಎಂದರು.
ತುಮಕೂರು, ಕೊರಟಗೆರೆ, ಪಾವಗಡ, ಕಲ್ಯಾಣದುರ್ಗದಿಂದ ಆಂಧ್ರದ ವೇತರಾಲ ನಡುವಿನ 95 ಕಿ.ಮೀ., ರಾಮನಗರದಿಂದ ಸದಾಶಿವ ಘಡ ನಡುವಿನ 118ಕಿ.ಮೀ., ದಾವಣಗೆರೆ-ಚನ್ನಗಿರಿ ನಡುವಿನ 60ಕಿ.ಮೀ., ಚಿತ್ರದುರ್ಗದಿಂದ ಚಳ್ಳಕೆರೆ- ಪಾವಗಡದಿಂದ ಪೆನಕೊಂಡ ನಡುವಿನ 120ಕಿ.ಮೀ. ರಸ್ತೆಯನ್ನು ಮೇಲ್ದರ್ಜೆ ಗೇರಿಸಲು ಕೇಂದ್ರ ಒಪ್ಪಿಗೆ ನೀಡಿದೆ ಎಂದು ಮಹದೇವಪ್ಪ ತಿಳಿಸಿದರು.
ಕಲಬುರಗಿಯಿಂದ ಹುಮ್ನುಬಾದ್ ನಡುವಿನ 64 ಕಿ.ಮೀ., ಸಂಕೇಶ್ವರದಿಂದ ನರಗುಂದ ನಡುವಿನ 175ಕಿ.ಮೀ., ಹಾವೇರಿಯಿಂದ ಮೊಳಕಾಲ್ಮೂರು ನಡುವಿನ 247ಕಿ.ಮೀ., ಕಾಳೇಪೇಲಾದಿಂದ ಮೈಸೂರು ನಡುವಿನ 103ಕಿ.ಮೀ., ಚಿಂತಾಮಣಿಯಿಂದ ಚೆನ್ನೂರು, ರಾಯತೆರವು ಮತ್ತು ತಾನಕಲ್ ನಡುವಿನ 55ಕಿ.ಮೀ., ಮೊಳಕಾಲ್ಮೂರು, ಅನಂತಪುರಂ ನಡುವಿನ 12ಕಿ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸಿ ಕೇಂದ್ರ ಸರಕಾರದ ಒಪ್ಪಿಗೆ ನೀಡಿದೆ ಎಂದರು.
ಮೈಸೂರು-ಬೆಂಗಳೂರು, ಮಳವಳ್ಳಿ ಮತ್ತು ಖಾನಾಪುರ- ಯಲ್ಲಾಪುರ ಈ ಎರಡೂ ರಸ್ತೆಯ ನಡುವೆ ತಲಾ 50 ಕಿ.ಮೀ. ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದ ಅವರು, ಶೀಘ್ರದಲ್ಲೇ ಅಂಗೀಕಾರ ದೊರೆಯುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ದೇಶದಲ್ಲೆ ಪ್ರಥಮ: ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ 6,432 ಕಿ.ಮೀ ಉದ್ದದ ರಸ್ತೆ ರಾಷ್ಟ್ರೀಯ ಹೆದ್ದಾರಿಯಿದ್ದು, ಪ್ರಸಕ್ತ ಸಾಲಿನಲ್ಲಿ 1,656 ಕಿ.ಮೀ ಹೊಸದಾಗಿ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಪರಿವರ್ತನೆಗೆ ಕೇಂದ್ರ ಸರಕಾರ ಸಮ್ಮತಿಸಿದೆ. ಹೀಗಾಗಿ ರಾಜ್ಯದಲ್ಲಿ ದೇಶದಲ್ಲೇ ಅತ್ಯಂತ ಹೆಚ್ಚು 8 ಸಾವಿರ ಕಿ.ಮೀ ಉದ್ದದ ರಸ್ತೆ ರಾಷ್ಟ್ರೀಯ ಹೆದ್ದಾರಿ ಇದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X