Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಸಸ್ಯಕಾಶಿ’ಯಲ್ಲಿ ಜ.16ರಿಂದ ಫಲ-ಪುಷ್ಪ...

‘ಸಸ್ಯಕಾಶಿ’ಯಲ್ಲಿ ಜ.16ರಿಂದ ಫಲ-ಪುಷ್ಪ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ14 Jan 2016 11:37 PM IST
share

ಬೆಂಗಳೂರು, ಜ. 14: ತೋಟಗಾರಿಕೆ ಇಲಾಖೆ ಹಾಗೂ ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಗಣರಾಜ್ಯೋತ್ಸವ ಹಾಗೂ ಜಿ.ಎಚ್.ಕ್ರುಂಬಿಗಲ್ ಅವರ 150ನೆ ವರ್ಷಾಚರಣೆ ಪ್ರಯುಕ್ತ ಜ.16ರಿಂದ 26ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪಪ್ರದರ್ಶನವನ್ನು ಆಯೋ ಜಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ನಿರ್ದೇಶಕ ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು.
 ಈ ಬಾರಿ ಸುಮಾರು 1.2 ಕೋಟಿ ರೂ. ವೆಚ್ಚದಲ್ಲಿ ಫಲಪುಷ್ಪಪ್ರದರ್ಶನವನ್ನು ಆಯೋ ಜಿಸಲಾಗಿದ್ದು, 40ರಿಂದ 50 ರೀತಿಯ ಫಲಪುಷ್ಪಗಳ ಪ್ರದರ್ಶನ ನಡೆಯಲಿದ್ದು, 4ರಿಂದ 5 ಲಕ್ಷ ಮಂದಿ ಭೇಟಿ ನೀಡುವ ನಿರೀಕ್ಷೆ ಇದೆ. ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6ರ ತನಕ ಪುಷ್ಪಪ್ರದರ್ಶನ ನಡೆಯಲಿದ್ದು, 16 ರಂದು ಬೆಳಗ್ಗೆ ರಾಷ್ಟ್ರೀಯ ಪುಷ್ಪಹಬ್ಬಕ್ಕೆ ಚಾಲನೆ ದೊರೆಯಲಿದೆ ಎಂದು ನಿರ್ದೇಶಕ ಬೊಮ್ಮನಹಳ್ಳಿ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು.
ಪುಷ್ಪಪ್ರದರ್ಶನದ ವೇಳೆ ನೂರು ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅದರಲ್ಲಿ ಮೇಲುಗಡೆ ಇರುವ ಮಳಿಗೆಗಳಿಗೆ 20 ಸಾವಿರ ರೂ. ಹಾಗೂ ಕೆಳಗಡೆ ಇರುವ ಮಳಿಗೆಗಳಿಗೆ 15 ಸಾವಿರ ರೂ. ಬಾಡಿಗೆ ದರ ನಿಗದಿ ಮಾಡಲಾಗಿದೆ. ರಾಜ್ಯದ 7 ಸಂಸ್ಥೆಗಳು, ಮಹಾರಾಷ್ಟ್ರದ 3 ಸಂಸ್ಥೆಗಳು ಹಾಗೂ ಅಸ್ಸಾಂನ ಒಂದು ಸಂಸ್ಥೆ ಪುಷ್ಪಪ್ರದರ್ಶನದಲ್ಲಿ ಭಾಗಿಯಾಗಲಿದೆ ಎಂದು ಹೇಳಿದರು.
ರಾಜ್ಯದ ತೋಟಗಾರಿಕೆ ಇಲಾಖೆಗೆ ಕೊಡುಗೆ ನೀಡಿದ ಜಿ.ಎಚ್. ಕ್ರುಂಬಿಗಲ್ ಅವರ 150ನೆ ವರ್ಷಾಚರಣೆಯ ಅಂಗವಾಗಿ ಅವರ ಪ್ರತಿಮೆ ಮುಂಭಾಗದಲ್ಲಿ ಎರಡು ಲಕ್ಷಕ್ಕೂ ಅಧಿಕ ಹೂವಿನ ಗಿಡಗಳಿಂದ ಅಲಂಕರಿಸಲಾಗುವುದು, ಗಾಜಿನ ಮನೆಯಲ್ಲಿ ವೈವಿಧ್ಯಮಯ ಹಾಗೂ ಚಿತ್ತಾಕರ್ಷಕ ಹೂವಿನ ಕುಂಡಗಳಿಂದ 150ಕ್ಕೂ ಹೆಚ್ಚು ವಿವಿಧ ಹೂವುಗಳು ಪ್ರವಾಸಿಗರನ್ನು ಆಕರ್ಷಿಸಲಿವೆ. ಇದಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ ಎಂದು ಹೇಳಿದರು.
ಪುಷ್ಪಪ್ರದರ್ಶನದ ಪ್ರಯುಕ್ತ ಲಾಲ್‌ಬಾಗ್ ಒಳಗೆ ಪಾರ್ಕಿಂಗ್ ನಿಷೇಧಿಸಿದ್ದು, ಶಾಂತಿನಗರ ಬಸ್ ನಿಲ್ದಾಣದ ಬಹುಮಹಡಿ ಕಟ್ಟಡ, ಜೆ.ಪಿ. ರಸ್ತೆಯ ವಾಹನ ನಿಲುಗಡೆ ಕಟ್ಟಡ, ಅಲ್ ಅಮೀನ್ ಕಾಲೇಜಿನ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಎಸಿಪಿ ಕಾಂತರಾಜು ಮಾತನಾಡಿ, ಪುಷ್ಪಪ್ರದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗೆ ಭದ್ರತೆ ನೀಡಲು 500 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ, 50 ಮಂದಿ ಮಫ್ತಿಯಲ್ಲಿ ಪೊಲೀಸರು ಕಾರ್ಯನಿರ್ವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮೈಸೂರು ಉದ್ಯಾನ ಕಲಾಸಂಘದ ಉಪಾಧ್ಯಕ್ಷ ಶ್ರೀಕಂಠಯ್ಯ, ಖಜಾಂಚಿ ಎಂ. ಪುಟ್ಟಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X