ಕಾಸರಗೋಡು : ಸಿಪಿಎಂ - ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ
ಕಾಸರಗೋಡು : ಸಿಪಿಎಂ - ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪಳ್ಳಿಕೆರೆ ಯಲ್ಲಿ ಗುರುವಾರ ರಾತ್ರಿ ನಡೆದಿದ್ದು , ಎಂಟು ಮಂದಿ ಗಾಯಗೊಂಡಿದ್ದಾರೆ.
ಸಿಪಿಎಂ ಕಾರ್ಯಕರ್ತರಾದ ಶಿಜು , ರಿತೇಶ್ , ಶಿಬುಲಾಲ್ , ಧನೇಶ್, ಬಿಜೆಪಿ ಕಾರ್ಯಕರ್ತರಾದ ಪ್ರದೀಪ್ , ಅನಿಲ್ , ಸಜಿತ್ ,ಅನಿಲ್ ಕುಮಾರ್ ಗಾಯಗೊಂಡಿದ್ದಾರೆ . ಈ ಪೈಕಿ ಪ್ರದೀಪ್ ಮತ್ತು ಸಜಿತ್ ನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಕ್ಷದ ಧ್ವಜ ಹಾಗೂ ತೋರಣ ಕಟ್ಟುವ ವಿಚಾರ ಘರ್ಷಣೆಗೆ ಕಾರಣ ಎನ್ನಲಾಗಿದೆ.
ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





