Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಮಠದಲ್ಲಿ ಮಡೆಸ್ನಾನ- ಪಂಕ್ತಿಬೇಧ...

ಉಡುಪಿ ಮಠದಲ್ಲಿ ಮಡೆಸ್ನಾನ- ಪಂಕ್ತಿಬೇಧ ನಿಷೇಧ ಘೋಷಣೆಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Jan 2016 6:43 PM IST
share
ಉಡುಪಿ ಮಠದಲ್ಲಿ ಮಡೆಸ್ನಾನ- ಪಂಕ್ತಿಬೇಧ ನಿಷೇಧ ಘೋಷಣೆಗೆ ಒತ್ತಾಯ

ಮಂಗಳೂರು, ಜ.15: ಪರ್ಯಾಯ ಪೀಠಾರೋಹಣ ಮಾಡಲಿರುವ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರು ಉಡುಪಿ ಶ್ರೀಕೃಷ್ಣ ಮಠದಲ್ಲಿ ಮಡೆಸ್ನಾನ ಮತ್ತು ಪಂಕ್ತಿಭೇದವನ್ನು ಸಂಪೂರ್ಣವಾಗಿ ನಿಷೇಧಿಸುವ ಘೋಷಣೆ ಮಾಡಬೇಕು ಎಂದು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಶ್ರೀರಾಮ ರೆಡ್ಡಿ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಾಮಾಜಿಕ ಸಮಾನತೆ ಹಿನ್ನೆಲೆಯಲ್ಲಿ ಮಡೆಸ್ನಾನ ಹಾಗೂ ಪಂಕ್ತಿಭೇದಕ್ಕೆ ನಿಷೇಧ ಹೇರಿದರೆ ಸ್ವಾಮೀಜಿ ಬಗ್ಗೆ ಸಮಾಜದಲ್ಲಿ ಗೌರವ ಮತ್ತಷ್ಟು ಹೆಚ್ಚಲಿದೆ ಎಂದರು. ಮಡೆಸ್ನಾನ ಹಾಗೂ ಪಂಕ್ತಿಭೇದದೊಂದಿಗೆ ಜಾತಿ ಆಧಾರದಲ್ಲಿ ಶೋಷಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಳೆದ ಆರು ವರ್ಷದಿಂದ ಸಿಪಿಐಎಂ ಹೋರಾಟ ಮಾಡುತ್ತಿದೆ ಎಂದವರು ಹೇಳಿದರು. ಪರ್ಯಾಯ ಉತ್ಸವ ಕೃಷ್ಣ ಮಠದ ಆಂತರಿಕ ವಿಷಯವಾಗಿದ್ದು, ವೈಭವೀಕರಣವನ್ನು ಸಿಪಿಐಎಂ ವಿರೋಧಿಸುತ್ತದೆ. ರಾಜ್ಯದಲ್ಲಿ ಬರಗಾಲ, ರೈತರ ಆತ್ಮಹತ್ಯೆ ಸಮಸ್ಯೆ ಗಂಭೀರವಾಗಿರುವ ಸಂದರ್ಭ ಸರಕಾರ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರ್ಯಾಯಕ್ಕೆ ಪ್ರೋತ್ಸಾಹ ನೀಡುವುದು, ಪ್ರತಿನಿಧಿಯನ್ನು ಕಳುಹಿಸುವುದು ಖಂಡನೀಯ ಎಂದು ಅವರು ತಿಳಿಸಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ವಿಚಾರದಲ್ಲಿ ಸಂಧಾನ, ಕೋರ್ಟ್ ತೀರ್ಪು ಹಾಗೂ ರಾಜ್ಯ ಸಭೆ ಬಹುಮತ ಎಂಬುದಾಗಿ ಸ್ವಾಮೀಜಿ ತ್ರಿಸೂತ್ರ ತಿಳಿಸಿದ್ದು, ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ಸಂಧಾನದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಅಲ್ಲದೆ ಬಾಬರಿ ಮಸೀದಿಯನ್ನು ಒಡೆದಿರುವ ಹಿನ್ನೆಲೆಯಲ್ಲಿ ಮುಸ್ಲಿಮರು ಸಂಧಾನಕ್ಕೆ ಬರಬೇಕೆನ್ನುವುದು ಒಪ್ಪತಕ್ಕ ವಿಚಾರವಲ್ಲ ಎಂದು ಅವರು ಹೇಳಿದರು.

ಎತ್ತಿನಹೊಳೆ ಯೋಜನೆ ವಿರೋಧವಿಲ್ಲ

ಎತ್ತಿನಹೊಳೆ ಯೋಜನೆಗೆ ಸಿಪಿಐಎಂ ವಿರೋಧವಿಲ್ಲ ಎಂದು ಮತ್ತೆ ಸ್ಪಷ್ಟ ಪಡಿಸಿರುವ ಅವರು, ಈ ಯೋಜನೆಯಿಂದ ಬಯಲು ಸೀಮೆಯ ನೀರಾವರಿ ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯಲಾರದು ಎಂದೂ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಿಪಿಐಎಂ ಪಕ್ಷದ ಮುಖಂಡರಾದ ವಸಂತ ಆಚಾರಿ, ಕೆ.ಯಾದವ ಶೆಟ್ಟಿ, ಬಿ.ಎಂ.ಭಟ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X