Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವಿಶ್ವವಾಣಿ’ ದಿನಪತ್ರಿಕೆ ಲೋಕಾರ್ಪಣೆ;...

‘ವಿಶ್ವವಾಣಿ’ ದಿನಪತ್ರಿಕೆ ಲೋಕಾರ್ಪಣೆ; ದಮನವಾಗುತ್ತಿರುವ ಪತ್ರಿಕಾ ಸಿದ್ಧಾಂತ: ಸಿಎಂ ಆತಂಕ

ವಾರ್ತಾಭಾರತಿವಾರ್ತಾಭಾರತಿ15 Jan 2016 11:44 PM IST
share
‘ವಿಶ್ವವಾಣಿ’ ದಿನಪತ್ರಿಕೆ ಲೋಕಾರ್ಪಣೆ; ದಮನವಾಗುತ್ತಿರುವ ಪತ್ರಿಕಾ ಸಿದ್ಧಾಂತ: ಸಿಎಂ ಆತಂಕ

ಬೆಂಗಳೂರು, ಜ. 15: ಹಿಂದಿನ ದಿನಗಳಲ್ಲಿ ಮಾಧ್ಯಮಗಳಿಗಿದ್ದ ಪ್ರವೃತ್ತಿಗಳು ಇಂದು ಬದಲಾವಣೆಗೊಂಡಿದ್ದು, ಪತ್ರಿಕಾರಂಗ ಉದ್ಯಮವಾಗುವ ಮೂಲಕ ಪತ್ರಿಕಾ ಸಿದ್ಧಾಂತಗಳು ದಮನವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ವಿಶ್ವಾಕ್ಷರ ಮೀಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವಿಶ್ವವಾಣಿ’ ದಿನಪತ್ರಿಕೆ ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಕಳೆದ 50-60 ವರ್ಷಗಳ ಹಿಂದೆ ಮಾಧ್ಯಮ ಗಳಿಗಿದ್ದ ಪ್ರವೃತ್ತಿಗಳು, ಸಿದ್ಧಾಂತಗಳು ಬದಲಾವಣೆಗೊಂಡಿವೆ ಎಂದು ತಿಳಿಸಿದರು.

 ಮಾಧ್ಯಮ ಆರಂಭದಲ್ಲಿ ಸ್ವಾತಂತ್ರದ ಒಂದು ಭಾಗವೇ ಆಗಿತ್ತು. ಅಲ್ಲದೆ, ದೇಶದ ಅಭಿವೃದ್ಧಿಗೆ ಸಾಧನವಾಗಿತ್ತು. ಅಂದು ಮಾಧ್ಯಮ ಒಂದು ವೃತ್ತಿಯಾಗಿತ್ತು. ಆದರೆ ಈ ರಂಗವು ಇಂದು ವೃತ್ತಿಯಾಗಿರದೆ ಉದ್ಯಮವಾಗಿ ಬೆಳೆಯತೊಡಗಿದೆ. ಇದರಿಂದ ಪತ್ರಿಕಾ ಸಿದ್ಧಾಂತಗಳು ನಶಿಸುತ್ತಿವೆ. ಈ ಪರಿಣಾಮ ಮಾಧ್ಯಮಗಳು ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಾಧ್ಯಮಗಳು ಜನರ ಸಮಸ್ಯೆಗಳ ವಿರುದ್ಧ ಧ್ವನಿಯಾಗುವ ಜೊತೆಗೆ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಮೂಲಕ ಸಮಾಜದಲ್ಲಿ ಬದಲಾವಣೆ ತರಬೇಕು. ಭ್ರಷ್ಟಾಚಾರ, ಅಕ್ರಮಗಳ ವಿರುದ್ಧ ಹೋರಾಟ ಮತ್ತು ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಜನರ ವಿಶ್ವಾಸವನ್ನು ಗಳಿಸಲು ಮಾಧ್ಯಮ ಮುಂದಾಗಬೇಕು ಎಂದು ಸೂಚಿಸಿದರು.

  ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ, ನಾಡೋಜ ಪಾಟೀಲ್ ಪುಟ್ಟಪ್ಪ ಮಾತನಾಡಿ, ಇಂದು ಪತ್ರಿಕೆಗಳು ರಾಜಕೀಯ, ಹಣವಂತರ ಪರ ಇರುವುದರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗುತ್ತಿದೆ. ಜನರ ನಿರೀಕ್ಷೆಯಂತೆ ಪತ್ರಿಕೆಗಳು ಜನಪರವಾಗಿ ಕೆಲಸ ಮಾಡಬೇಕೇ ವಿನಃ ಬಂಡವಾಳಶಾಹಿಗಳ ಪರವಲ್ಲ. ಯಾವ ಪತ್ರಿಕೆ ಜನಪರ ಇರುವುದಿಲ್ಲವೋ ಅಂತಹ ಪತ್ರಿಕೆಗಳು ಮುಂದುವರಿಯದಂತೆ ಓದುಗರು ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ವ್ಯಕ್ತಿ ಮತ್ತು ಸಮುದಾಯಗಳ ಮೇಲೆ ದುಷ್ಪರಿಣಾಮ ಬೀರುವಂತಹ ಲೇಖನಗಳನ್ನು ಪತ್ರಿಕೆಗಳು ಮುದ್ರಿಸಬಾರದು. ಲೇಖನಗಳನ್ನು ಬರೆಯುವಾಗ ಬಹಳ ಎಚ್ಚರವಹಿಸಿ ಬರೆಯಬೇಕು. ಇಂದು ಪತ್ರಿಕೆಗಳು ಬಂಡವಾಳಶಾಹಿ ವರ್ಗದಿಂದ ವಿಮುಕ್ತಿಗೊಂಡರೆ ಪತ್ರಿಕಾ ಸಿದ್ಧಾಂತಗಳು ಜೀವಂತವಾಗಿರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದನಾಥ ಸ್ವಾಮೀಜಿ, ಸುಬುಧೇಂದ್ರ ತೀರ್ಥ ಸ್ವಾಮೀಜಿ, ವಿಶ್ವಾಕ್ಷರ ಮೀಡಿಯಾ ಅಧ್ಯಕ್ಷ ಕೆ.ಪಿ ನಂಜುಂಡಿ, ವ್ಯವಸ್ಥಾಪಕ ನಿರ್ದೇಶಕ ವಿಶ್ವೇಶ್ವರ್ ಭಟ್ ಉಪಸ್ಥಿತರಿದ್ದರು.

ರಾಜ್ಯದ ರೈತರು ಎದುರಿಸು ತ್ತಿರುವ ತೀವ್ರ ಬರಗಾಲ, ಆತ್ಮಹತ್ಯೆ, ಸಂಕಷ್ಟಗಳು ಸರಕಾರಕ್ಕೆ ಕಾಣಿಸುತ್ತಿಲ್ಲ. ಈ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವ ದಿಕ್ಕಿನಲ್ಲಿ ಮಾಧ್ಯಮಗಳು ಸರಕಾರವನ್ನು ನಿದ್ರಾ ವವಸ್ಥೆಯಿಂದ ಎಚ್ಚರಿಸಬೇಕಿದೆ.

ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X