Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾ-ಪಾಕ್ ಯುದ್ಧ ವಿಮಾನಕ್ಕೆ ಭಾರತದ...

ಚೀನಾ-ಪಾಕ್ ಯುದ್ಧ ವಿಮಾನಕ್ಕೆ ಭಾರತದ ತೇಜಸ್ ಸೆಡ್ಡು

ವಾರ್ತಾಭಾರತಿವಾರ್ತಾಭಾರತಿ16 Jan 2016 12:21 AM IST
share

ಹೊಸದಿಲ್ಲಿ: ಭಾರತ ಸಿದ್ಧಪಡಿಸಿದ ತೇಜಸ್ ಯುದ್ಧವಿಮಾನ ಹಾಗೂ ಚೀನಾ- ಪಾಕಿಸ್ತಾನ ಜಂಟಿಯಾಗಿ ಅಭಿವೃದ್ಧಿಪಡಿಸಿದ ಬಹುಕಾರ್ಯ ಸಾಮರ್ಥ್ಯದ ಜೆಎಫ್-17 ಥಂಡರ್ ಯುದ್ಧವಿಮಾನಗಳು ಮೊತ್ತ ಮೊದಲ ಬಾರಿಗೆ ಬಹರೈನ್‌ನಲ್ಲಿ ಈ ತಿಂಗಳ 21ರಿಂದ 23ರವರೆಗೆ ನಡೆಯುವ ವಾಯು ಪ್ರದರ್ಶನದಲ್ಲಿ ಮುಖಾಮುಖಿಯಾಗಲಿವೆ.

ಭಾರತದ ಈ ಯುದ್ಧವಿಮಾನ ವಿದೇಶದಲ್ಲಿ ಹಾರಾಡುವುದು ಇದೇ ಮೊದಲು. ಇದು ಥಂಡರ್‌ಗಿಂತ ಹೇಗೆ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲದು ಎನ್ನುವದು ಇಲ್ಲಿ ಖಚಿತವಾಗಲಿದೆ. ರಕ್ಷಣಾ ಸಚಿವಾಲಯದ ಅಧಿಕಾರಿಗಳ ಪ್ರಕಾರ, ತೇಜಸ್, ಜೆಎಫ್-17 ಥಂಡರ್‌ಗಿಂತ ಕನಿಷ್ಠ ಐದು ಬಗೆಯಲ್ಲಿ ಹೆಚ್ಚಿನ ಸಾಮರ್ಥ್ಯ ಹೊಂದಿದೆ. ಇದು ಈ ಪ್ರದರ್ಶನದ ಮೂಲಕ ಸಾಬೀತಾಗಲಿದೆ.

ಈ ಪ್ರದರ್ಶನದಲ್ಲಿ ತೇಜಸ್ ಕ್ಷಮತೆಯನ್ನು ತಾಂತ್ರಿಕವಾಗಿ ಮೌಲ್ಯಮಾಪನ ಮಾಡಲಾಗುತ್ತದೆ. ಸ್ವಯಂಚಾಲಿತ ಮಾಹಿತಿ ವ್ಯವಸ್ಥೆಯಾದ ಟೆಲೆಮೆಟ್ರಿ ಘಟಕ ಮಾಹಿತಿಯನ್ನು ಸಂಗ್ರಹಿಸಿ ಕ್ಷಮತೆಯನ್ನು ಮೌಲ್ಯಮಾಪನ ಮಾಡಲಿದೆ.

ಒಟ್ಟು 20 ವಿಮಾನಗಳನ್ನು ಪ್ರದರ್ಶನಕ್ಕೆ ಕಳುಹಿಸಲು ವಾಯುಪಡೆ ನಿರ್ಧರಿಸಿದೆ. ಬೆಂಗಳೂರು ಮೂಲದ ಎಚ್‌ಎಎಲ್ ಪ್ರಕಾರ 15 ವಿಮಾನಗಳು ಭಾಗವಹಿಸಲಿವೆ.

ಪಾಕಿಸ್ತಾನದ ಜೆಎಫ್-17 ಕಿಲ್ಮೋವ್ ಆರ್‌ಡಿ 93 ಎಂಜಿನ್ ಬಳಸಿದೆ. ತೇಜಸ್ ಯೋಜನೆ ಹಲವು ದಿನಗಳಿಂದ ವಿವಾದದ ಕೇಂದ್ರವಾಗಿತ್ತು. ವಿಮಾನ ತಯಾರಿಕೆಯಲ್ಲಿ ಆದ ವಿಳಂಬ ಮಾತ್ರವಲ್ಲದೇ, ಅದರ ಕ್ಷಮತೆ ಬಗ್ಗೆಯೂ ಅಪಸ್ವರ ಕೇಳಿಬಂದಿತ್ತು.

ಆದರೆ ದೇಶೀಯವಾಗಿ ಮಾಡಲಾದ ತುಲನೆಯ ಅನ್ವಯ ತೇಜಸ್ ಉತ್ತಮ ಸಾಮರ್ಥ್ಯ ಹೊಂದಿದ್ದು, ಜೆಫ್-17 ಥಂಡರ್‌ಗಿಂತ ಪ್ರಭಾವಶಾಲಿ ಎಂದು ರಕ್ಷಣಾ ಸಚಿವಾಲಯ ಅಧಿಕಾರಿಗಳು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರಡೂ ವಿಮಾನಗಳ ಎಂಜಿನ್‌ಗಳು ಸಮಾನ ಸಾಮರ್ಥ್ಯದ್ದಾಗಿವೆ. ಜೆಫ್-17 ಕ್ಲಿಮೋವ್ ಆರ್‌ಡಿ 93 ಎಂಜಿನ್ ಬಳಸಿದ್ದರೆ, ತೇಜಸ್ ಜಿಇ-ಎಫ್404-ಐಎನ್20 ಎಂಜಿನ್ ಬಳಸಿದೆ. ಆದರೆ ಇತರ ಕ್ಷೇತ್ರಗಳಲ್ಲಿ ತೇಜಸ್ ಭಿನ್ನವಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಜೆಫ್-17ಗಿಂತ ಹೆಚ್ಚು ದೂರದ ವರೆಗೆ ತೇಜಸ್ ಹಾರಬಹುದಾಗಿದೆ. ತೇಜಸ್ ಸಾಮರ್ಥ್ಯ 2,300 ಕಿಲೋಮೀಟರ್ ಇದ್ದರೆ, ಜೆಫ್-17 ಕೇವಲ 2,037 ಕಿಲೋಮೀಟರ್ ಸಾಮರ್ಥ್ಯವನ್ನಷ್ಟೇ ಹೊಂದಿದೆ. ತೇಜಸ್ 2,500 ಕೆಜಿ ಇಂಧನ ಒಯ್ಯುವ ಸಾಮರ್ಥ್ಯದ್ದಾಗಿದ್ದು, ಜೆಎಫ್-17 2,300 ಕಿಲೋ ಒಯ್ಯಬಲ್ಲದು.

ತೇಜಸ್‌ಗೆ ಮರು ಇಂಧನ ತುಂಬಿಸಬಹುದಾಗಿದ್ದು, ಜೆಎಫ್-17ಗೆ ಈ ಅವಕಾಶ ಇಲ್ಲ. ತೇಜಸ್ 460 ಮೀಟರ್‌ನಲ್ಲೇ ಆಕಾಶಕ್ಕೆ ಚಿಮುತ್ತದೆ. ಆದರೆ ಜೆಎಫ್-17ಗೆ 600 ಮೀಟರ್ ಅಂತರ ಬೇಕಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X