Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೆಗಾಗಿ ರಾಮಮಂದಿರ ಕೆದಕುತ್ತಿರುವ...

ಚುನಾವಣೆಗಾಗಿ ರಾಮಮಂದಿರ ಕೆದಕುತ್ತಿರುವ ಬಿಜೆಪಿ: ಬಿಎಸ್ಪಿ ಅಧ್ಯಕ್ಷೆ ಮಾಯಾವತಿ

ವಾರ್ತಾಭಾರತಿವಾರ್ತಾಭಾರತಿ16 Jan 2016 12:25 AM IST
share
ಚುನಾವಣೆಗಾಗಿ ರಾಮಮಂದಿರ ಕೆದಕುತ್ತಿರುವ ಬಿಜೆಪಿ: ಬಿಎಸ್ಪಿ ಅಧ್ಯಕ್ಷೆ ಮಾಯಾವತಿ

ಲಕ್ನೊ: ಮುಂದಿನ 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿರಿಸಿಕೊಂಡು ಬಿಜೆಪಿ ರಾಮಮಂದಿರದ ವಿಷಯವನ್ನು ಕೆದಕುತ್ತಿದೆಯೆಂದು ಆರೋಪಿಸಿರುವ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ, ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಿಲ್ಲಿ ಹಾಗೂ ಬಿಹಾರಗಳಂತೆಯೇ ರಾಜ್ಯದ ಮತದಾರರೂ ಅವರ ‘ನಾಟಕಗಳಿಗೆ’ ಬಲಿಯಾಗುವುದಿಲ್ಲವೆಂದು ಅವರಿಂದು ಹೇಳಿದ್ದಾರೆ.

ಕೇಂದ್ರ ಸರಕಾರವು ಕೋಮುವಾದಿ ಶಕ್ತಿಗಳಿಗೆ ಸಂಪೂರ್ಣ ಸ್ವಾತಂತ್ರ ನೀಡಿದೆ. ಅದರಿಂದಾಗಿ ದೇಶದಲ್ಲಿ ಕ್ಷೋಭೆ ಉಂಟಾಗಿದೆಯೆಂದು ಇಂದು 60ನೆ ಹುಟ್ಟುಹಬ್ಬ ಆಚರಿಸಿಕೊಂಡಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಹತ್ತಿರಬರುತ್ತ್ತಿರುವಂತೆಯೇ, ಬಿಜೆಪಿ, ಆರೆಸ್ಸೆಸ್ ಹಾಗೂ ಇತರ ಸಂಘಟನೆಗಳು ಸುಪ್ರೀಂಕೋರ್ಟ್‌ನಲ್ಲಿ ಬಾಕಿಯಿರುವ ರಾಮಮಂದಿರದ ವಿವಾದವನ್ನು ಕೆದಕುತ್ತಿವೆ. ಮತಗಳಿಗಾಗಿ ಧಾರ್ಮಿಕ ಭಾವನೆಯೊಂದಿಗೆ ಆಟವಾಡುವ ತಂತ್ರ ಕೆಲಸಕ್ಕೆಬಾರದು ಎಂದು ಮಾಯಾವತಿ ಪತ್ರಕರ್ತರಿಗೆ ತಿಳಿಸಿದರು.

ಕೇಂದ್ರ ಸರಕಾರವು ಬಿ.ಆರ್.ಅಂಬೇಡ್ಕರರ ಹೆಸರಿನಲ್ಲಿ ದಲಿತ ಮತದಾರರನ್ನು ಪುಸಲಾಯಿಸಲು ಯತ್ನಿಸುತ್ತಿದೆಯೆಂದು ಆರೋಪಿಸಿದ ಮಾಯಾವತಿ, ಅದು ನಿಜವಾಗಿ ಗಂಭೀರವಾಗಿದ್ದರೆ, ಬಾಬಾ ಸಾಹೇಬರ 125ನೆ ಜನ್ಮ ವರ್ಷದಲ್ಲಿ ದಲಿತರು ಹಾಗೂ ಅಂಬೇಡ್ಕರ್‌ರ ಹಿಂದುಳಿದ ಬೆಂಬಲಿಗರಿಗಾಗಿ ಕೆಲಸ ಮಾಡಲು ನಿರ್ಧರಿಸುತ್ತಿತ್ತು. ಕೇಂದ್ರ ಸರಕಾರವು ಭಡ್ತಿಗಳಲ್ಲಿ ಮೀಸಲಾತಿಯ ಮಸೂದೆಯನ್ನು ಮಂಜೂರು ಮಾಡುತ್ತಿತ್ತು. ಅದು ಸಂವಿಧಾನ ತಿದ್ದುಪಡಿಯ ಮೂಲಕ, ಇತರ ಜಾತಿಗಳಿಗೆ ವಲಸೆ ಹೋಗಿರುವ ಬಡವರು ಹಾಗೂ ಮೇಲ್ಜಾತಿಯ ಬಡವರಿಗೆ ಮೀಸಲಾತಿ ಒದಗಿಸುತ್ತಿತ್ತು. ಆದರೆ, ಅದು ಈ ಬಗ್ಗೆ ಏನೂ ಮಾಡಿಲ್ಲವೆಂದು ದೂರಿದರು.

ದೇಶದ ಪಾಕಿಸ್ತಾನ ನೀತಿಯ ಕುರಿತು ಪ್ರಶ್ನೆಯೆತ್ತಿದ ಅವರು, ಪಾಕಿಸ್ತಾನದ ಕುರಿತಾದ ಬಿಜೆಪಿಯ ನೀತಿ ಸ್ಥಿರವಾಗಿಲ್ಲವೆಂದು ಟೀಕಿಸಿದರು.
ಈ ಸಂದರ್ಭದಲ್ಲಿ ಅವರು ತನ್ನ ‘ನನ್ನ ಸಂಕಷ್ಟಕರ ಬದುಕಿ ಪ್ರಯಾಣ ಮತ್ತು ಬಿಎಸ್ಪಿ ಚಳವಳಿ’ಯ 11ನೇ ಸಂಪುಟವನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಬಿಡುಗಡೆಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X