Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಿಯಾಝ್ ಭಟ್ಕಳ್ ಸಾವಿನ ಸುದ್ದಿಗೆ...

ರಿಯಾಝ್ ಭಟ್ಕಳ್ ಸಾವಿನ ಸುದ್ದಿಗೆ ಮರುಜೀವ?

-ಎಂ.ಆರ್.ಮಾನ್ವಿ-ಎಂ.ಆರ್.ಮಾನ್ವಿ16 Jan 2016 8:15 PM IST
share
ರಿಯಾಝ್ ಭಟ್ಕಳ್ ಸಾವಿನ ಸುದ್ದಿಗೆ ಮರುಜೀವ?

ಭಟ್ಕಳ, ಜ. 16: ಹಲವು ಭಯೋತ್ಪಾದಕ ಕೃತ್ಯಗಳ ಆರೋಪಿ ಹಾಗೂ ಇಂಡಿಯನ್ ಮುಜಾಹಿದೀನ್ ಸ್ಥಾಪಕನೆಂದು ಹೇಳಲಾಗುತ್ತಿರುವ ರಿಯಾಝ್ ಭಟ್ಕಳ್ ಸಾವಿನ ಸುದ್ದಿ ಮತ್ತೊಮ್ಮೆ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಅಸ್ಸಾಂನ ಗುವಾಹಟಿಯ ಓರ್ವ ಉನ್ನತ ಪೊಲೀಸ್ ಅಧಿಕಾರಿ ರಿಯಾಝ್ ಭಟ್ಕಳ್‌ನ ಸಾವಿನ ಸುದ್ದಿಯನ್ನು ಹರಿಯಬಿಟ್ಟಿದ್ದಾರೆ. ಇಂಡಿಯನ್ ಮುಜಾಹಿದೀನ್ ಸ್ಥಾಪಕ ರಿಯಾಝ್ ಭಟ್ಕಳ್ ಕಳೆದ ಮೂರು ತಿಂಗಳ ಹಿಂದೆಯೇ ಗುವಾಹಟಿಯಲ್ಲಿ ಹತ್ಯೆಯಾಗಿದ್ದಾನೆ ಎಂದು ಹೇಳಿಕೆ ನೀಡುವ ಮೂಲಕ ರಿಯಾಝ್ ಸಾವಿನ ಕುರಿತ ಊಹಾಪೋಹಕ್ಕೆ ಅವರು ಮತ್ತೆ ಜೀವ ನೀಡಿದ್ದಾರೆ.

2013ರಲ್ಲಿ ದಿಲ್ಲಿ ಪೊಲೀಸರು ಬಿಹಾರದಲ್ಲಿ ಯಾಸೀನ್ ಭಟ್ಕಳನನ್ನು ಬಂಧಿಸಿದ್ದರು. ಅಧಿಕಾರಿಗಳು ಹೇಳುವಂತೆ ಯಾಸೀನ್ ಬಂಧನ ನಂತರವೇ ರಿಯಾಝ್ ಭಟ್ಕಳ್ ಹತ್ಯೆಯಾಗಿದೆ. ಈತನ ಹತ್ಯೆಯ ಹಿಂದೆ ಯಾಸೀನ್ ಭಟ್ಕಳ್‌ನ ಯಾವುದೇ ಕೈವಾಡವಿಲ್ಲ ಎನ್ನುವುದಾಗಿ ಅಧಿಕಾರಿ ಸ್ಪಷ್ಟನೆ ನೀಡಿದ್ದರು. ಕಳೆದ 5 ವರ್ಷಗಳ ಹಿಂದೆ ಅಂಡರ್ ವರ್ಲ್ಡ್ ದೊರೆ ಚೋಟಾ ರಾಜನ್, ತಾನು ರಿಯಾಝ್‌ನನ್ನು ಪಾಕಿಸ್ತಾನದಲ್ಲೇ ಹತ್ಯೆಮಾಡಿದ್ದಾಗಿ ಹೇಳಿಕೊಂಡಿದ್ದನು. ತನ್ನ ಮಾತಿಗೆ ಸಾಕ್ಷ್ಯವೆಂಬಂತೆ ಒಂದು ಫೋಟೊವನ್ನು ಆತ ನೀಡಿದ್ದನು. ಆದರೆ, ಅದು ಕಲ್ಪಿತ ಕಂಪ್ಯೂಟರ್ ಫೋಟೊ ಎಂಬುದು ನಂತರದ ತನಿಖೆಯಿಂದ ಬಯಲಾಗಿತ್ತು.

ಈಗ ಮತ್ತೊಮ್ಮೆ ರಿಯಾಝ್‌ನ ಸಾವು ಮಾಧ್ಯಮಗಳ ಮುಂದೆ ಜೀವ ಪಡೆದುಕೊಂಡಿದ್ದು, ಇದರಲ್ಲಿನ ಸತ್ಯಾಸತ್ಯತೆ ಕುರಿತು ತನಿಖೆಯಾಗಬೇಕಾಗಿದೆ. ಕಳೆದ ಬಾರಿ ಇಂತಹದ್ದೆ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ತನ್ನ ಮಗನನ್ನು ಪೊಲೀಸರು ಎನೌಕೌಂಟರ್‌ನಲ್ಲಿ ಕೊಂದಿರಬಹುದು ಅಥವಾ ಆತ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆಗೈದಿರಬಹುದು ಎಂದು ರಿಯಾಝ್ ತಾಯಿ ಮಾಧ್ಯಮಗಳ ಮುಂದೆ ಹೇಳಿದ್ದರು. ರಿಯಾಝ್ ಭಟ್ಕಳ್ ಪಾಕಿಸ್ತಾನದಲ್ಲಿ ಅಡಗಿಕೊಂಡಿದ್ದಾನೆ ಎಂದು ತನಿಖಾ ಸಂಸ್ಥೆಗಳು ಹೇಳುತ್ತಿವೆ. ಆತ ಪಾಕಿಸ್ತಾನದಲ್ಲಿದ್ದರೆ ಆಸ್ಸಾಂಗೆ ಹೇಗೆ ಬಂದ ಹಾಗೂ ಹತ್ಯೆ ಹೇಗಾಯಿತು ಎನ್ನುವ ಗುಮಾನಿ ಹುಟ್ಟುತ್ತದೆ. ರಿಯಾಝ್ ಹತ್ಯೆಯಾಗಿ ಮೂರು ತಿಂಗಳು ಕಳೆದ ಬಳಿಕ ಆತನ ಸಾವಿನ ಸುದ್ದಿ ತೇಲಿಬಿಡಲು ಕಾರಣವಾದರೂ ಏನು? ಇದರ ಹಿಂದೆ ಯಾರ ಕೈವಾಡವಿದೆ? ಮತ್ತು ಇದರ ಉದ್ದೇಶವೇನು? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿ ಹುಟ್ಟಿಕೊಳ್ಳುತ್ತಿದೆ.

share
-ಎಂ.ಆರ್.ಮಾನ್ವಿ
-ಎಂ.ಆರ್.ಮಾನ್ವಿ
Next Story
X