Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರ್ವರಿಗೂ ಶಿಕ್ಷಣ ನನ್ನ ಗುರಿ ವಿಶ್ವದ...

ಸರ್ವರಿಗೂ ಶಿಕ್ಷಣ ನನ್ನ ಗುರಿ ವಿಶ್ವದ ಅತ್ಯಂತ ಕಿರಿಯ ಪ್ರಾಂಶುಪಾಲ ಬಾಬರ್ ಅಲಿ ಅಭಿಮತ

ವಾರ್ತಾಭಾರತಿವಾರ್ತಾಭಾರತಿ16 Jan 2016 11:38 PM IST
share
ಸರ್ವರಿಗೂ ಶಿಕ್ಷಣ ನನ್ನ ಗುರಿ ವಿಶ್ವದ ಅತ್ಯಂತ ಕಿರಿಯ ಪ್ರಾಂಶುಪಾಲ ಬಾಬರ್ ಅಲಿ ಅಭಿಮತ

ಮಂಗಳೂರು, ಜ. 16: ಸಮಾಜವನ್ನು ಕಾಡುತ್ತಿರುವ ಬಡತನ, ಆರ್ಥಿಕ ಹಿಂದುಳಿಕೆ ಮೊದಲಾದ ಕಾರಣಗಳಿಂದ ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ವಿದ್ಯಾಭ್ಯಾಸ ಒದಗಿಸುವ ಮೂಲಕ ಸರ್ವರಿಗೂ ಶಿಕ್ಷಣ ನೀಡಬೇಕೆಂಬುದು ನನ್ನ ಜೀವನದ ಗುರಿಯಾಗಿದೆ ಎಂದು ಪ್ರತಿಷ್ಠಿತ ಬಿಬಿಸಿಯಿಂದ ‘ವಿಶ್ವದ ಅತ್ಯಂತ ಕಿರಿಯ ಪ್ರಾಂಶುಪಾಲ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪಶ್ಚಿಮ ಬಂಗಾಲದ ಮುರ್ಶಿದಾಬಾದ್‌ನ ಬಾಬರ್ ಅಲಿ ಹೇಳಿದ್ದಾರೆ.
ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನಿಂದ ಜನವರಿ 17ರಂದು ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲೆಂದು ಇಂದು ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ‘ವಾರ್ತಾಭಾರತಿ’ಯು ನಡೆಸಿದ ಸಂದರ್ಶನದಲ್ಲಿ ಅವರು ಮೇಲಿನಂತೆ ತಿಳಿಸಿದರು.
ತನ್ನ 9ರ ಹರೆಯದಲ್ಲಿ 5ನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕಾಲ ಅದು. ನಾನು ಸಂಜೆ ಶಾಲೆಯಿಂದ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸುಮಾರು 5ರಿಂದ 8 ವರ್ಷದೊಳಗಿನ ಮಕ್ಕಳು ಆಟದಲ್ಲಿ ಕಾಲ ಕಳೆಯುತ್ತಾ ಶಾಲೆಯಿಂದ ದೂರವಾಗಿರುವುದನ್ನು ಕಂಡು ಮರುಕಪಟ್ಟಿದ್ದೆ. ನನ್ನಂತೆ ಅವರೂ ಕೂಡ ಓದಬೇಕೆಂಬ ಹಂಬಲ ಅಂದು ನನ್ನಲ್ಲಿ ಹುಟ್ಟಿಕೊಂಡಿತ್ತು. ನಾನು ಶಾಲೆಗೆ ಹೋಗುತ್ತಿದ್ದ ಅವಧಿಯಲ್ಲೇ ಅವರನ್ನೂ ಕರೆದು ಒಂದೆಡೆ ಸೇರಿಸಿ ಓದಿಸುತ್ತಿದೆ. ಪ್ರಾರಂಭದಲ್ಲಿ ಎಂಟು ಮಕ್ಕಳು ಸೇರಿದ್ದರು. ಆರು ಹುಡುಗಿಯರು ಮತ್ತು ಇಬ್ಬರು ಹುಡುಗರು. ಅದರಲ್ಲಿ ನನ್ನ ಸಹೋದರಿಯೂ ಒಬ್ಬಳು. ಅಂದಿನ ನನ್ನ ಕಿರಿಯ ವಯಸ್ಸಿನ ಈ ಪ್ರಯತ್ನಕ್ಕೆ ನನ್ನ ಹೆತ್ತವರು ಸಹಕಾರ ನೀಡಿದ್ದರು. ಅನಂತರ ಊರಿನವರು ಕೂಡ ಪ್ರೋತ್ಸಾಹ ನೀಡಲು ಪ್ರಾರಂಭಿಸಿದರು. ಊರಿನವರ ಈ ಪ್ರೋತ್ಸಾಹವೇ ಮಕ್ಕಳಿಗೆ ನಿತ್ಯ ಪಾಠ ಹೇಳಿಕೊಡಲು ನನಗೆ ಇನ್ನಷ್ಟು ಹುಮ್ಮಸ್ಸು ನೀಡಿತ್ತು. ತಿಂಗಳು ಕಳೆದಂತೆ ಮಕ್ಕಳ ಸಂಖ್ಯೆಯೂ ಹೆಚ್ಚಾಗ ತೊಡಗಿದ್ದವು. ಅದರಂತೆ 2002ರಲ್ಲಿ ಊರಿನವರ ಸಹಕಾರದಿಂದ ಪುಟ್ಟ ಶಿಕ್ಷಣ ಸಂಸ್ಥೆಯೊಂದನ್ನು ಸ್ಥಾಪಿಸಿದ್ದೆ. ಮಕ್ಕಳಿಗೆ ಉಚಿತವಾಗಿ ಶಿಕ್ಷಣವನ್ನು ನೀಡುತ್ತಿದ್ದ ಈ ಪುಟ್ಟ ಸಂಸ್ಥೆಯು ಇಂದು ಆನಂದ ಶಿಕ್ಷ ನಿಕೇತನ್ ಎಂಬ ಹೆಸರಿನಲ್ಲಿ ಅಸ್ತಿತ್ವಕ್ಕೆ ಬಂತು. ಇಂದು ಈ ಸಂಸ್ಥೆಯಲ್ಲಿ 300 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇವರೆಲ್ಲರಿಗೂ ಉಚಿತವಾಗಿ ಶಿಕ್ಷಣವನ್ನು ನೀಡುತ್ತಿದ್ದೇನೆ. ಆರಂಭದಿಂದ ಇವತ್ತಿನವರೆಗೂ ಈ ಶಾಲೆಯನ್ನು ನಾನು ನಡೆಸುತ್ತಿದ್ದು, ಶಾಲೆಯ ಮುಖ್ಯೋಪಾಧ್ಯಾಯನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎನ್ನುತ್ತಾರೆ ಬಾಬರ್ ಅಲಿ.
2009ರಲ್ಲಿ ಬಿಬಿಸಿ ನನ್ನನ್ನು ವಿಶ್ವದ ಅತ್ಯಂತ ಕಿರಿಯ ಪ್ರಾಂಶುಪಾಲ ಎಂದು ಗುರುತಿಸಿಕೊಂಡಿತು. ಆಗ ನನ್ನ ವಯಸ್ಸು 16 ವರ್ಷ ಆಗಿತ್ತು. ಕಿರಿಯ ವಯಸ್ಸಿನಲ್ಲಿನ ನನ್ನ ಪ್ರಯತ್ನಕ್ಕೆ ಉತ್ತಮ ಪ್ರತಿಫಲ ಸಿಕ್ಕಿದೆ ಎಂಬ ಸಂತೃಪ್ತಿ ನನಗಿದೆ. ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂಬ ನನ್ನ ಗುರಿಯಿಂದ ನಾನು ಹಿಂಜರಿಯುವುದಿಲ್ಲ. ನನ್ನ ಶಿಕ್ಷಣ ಸಂಸ್ಥೆಗೆ ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದು ಬಾಬರ್ ಅಲಿ ವಿವರಿಸುತ್ತಾರೆ.
ಕಾರ್ಯಕ್ರಮಕ್ಕೆ ‘ರಿಯಲ್ ಹೀರೋ’
ಜನವರಿ 17ರಂದು ರವಿವಾರ ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನಿಂದ ಸೇವಾ ಉತ್ಸವ 2016 ಅಂಗವಾಗಿ ನಗರದ ಪುರಭವನದಲ್ಲಿ ಬೆಳಗ್ಗೆ 9:30ಕ್ಕೆ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ವಿಶ್ವದ ಕಿರಿಯ ಪ್ರಾಂಶುಪಾಲ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಬಾಬರ್ ಅಲಿ ಭಾಗವಹಿಸಲಿದ್ದಾರೆ. ಅಂದು ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಗಣ್ಯ ವ್ಯಕ್ತಿಗಳು ಆಗಮಿಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X