Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಟಾರ್ಟ್-ಅಪ್‌ಗಳಿಗೆ ಹೊಸ ತೆರಿಗೆ...

ಸ್ಟಾರ್ಟ್-ಅಪ್‌ಗಳಿಗೆ ಹೊಸ ತೆರಿಗೆ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ16 Jan 2016 11:57 PM IST
share
ಸ್ಟಾರ್ಟ್-ಅಪ್‌ಗಳಿಗೆ ಹೊಸ ತೆರಿಗೆ ವ್ಯವಸ್ಥೆ

ಹೊಸದಿಲ್ಲಿ, ಜ.16: ಬೃಹತ್ ಕಂಪೆನಿಗಳಿಗಿ ರುವ ನಿಯಂತ್ರಣ ವ್ಯವಸ್ಥೆಯಿಂದ ‘ಸ್ಟಾರ್ಟ್-ಅಪ್’ಗಳನ್ನು ವಿಮುಕ್ತಿಗೊಳಿಸುವ ಉದ್ದೇಶದಿಂದ ಅವುಗಳಿಗಾಗಿಯೇ ಹೊಸ ತೆರಿಗೆ ವ್ಯವಸ್ಥೆ ಯೊಂದನ್ನು ಜಾರಿಗೊಳಿಸಲಾಗುವುದೆಂದು ಶನಿವಾರ ಸರಕಾರ ಹೇಳಿದೆ.


‘ಸ್ಟಾರ್ಟ್-ಅಪ್ ಇಂಡಿಯಾ’ ಕಾರ್ಯಕ್ರಮದ ಉದ್ಘಾಟನಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕೆಲವು ಹೊಸ ತೆರಿಗೆ ನಿಯಮಗಳನ್ನು ಕಾರ್ಯಕಾರಿ ಆದೇಶಗಳ ಮೂಲಕ ಘೋಷಿಸಲಾಗುವುದು. ಅವುಗಳಲ್ಲಿ ಕೆಲವನ್ನು ಬಜೆಟ್‌ನಲ್ಲಿ ಮಾಡಲಾಗುವುದು ಎಂದರು.


ಸ್ಟಾರ್ಟ್-ಅಪ್ ಅರ್ಥ ವ್ಯವಸ್ಥೆಯ ಉತ್ತೇಜನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಹತ್ತು ಸಾವಿರ ಕೋಟಿ ರೂ. ನೆರವನ್ನು ಘೋಷಿಸಿದ್ದಾರೆ. ಸ್ಟಾರ್ಟ್-ಅಪ್‌ಗಳಿಗೆ ಸರಕಾರದಿಂದ ಸಂಪೂರ್ಣ ಸ್ವಾತಂತ್ರ ನೀಡಲು ಸರಕಾರವು ವ್ಯವಸ್ಥೆಯೊಂದನ್ನು ಪರಿಶೀಲಿಸುತ್ತಿದೆಯೆಂದು ಉದ್ಯಮಿಗಳ ಸಭೆಯಲ್ಲಿ ಜೇಟ್ಲಿ ಹೇಳಿದರು.


ಇಡೀ ದಿನ ನಡೆಯಲಿರುವ ‘ಸ್ಟಾರ್ಟ್-ಅಪ್ ಇಂಡಿಯಾ’ ಕಾರ್ಯಕ್ರಮಕ್ಕಾಗಿ ಉದ್ಯಮಿಗಳು ತಾಸಿಗೂ ಮೊದಲೇ ವಿಜ್ಞಾನಭವನದ ಹೊರಗೆ ಸಾಲುಗಟ್ಟಿದ್ದರು.


ಒಮ್ಮೆ ಸ್ಟಾಟ್-ಅಪ್ ಚಳವಳಿಯು ವೇಗ ಪಡೆದರೆ, ಅದು ಸರಕಾರದಿಂದ ಸ್ವಾತಂತ್ರವನ್ನು ಪಡೆಯಲಿದೆ. ಸರಕಾರದ ಪಾತ್ರವು ಕೇವಲ ಅನುಕೂಲ ಕಲ್ಪಿಸುವುದಷ್ಟೇ ಆಗಲಿದೆಯೆಂದು ಜೇಟ್ಲಿ ತಿಳಿಸಿದರು.


ಜಾಗತಿಕ ಆರ್ಥಿಕತೆಯು ಹಲವು ಸವಾಲುಗಳನ್ನು ಎದುರಿಸುತ್ತಿರುವ ಕಾಲದಲ್ಲಿ, ಸ್ಟಾರ್ಟ್‌ಅಪ್‌ಗಳು ಬೆಳವಣಿಗೆಯ ಪರ್ಯಾಯ ಯಂತ್ರಗಳಾಗಲಿವೆಯೆಂದು ಅವರು ಹೇಳಿದರು.


ಕಂಪೆನಿಗಳಿಗೆ ಹೆಚ್ಚು ಸ್ವಾತಂತ್ರ ನೀಡುವ ನೀತಿಯನ್ನು ನರೇಂದ್ರ ಮೋದಿ ಸರಕಾರ ಅನುಸರಿಸುತ್ತಿದೆ. ವಿತ್ತ ಸಚಿವಾಲಯಕ್ಕೆ ಕೆಲವೇ ವ್ಯಾಪಾರಿಗಳು ಭೇಟಿ ನೀಡುತ್ತಿರುವುದು ಹಾಗೂ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯಲ್ಲಿ (ಎಫ್‌ಐಪಿಬಿ) ಕಡತಗಳ ರಾಶಿ ಕಡಿಮೆಯಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆಯೆಂದು ಜೇಟ್ಲಿ ತಿಳಿಸಿದರು.


‘ಸ್ಟಾರ್ಟ್‌ಅಪ್ ಇಂಡಿಯಾ’ ಮಾತ್ರವಲ್ಲದೆ, ಸರಕಾರವು ‘ಸ್ಟಾಂಡ್-ಅಪ್ ಇಂಡಿಯಾ’ ಯೋಜನೆಗೂ ಚಾಲನೆ ನೀಡಲಿದೆ. ಅದರನ್ವಯ ಬ್ಯಾಂಕ್ ಶಾಖೆಗಳು ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ಯಮಿಗಳಿಗೆ ಸಾಲ ನೀಡಲಿವೆ. ಸ್ವಾತಂತ್ರ ದಿನಾಚರಣೆಯಂದು ಪ್ರಧಾನಿ, ಸ್ಟಾರ್ಟ್-ಅಪ್ ಇಂಡಿಯಾ ಯೋಜನೆಯನ್ನು ಘೋಷಿಸಿದ್ದರು. ಅದಕ್ಕೆ ಪ್ರತ್ಯೇಕವಾಗಿ ಚಾಲನೆ ನೀಡಲಾಗುವುದು. ಈ ಯೋಜನೆಯು ಎಸ್ಸಿ-ಎಸ್ಟಿ ಹಾಗೂ ಮಹಿಳಾ ಉದ್ಯಮಿಗಳಿಗೆ ಬ್ಯಾಂಕ್‌ಗಳಿಂದ ನಿಧಿ ಪಡೆಯಲು ಸಹಾಯ ಮಾಡುವಂತಹದಾಗಿದೆ. ಈ ವಲಯಗಳಿಂದ ಉದ್ಯಮಿಗಳೇ ಮೂಡಿ ಬರುತ್ತಿಲ್ಲವೆಂದು ಅವರು ವಿವರಿಸಿದರು.


ಸಾರ್ವಜನಿಕವಿರಲಿ, ಖಾಸಗಿಯಿರಲಿ, ಪ್ರತಿಯೊಂದು ಬ್ಯಾಂಕ್ ಶಾಖೆಯೂ ಎಸ್ಸಿ-ಎಸ್ಟಿ ವರ್ಗದಲ್ಲಿ ಒಬ್ಬ ಹಾಗೂ ಮಹಿಳೆಯರಲ್ಲಿ ಒಬ್ಬಳನ್ನು ವಾಸ್ತವವಾಗಿ ದತ್ತು ಪಡೆಯಲಿದೆ. ಅಂದರೆ, ಅವು ತಲಾ ಇಬ್ಬರು ಉದ್ಯಮಿಗಳನ್ನು ದತ್ತು ಪಡೆದು, ಉದ್ಯಮ ಸ್ಥಾಪಿಸಲು ನಿಧಿ ಒದಗಿಸಲಿವೆ. ಈ ವಲಯದ ವ್ಯಾಪಾರ ಅಥವಾ ಉತ್ಪಾದನಾ ಉದ್ಯಮಗಳಿಗೆ ನಿಧಿ ಒದಗಿಸುವುದರಿಂದ, ಮುಂದಿನ 2 ವರ್ಷಗಳಲ್ಲಿ ಸುಮಾರು 3 ಲಕ್ಷ ಹೊಸ ಉದ್ಯಮಿಗಳು ಸೃಷ್ಪಿಯಾಗಲಿದ್ದಾರೆಂದು ಜೇಟ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X