Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಪಾಳಮೋಕ್ಷ ಪ್ರಕರಣ; ವರದಿ ತಳ್ಳಿಹಾಕಿದ...

ಕಪಾಳಮೋಕ್ಷ ಪ್ರಕರಣ; ವರದಿ ತಳ್ಳಿಹಾಕಿದ ಸಿಎಂ, ಬಳ್ಳಾರಿ ಪಾಲಿಕೆ ಆಯುಕ್ತ

ವಾರ್ತಾಭಾರತಿವಾರ್ತಾಭಾರತಿ16 Jan 2016 11:58 PM IST
share
ಕಪಾಳಮೋಕ್ಷ ಪ್ರಕರಣ; ವರದಿ ತಳ್ಳಿಹಾಕಿದ ಸಿಎಂ, ಬಳ್ಳಾರಿ ಪಾಲಿಕೆ ಆಯುಕ್ತ

ಬಳ್ಳಾರಿ,ಜ.16: ಮುಖ್ಯಮಂತ್ರಿ ಸಿದ್ದರಾಮಯ್ಯ, ಬಳ್ಳಾರಿಯಲ್ಲಿ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆನ್ನಲಾದ ದೃಶ್ಯದ ವೀಡಿಯೊ, ಟಿವಿ ವಾಹಿನಿಗಳಲ್ಲಿ ಪ್ರಸಾರವಾಗಿದ್ದು, ವಿವಾದಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರು ಶನಿವಾರ ಬಳ್ಳಾರಿಯ ಕೌಲ್‌ಬಜಾರ್ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ವಾಲ್ಮೀಕಿ ಭವನದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ, ತನಗೆ ಅಡ್ಡಬಂದ ಬಳ್ಳಾರಿ ನಗರಪಾಲಿಕೆ ಆಯುಕ್ತ ಪಿ.ಜಿ.ರಮೇಶ್ ಅವರಿಗೆ ಕಪಾಳಮೋಕ್ಷ ಮಾಡಿದರೆಂದು ಕೆಲವು ಟಿವಿ ವಾಹಿನಿಗಳು ವರದಿ ಮಾಡಿದ್ದವು. ತನ್ನ ಭದ್ರತಾಸಿಬ್ಬಂದಿ ಹಾಗೂ ಬೆಂಬಲಿಗರಿಂದ ಸುತ್ತುವರಿಯಲ್ಪಟ್ಟ ಮುಖ್ಯಮಂತ್ರಿಗೆ ಹಸ್ತಲಾಘವ ಮಾಡಲು ಜನರು ಮುಗಿಬಿದ್ದಿದ್ದರು. ಆಗ ತನಗೆ ಅಡ್ಡ ಬಂದ ವ್ಯಕ್ತಿಯೊಬ್ಬರಿಗೆ ದಾರಿ ಬಿಡಿ ಎಂದು ಸಿದ್ದರಾಮಯ್ಯ ಆತನ ಮೇಲೆ ಕೈಎತ್ತುವ ದೃಶ್ಯವನ್ನು ಮಾಧ್ಯಮಗಳು ಪ್ರಸಾರ ಮಾಡಿದ್ದವು. ಮುಖ್ಯಮಂತ್ರಿ ಕಪಾಳಮೋಕ್ಷ ಮಾಡಿದ್ದರೆನ್ನಲಾದ ವ್ಯಕ್ತಿಯ ಬೆನ್ನಿನ ಭಾಗವನ್ನಷ್ಟೇ ವೀಡಿಯೊದಲ್ಲಿ ತೋರಿಸಲಾಗಿತ್ತು. ಆದಾಗ್ಯೂ ಮುಖ್ಯಮಂತ್ರಿ ತನ್ನ ಮೇಲೆ ಕೈ ಮಾಡಿದ್ದಾರೆನ್ನುವ ಸುದ್ದಿಯನ್ನು ಬಳ್ಳಾರಿ ನಗರಪಾಲಿಕೆ ಆಯುಕ್ತ ರಮೇಶ್ ತಳ್ಳಿಹಾಕಿದ್ದಾರೆ.
ಸಿಎಂ ನನ್ನ ಮೇಲೆ ಕೈ ಮಾಡಿದ್ದಾರೆಂಬುದು ಸುಳ್ಳು ಸುದ್ದಿ. ಮುಖ್ಯಮಂತ್ರಿ ನನ್ನ ಮೇಲೆ ಯಾಕೆ ಕೈ ಮಾಡಬೇಕು. ನಾನು ಅವರನ್ನು ಸ್ವಾಗತಿಸಲು ಮುಂದೆ ಬಂದಾಗ ಜನಜಂಗುಳಿಯ ನಡುವೆ ನನ್ನ ಕಾಲುಜಾರಿತು. ಆಗ ಅವರು ತನ್ನ ಭದ್ರತಾ ಸಿಬ್ಬಂದಿಗೆ ನನ್ನನ್ನು ತಳ್ಳಬೇಡಿ ಅಂದರು ಅಷ್ಟೇ ಎಂದು ರಮೇಶ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಯವರು ತನ್ನ ಭದ್ರತಾ ಸಿಬ್ಬಂದಿಯ ಮೇಲೆ ಸಿಡಿಮಿಡಿಗೊಂಡರೇ ಹೊರತು ತನ್ನ ಮೇಲಲ್ಲವೆಂದು ಅವರು ಹೇಳಿದ್ದಾರೆ.
ಈ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಪ್ರಸಾರ ಮಾಡಿದ ಹೇಳಿಕೆಯೊಂದರಲ್ಲಿ, ತಾನು ಯಾವುದೇ ಅಧಿಕಾರಿಯನ್ನು ಥಳಿಸಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.


ಬಳ್ಳಾರಿಯ ವಾಲ್ಮೀಕಿ ಭವನದ ಉದ್ಘಾಟನೆಯ ಸಂದರ್ಭದಲ್ಲಿ ತಾನು ಅಧಿಕಾರಿಯೊಬ್ಬರಿಗೆ ಥಳಿಸಿದ್ದಾರೆಂದು ಕೆಲವು ಮಾಧ್ಯಮ ಚಾನೆಲ್‌ಗಳು ಪ್ರಸಾರ ಮಾಡಿರುವುದು ತನಗೆ ಅಚ್ಚರಿ ಹಾಗೂ ಬೇಸರವನ್ನು ಮೂಡಿಸಿದೆ. ತಾನು ಯಾವುದೇ ಅಧಿಕಾರಿಗೆ ಥಳಿಸಿಲ್ಲವೆಂದು, ರಾಜ್ಯದ ಜನತೆಗೆ ತಿಳಿಸಲಿಚ್ಛಿಸುತ್ತೇನೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X