Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲಿಗಢ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನ...

ಅಲಿಗಢ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನ ಕಸಿಯಲು ಸಂಚು: ನದ್ವಿ ಆರೋಪ

ವಾರ್ತಾಭಾರತಿವಾರ್ತಾಭಾರತಿ17 Jan 2016 12:26 AM IST
share

ಭಟ್ಕಳ: ಅಲಿಗಢ ಮುಸ್ಲಿಂ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಪಡಿಸಲು ಕೇಂದ್ರ ಸರಕಾರ ನಡೆಸುತ್ತಿರುವ ಪ್ರಯತ್ನವು ಅಲ್ಪಸಂಖ್ಯಾತರ ಸಂವಿಧಾನದತ್ತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ)ಯ ಅಧ್ಯಕ್ಷ ವೌಲಾನಾ ಸೈಯದ್ ರಾಬೆಅ್ ಹಸನಿ ನದ್ವಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು,‘‘ಅಲಿಗಢ ವಿಶ್ವವಿದ್ಯಾನಿಲಯವನ್ನು ಮುಸ್ಲಿಮರು ಆರಂಭಿಸಿದ್ದು ಮಾತ್ರವಲ್ಲ, ಅದು ಸುಗಮವಾಗಿ ನಡೆಯುವಂತೆ ಮಾಡಲು ಅವರು ಅಪಾರ ತ್ಯಾಗ ಕೂಡಾ ಮಾಡಿದ್ದಾರೆ. ಈ ವಿಶ್ವವಿದ್ಯಾನಿಲಯವು ಅವರ ತ್ಯಾಗಗಳ ಸಂಕೇತವಾಗಿದೆ. ಸರಕಾರವು ಅದನ್ನು ಕಸಿದುಕೊಳ್ಳಕೂಡದು. ಒಂದು ವೇಳೆ ಸರಕಾರವು ಅಲಿಗಢ ಮುಸ್ಲಿಂ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು, ದೃಢಪಡಿಸಲು ವಿಫಲವಾದಲ್ಲಿ ಎಐಎಂಪಿಎಲ್‌ಬಿ ಪ್ರತಿಭಟನೆ ನಡೆಸಲಿದೆ’ ಎಂದವರು ಹೇಳಿದ್ದಾರೆ.

‘‘ಹಾಲಿ ಕೇಂದ್ರ ಸರಕಾರವು ಅಲ್ಪಸಂಖ್ಯಾತರ ಬಗ್ಗೆ ಅಸಹಿಷ್ಣುತೆಯನ್ನು ಹೊಂದಿದೆಯೆಂಬ ಸಾರ್ವತ್ರಿಕ ಭಾವನೆಯಿದೆ. ಆದರೆ ಸರಕಾರವು ಅದನ್ನು ಒಪ್ಪಿಕೊಳ್ಳುವುದಿಲ್ಲ. ಒಂದು ವೇಳೆ ಅದು ನಿಜಕ್ಕೂ ಅಲ್ಪಸಂಖ್ಯಾತರ ವಿರುದ್ಧ ಅಸಹಿಷ್ಣುತೆಯನ್ನು ಹೊಂದಿರದಿದ್ದಲ್ಲಿ ಸಂವಿಧಾನದಲ್ಲಿ ಉಲ್ಲೇಖಿಸಲಾಗಿರುವ ಹಕ್ಕುಗಳನ್ನು ಅವರಿಗೆ ನೀಡಬೇಕು. ಅಲಿಗಢ ವಿವಿಯ ಅಲ್ಪಸಂಖ್ಯಾತ ಸ್ಥಾನಮಾನವನ್ನು ದೃಢಪಡಿಸುವಂತಹ ಕ್ರಮಗಳಿಂದ ಅದು ತನ್ನ ಮೇಲಿರುವ ಅಸಹಿಷ್ಣುತೆಯ ಆರೋಪದಿಂದ ಮುಕ್ತವಾಗಬೇಕು’ ಎಂದು ನದ್ವಿ ಹೇಳಿದ್ದಾರೆ.

ವಿವಿಧ ತೀವ್ರವಾದಿ ಸಂಘಟನೆಗಳು ಅಲ್ಪಸಂಖ್ಯಾತರ ವಿರುದ್ಧ ನೀಡಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸುವ ಮುನ್ನ ಪ್ರಬುದ್ಧ ಹಾಗೂ ವಿಮರ್ಶಾತ್ಮಕತೆಯಿಂದ ವರ್ತಿಸಲು ಎಐಎಂಪಿಎಲ್‌ಬಿ ನಿರ್ಧರಿಸಿದೆ ಎಂದ ಅವರು, ‘‘ಭಾರತದಲ್ಲಿ ಅಲ್ಪಸಂಖ್ಯಾತರಲ್ಲಿ ಅಸುರಕ್ಷತೆಯ ಭಾವನೆಯನ್ನು ಮೂಡಿಸಲು ಪ್ರಯತ್ನಿಸಲಾಗುತ್ತಿದೆ. ನಾವು ಅಂತಹ ಎಲ್ಲಾ ಚಟುವಟಿಕೆಗಳನ್ನು ಗಮನಿಸುತ್ತೇವೆ ಹಾಗೂ ಜಾಗರೂಕತೆಯಿಂದ ಅವುಗಳನ್ನು ವಿಶ್ಲೇಷಿಸುತ್ತೇವೆ. ಆದಾಗ್ಯೂ, ಅಗತ್ಯ ಸಂದರ್ಭಗಳಲ್ಲಿ ಮಾತ್ರವೇ ನಾವು ಸರಕಾರದ ಜೊತೆ ಈ ಬಗ್ಗೆ ಮಾತನಾಡುತ್ತೇವೆ’’ ಎಂದು ಸ್ಪಷ್ಟಪಡಿಸಿದರು.

ರಾಮಜನ್ಮಭೂಮಿ ವಿವಾದವನ್ನು ಕೆದಕಲು ಸಂಘ ಪರಿವಾರ ನಡೆಸುತ್ತಿರುವ ಪ್ರಯತ್ನಗಳನ್ನು ಉಲ್ಲೇಖಿಸಿದ ಅವರು, ‘‘ಪ್ರಕರಣವು ಸುಪ್ರೀಂಕೋರ್ಟ್‌ನಲ್ಲಿದ್ದು, ತಡೆಯಾಜ್ಞೆ ಜಾರಿಯಲ್ಲಿದೆ. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ತೀವ್ರವಾದಿ ಹಾಗೂ ದ್ವೇಷಪೂರಿತ ಹೇಳಿಕೆಗಳಿಗೆ ಅಂಜಲಾರೆವು’’ಎಂದು ಹಸಾನಿ ನದ್ವಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X