Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆರೆ ಒತ್ತುವರಿದಾರರಿಗೆ ಫೆ.15ರೊಳಗೆ...

ಕೆರೆ ಒತ್ತುವರಿದಾರರಿಗೆ ಫೆ.15ರೊಳಗೆ ನೋಟಿಸ್; ಫೆ.29ರೊಳಗೆ ಉತ್ತರ ನೀಡಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Jan 2016 10:58 PM IST
share
ಕೆರೆ ಒತ್ತುವರಿದಾರರಿಗೆ ಫೆ.15ರೊಳಗೆ ನೋಟಿಸ್; ಫೆ.29ರೊಳಗೆ ಉತ್ತರ ನೀಡಲು ಸೂಚನೆ

ಬೆಂಗಳೂರು, ಜ. 18: ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶ ದಲ್ಲಿ ಕೆರೆ ಭೂಮಿ ಒತ್ತುವರಿ ಮಾಡಿಕೊಂಡಿರುವವರಿಗೆ ಫೆ.15ರೊಳ ಗಾಗಿ ನೋಟಿಸ್ ಜಾರಿ ಮಾಡಬೇಕು ಎಂದು ತಾಕೀತು ಮಾಡಿರುವ ಸಮಿತಿ ಅಧ್ಯಕ್ಷ ಕೆ.ಬಿ.ಕೋಳಿವಾಡ್, ಫೆ.29ರ ಒಳಗಾಗಿ ನೋಟಿಸ್‌ಗೆ ಉತ್ತರ ನೀಡಲು ಗಡುವು ನೀಡಲಾಗಿದೆ ಎಂದು ಪ್ರಕಟಿಸಿದ್ದಾರೆ.
ಸೋಮವಾರ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ತಹಶೀಲ್ದಾರರ ಸಭೆಯ ಬಳಿಕ ಮಾತನಾಡಿದ ಅವರು, ಫೆಬ್ರವರಿ ಅಂತ್ಯದೊಳಗಾಗಿ ಕೆರೆ ಭೂಮಿ ಒತ್ತುವರಿದಾರರಿಂದ ಉತ್ತರ ಪಡೆದು ಕೊಂಡು ಆ ಬಳಿಕ ಮಾ.1ಕ್ಕೆ ಅಧಿಕಾರಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಬೆಂಗಳೂರು ನಗರ ಉತ್ತರ, ದಕ್ಷಿಣ, ಪೂರ್ವ ಹಾಗೂ ಪಶ್ಚಿಮದ ತಾಲೂಕು ಹಾಗೂ ಗ್ರಾಮಾಂತರ ಜಿಲ್ಲೆಯ ಆನೇಕಲ್, ದೊಡ್ಡಬಳ್ಳಾಪುರ ತಾಲೂಕು ತಹಶೀಲ್ದಾರ್‌ಗಳು, ಉಪವಿಭಾಗಾಕಾರಿ ಗಳು, ನೋಟಿಸ್ ನೀಡಿದವರ ಬಗ್ಗೆ ಮಾಹಿತಿಯನ್ನು ಕೋಳಿವಾಡ್ ಇದೇ ವೇಳೆ ತಿಳಿಸಿದರು.
ಬೆಂಗಳೂರು ಉತ್ತರ ತಾಲೂಕು 372 ಮಂದಿ ಒತ್ತುವರಿದಾರಿದ್ದು, 349 ಎಕರೆ ಕೆರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಆ ಪೈಕಿ 351 ಮಂದಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ಮಾಹಿತಿ ನೀಡಿದರು. ಈ ವೇಳೆ ಕೋಳಿವಾಡ್, ಉಳಿದವರಿಗೆ ಕೂಡಲೇ ನೋಟಿಸ್ ನೀಡಬೇಕೆಂದು ಸೂಚಿಸಿದರು.
ಬೆಂಗಳೂರು ದಕ್ಷಿಣ ತಾಲೂಕು ವ್ಯಾಪ್ತಿಯಲ್ಲಿ ಒಟ್ಟು 210 ಕೆರೆಗಳಿಗೆ ಎಂದು ಉಪವಿಭಾಗಾಧಿಕಾರಿ ನಾಗರಾಜ್ ಮಾಹಿತಿ ನೀಡಿದರು. ಇದಕ್ಕೆ ಆಕ್ಷೇಪಿಸಿದ ಸಮಿತಿ ಅಧ್ಯಕ್ಷ ಕೋಳಿವಾಡ್, ಸಮಿತಿಗೆ ನೀಡಿದ ದಾಖಲೆಗ ಳಲ್ಲಿ 201 ಕೆರೆಗಳೆಂದು ಗುರುತಿಸಲಾಗಿದೆ. ಆದರೆ, ಇದೀಗ ಕೆರೆಗಳು ಏಕಾಏಕಿ ಜಾಸ್ತಿ ಆಗಲು ಕಾರಣವೇನು? ಸ್ಪಷ್ಟ ಮಾಹಿತಿ ನೀಡಿ ಎಂದು ಖಡಕ್ ಸೂಚನೆ ನೀಡಿದರು. ಆನೇಕಲ್ ತಾಲೂಕಿನಲ್ಲಿಯೂ ಕೆರೆಗಳ ಬಗ್ಗೆ ಗೊಂದಲಗಳಿದ್ದು, ಸಮಿತಿಗೆ ಅಧಿಕಾರಿಗಳು ಸೂಕ್ತ ಮಾಹಿತಿಯನ್ನು ನೀಡಬೇಕು. ಇಲ್ಲವಾದರೆ, ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಚಿಂತನೆ ನಡೆಸಬೇಕಾಗುತ್ತದೆ ಎಂದು ಸಮಿತಿ ಅಧ್ಯಕ್ಷ ಕೋಳಿವಾಡ್ ಇದೇ ವೇಳೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬೆಂಗಳೂರು ಉತ್ತರ ತಾಲೂಕಿನ ವ್ಯಾಪ್ತಿಯಲ್ಲಿನ 372 ಮಂದಿ ಕೆರೆ ಭೂಮಿ ಒತ್ತುವರಿದಾರರ ಪೈಕಿ 351 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ, ದಕ್ಷಿಣ ತಾಲೂಕಿನಲ್ಲಿ 110 ಮಂದಿ ಪೈಕಿ 97 ಮಂದಿಗೆ, ಪೂರ್ವ ತಾಲೂಕಿನಲ್ಲಿ 840 ಮಂದಿ ಪೈಕಿ 832 ಮಂದಿಗೆ ಹಾಗೂ ಆನೇಕಲ್‌ನಲ್ಲಿ 1,407 ಮಂದಿ ಪೈಕಿ 503 ಮಂದಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1,494 ಮಂದಿ ಕೆರೆ ಭೂಮಿ ಒತ್ತುವರಿದಾರರ ಪೈಕಿ ಈವರೆಗೂ ಯಾರೊಬ್ಬರಿಗೂ ನೋಟಿಸ್ ಜಾರಿ ಮಾಡಿಲ್ಲ ಎಂಬುದು ಸಮಿತಿ ಅಧ್ಯಕ್ಷ ಕೋಳಿವಾಡ್ ಸೇರಿದಂತೆ ಸದಸ್ಯ ರನ್ನು ತೀವ್ರವಾಗಿ ಕೆರಳಿಸಿತು.
ಕೂಡಲೇ ಒತ್ತುವರಿದಾರರಿಗೆ ನೋಟಿಸ್ ನೀಡಿ ಎಂಬ ಖಡಕ್ ಸೂಚನೆಯನ್ನು ಸಮಿತಿ ಅಧಿಕಾರಿಗಳಿಗೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X