Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಾಮಾಣಿಕತೆ, ಸರಳತೆಗೆ ಶಾಸ್ತ್ರಿ...

ಪ್ರಾಮಾಣಿಕತೆ, ಸರಳತೆಗೆ ಶಾಸ್ತ್ರಿ ಆದರ್ಶ: ಅನಿಲ್ ಶಾಸ್ತ್ರಿ

ವಾರ್ತಾಭಾರತಿವಾರ್ತಾಭಾರತಿ19 Jan 2016 11:21 PM IST
share
ಪ್ರಾಮಾಣಿಕತೆ, ಸರಳತೆಗೆ ಶಾಸ್ತ್ರಿ ಆದರ್ಶ: ಅನಿಲ್ ಶಾಸ್ತ್ರಿ

ಬೆಂಗಳೂರು, ಜ.19: ಯುವ ಸಮುದಾಯ ಜಾಗತಿಕವಾಗಿ ಎದುರಾಗುವ ಸ್ಪರ್ಧೆಯನ್ನು ಎದುರಿಸುವ ಅರ್ಹತೆ ಪಡೆಯಬೇಕೆಂದು ಕೇಂದ್ರದ ಮಾಜಿ ಸಚಿವ ಅನಿಲ್ ಶಾಸ್ತ್ರಿ ಇಂದಿಲ್ಲಿ ಸಲಹೆ ನೀಡಿದರು.
ಎಂವಿಆರ್ ಫೌಂಡೇಶನ್ ಆಯೋಜಿಸಿದ್ದ ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ರಾಜಕೀಯ ಮೌಲ್ಯಗಳು ಮತ್ತು ಸಿದ್ಧಾಂತಗಳ ಸ್ಮರಣೆ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾಗತೀಕರಣ ನಂತರ ಭಾರತದಲ್ಲೂ ಸಾಕಷ್ಟು ಬದಲಾಗಿದ್ದು, ಅವಕಾಶಗಳಿಗೆ ಅನುಗುಣವಾಗಿ ಸ್ಪರ್ಧೆ ಎದುರಿಸುವಂತಹ ಅರ್ಹತೆ ಪಡೆಯಬೇಕೆಂದರು.
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಿ ಆಗಿದ್ದಾಗ ತಮ್ಮ ಮಗನಿಗೆ 18 ವರ್ಷ ತುಂಬದಿದ್ದರೂ ಕಾರ್ ಚಾಲನಾ ಪರವಾನಿಗೆ ಸಿಕ್ಕಿತ್ತು. ಅದನ್ನು ಗಮನಿಸಿದ ಕೂಡಲೇ ತುಂಬಾ ನೊಂದುಕೊಂಡ ಶಾಸ್ತ್ರಿ ಅವರು ಪ್ರಧಾನಿ ಅವರ ಮನೆ ಮತ್ತು ಮಗನಿಂದ ಕಾನೂನು ಉಲ್ಲಂಘನೆ ಆಗಿದೆ ಎಂದು ಮನವರಿಕೆ ಮಾಡಿಕೊಟ್ಟು ಕಾರು ಚಾಲನಾ ಪರವಾನಿಗೆ ಹಿಂತಿರುಗಿಸುವಂತೆ ಮಾಡಿದರು ಎಂದು ಅವರು ಹೇಳಿದರು.
ಎಂವಿಆರ್ ಫೌಂಡೇಶನ್‌ನ ಉಪಾಧ್ಯಕ್ಷ ಎಚ್.ಹನುಮಂತಪ್ಪಮಾತನಾಡಿ, ವರದಕ್ಷಿಣೆ ಪಡೆಯದೆ ಮದುವೆ ಆಗಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಸರಕಾರಿ ಸೌಲಭ್ಯಗಳನ್ನು ಸ್ವಾರ್ಥಕ್ಕೆ ಬಳಸದೆ ಹೇಗಿರಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ರೈಲು ಅಪಘಾತವಾದಾಗ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿದ ಶಾಸ್ತ್ರಿ ಅವರಿಗೆ ದೂರದೃಷ್ಟಿ ಇತ್ತು. ಆಡಳಿತದಲ್ಲಿ ಪರಿಶುದ್ಧತೆ ಹಾಗೂ ಪ್ರಾಮಾಣಿಕತೆ ಪ್ರದರ್ಶಿಸಿದ್ದರು ಎಂದು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಫೌಂಡೇಶನ್ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಎಂ.ವಿ.ರಾಜಶೇಖರನ್, ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಹೊ.ಶ್ರೀನಿವಾಸಯ್ಯ, ಕಾರ್ಯದರ್ಶಿ ಪ್ರೊ.ಜಿ.ಬಿ.ಶಿವರಾಜು, ಗಾಂಧಿವಾದಿ ಎಸ್.ಎಂ.ಸುಬ್ಬರಾಯ್ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X