Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಸಂಶೋಧಕನ ಆತ್ಮಹತ್ಯೆ: ಸಚಿವೆ ಸ್ಮತಿ...

ದಲಿತ ಸಂಶೋಧಕನ ಆತ್ಮಹತ್ಯೆ: ಸಚಿವೆ ಸ್ಮತಿ ಇರಾನಿಯಿಂದ ವಿಶ್ವ ವಿದ್ಯಾನಿಲಯಕ್ಕೆ ಒತ್ತಡ?

ವಾರ್ತಾಭಾರತಿವಾರ್ತಾಭಾರತಿ19 Jan 2016 11:43 PM IST
share
ದಲಿತ ಸಂಶೋಧಕನ ಆತ್ಮಹತ್ಯೆ: ಸಚಿವೆ ಸ್ಮತಿ ಇರಾನಿಯಿಂದ ವಿಶ್ವ ವಿದ್ಯಾನಿಲಯಕ್ಕೆ ಒತ್ತಡ?

ಹೊಸದಿಲ್ಲಿ, ಜ.19: ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ದಲಿತ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಎಂಬವರ ಆತ್ಮಹತ್ಯಾ ಪ್ರಕರಣದಲ್ಲಿ ಮಾನವ ಸಂಪನ್ಮೂಲ ಸಚಿವಾಲಯದ ಪಾತ್ರವು ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಕೇಂದ್ರ ಕಾರ್ಮಿಕ ಖಾತೆಯ ಸಹಾಯಕ ಸಚಿವ ಬಂಡಾರು ದತ್ತಾತ್ರೇಯ ಪತ್ರವನ್ನು ಮುಂದಿಟ್ಟುಕೊಂಡು ಮಾನವ ಸಂಪನ್ಮೂಲ ಸಚಿವಾಲಯವೂ ವಿಶ್ವವಿದ್ಯಾನಿಲಯಕ್ಕೆ ವಿವರವನ್ನು ಕೇಳಿರುವುದು ಇದೀಗ ಸ್ಪಷ್ಟವಾಗಿದೆ.


 ಕಾರ್ಮಿಕ ಖಾತೆಯ ಸಹಾಯಕ ಸಚಿವ ಬಂಡಾರು ದತ್ತಾತ್ರೇಯ ಸಹಿ ಮಾಡಿದ್ದ ಟಿಪ್ಪಣಿ ಯೊಂದು ತಲುಪಿದ ಬಳಿಕ ಮಾನವ ಸಂಪನ್ಮೂಲ ಸಚಿವಾಲಯವೂ ವಿಶ್ವವಿದ್ಯಾನಿಲಯಕ್ಕೆ ಈ ಪತ್ರವನ್ನು ಬರೆದಿತ್ತು.


ಟಿಪ್ಪಣಿಯಲ್ಲಿ ಬಂಡಾರು, ಕೆಲವು ವಿಚಾರಗಳನ್ನೆತ್ತಿದ್ದರು ಹಾಗೂ 2015ರ ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದಿದ್ದ ಕೆಲವು ಘರ್ಷಣೆಗಳ ಬಗ್ಗೆ ಮಾನವ ಸಂಪನ್ಮೂಲಾಭಿವೃದ್ಧಿ ಸಚಿವಾಲಯಕ್ಕೆ ಮಾಹಿತಿ ನೀಡಿದ್ದರೆಂಬುದನ್ನು ಬಹಿರಂಗಪಡಿಸಿದೆ.


ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಚಿವಾಲಯವು ಮೊದಲು ಬರೆದಿದ್ದ ಪತ್ರದಲ್ಲಿ ವಿವರಗಳನ್ನು ಕೋರಿದ್ದು, ಬಂಡಾರು ಬರೆದಿದ್ದ ಪತ್ರವನ್ನು ಪರಿಶೀಲಿಸುವಂತೆ ಸೂಚಿಸಿತ್ತು. ಎರಡನೆಯ ಪತ್ರದಲ್ಲಿ ಅದು ಯಾವುದೇ ಮಾಹಿತಿ ಅಥವಾ ಹೇಳಿಕೆಗಳು ತನಗೆ ತಲುಪಿಲ್ಲವೆಂದು ವಿವಿಯ ರಿಜಿಸ್ಟ್ರರ್‌ಗೆ ಜ್ಞಾಪಿಸಿತ್ತು ಹಾಗೂ ಬಂಡಾರು ದತ್ತಾತ್ರೇಯರಿಗೆ ಉತ್ತರ ಕಳುಹಿಸಲು ಸಾಧ್ಯವಾಗುವಂತೆ ಈ ವಿಷಯವನ್ನು ತ್ವರಿತಗೊಳಿಸುವಂತೆ ವಿವಿಗೆ ಮನವಿ ಮಾಡಿತ್ತು.


ಹೈದರಾಬಾದ್ ವಿವಿಯಲ್ಲಿ ಆಗ ಎಬಿವಿಪಿ ಅಧ್ಯಕ್ಷರಾಗಿದ್ದ ಸುಶೀಲ್ ಕುಮಾರ್ ಎಂಬವರ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದೆಯೆನ್ನಲಾದ ಬಳಿಕ ಹೈದರಾಬಾದ್‌ನಲ್ಲಿ ಕೆಲವು ಹಿಂಸಾಚಾರದ ಘಟನೆಗಳು ವರದಿಯಾಗಿದ್ದವು.


ರೋಹಿತ್‌ರ ಆತ್ಮಹತ್ಯೆಗೆ ಸಂಬಂಧಿಸಿ ಬಂಡಾರು ದತ್ತಾತ್ರೇಯ ಹಾಗೂ ವಿವಿಯ ಉಪಕುಲಪತಿಯ ವಿರುದ್ಧ ಎಸ್ಸಿ-ಎಸ್ಟಿ ಕಾಯ್ದೆಯನ್ವಯ ಪ್ರಕರಣ ದಾಖಲಾಗಿದೆ.


ಸಚಿವ ಬಂಡಾರು ದತ್ತಾತ್ರೇಯರ ಒತ್ತಾಸೆಯಂತೆ ದಲಿತ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯವು ರೋಹಿತ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ. ದಲಿತ ವಿದ್ಯಾರ್ಥಿಗಳನ್ನು ದೇಶದ್ರೋಹಿಗಳು ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಮಾನವ ಸಂಪನ್ಮೂಲಾಭಿವೃದ್ಧಿ ಸಚಿವೆ ಸ್ಮತಿ ಇರಾನಿಯವರಿಗೆ ಪತ್ರ ಬರೆದಿದ್ದರೆಂಬ ಆರೋಪದೊಂದಿಗೆ ಈ ಪ್ರಕರಣವೀಗ ರಾಜಕೀಯ ತಿರುವು ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X