ಕಾಸರಗೋಡು : ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು
ಕಾಸರಗೋಡು : ಕಾರು ಡಿಕ್ಕಿ ಹೊಡೆದು ಪಾದಾಚಾರಿ ಮ್ರತಪಟ್ಟ ಘಟನೆ ಬುಧವಾರ ಸಂಜೆ ವಿದ್ಯಾನಗರದಲ್ಲಿ ನಡೆದಿದೆ.
ಮ್ರತಪಟ್ಟವರನ್ನು ವಿದ್ಯಾನಗರ ಉದಯಗಿರಿಯ ನಾರಾಯಣ ( ೬೪) ಎಂದು ಗುರುತಿಸಲಾಗಿದೆ.
ಜಿಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು , ಕೂಡಲೇ ಕಾಸರಗೋಡು ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮ್ರತಪಟ್ಟರು.
ಮ್ರತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ವಿದ್ಯಾನಗರ ಟಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





