Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ವಿವಿಯಲ್ಲಿ ಭಯೋತ್ಪಾದಕರ ಅಟ್ಟಹಾಸ:...

ಪಾಕ್ ವಿವಿಯಲ್ಲಿ ಭಯೋತ್ಪಾದಕರ ಅಟ್ಟಹಾಸ: ಕನಿಷ್ಠ 25 ಬಲಿ

ವಾರ್ತಾಭಾರತಿವಾರ್ತಾಭಾರತಿ20 Jan 2016 11:57 PM IST
share
ಪಾಕ್ ವಿವಿಯಲ್ಲಿ ಭಯೋತ್ಪಾದಕರ ಅಟ್ಟಹಾಸ: ಕನಿಷ್ಠ 25 ಬಲಿ

50ಕ್ಕೂ ಅಧಿಕ ಜನರಿಗೆ ಗಾಯ
 
ಪೇಷಾವರ,ಜ.20: ಪಾಕಿಸ್ತಾನದ ಅಶಾಂತ ಖೈಬರ್-ಪಖ್ತುಂಖ್ವಾ ಪ್ರಾಂತದ ಚರ್ಸಡ್ಡಾ ಜಿಲ್ಲೆಯ ಪ್ರತಿಷ್ಠಿತ ಬಚಾಖಾನ್ ವಿಶ್ವವಿದ್ಯಾನಿಲಯಕ್ಕೆ ಬುಧವಾರ ಬೆಳಗ್ಗೆ ನುಗ್ಗಿದ ಭಾರೀ ಶಸ್ತ್ರಸಜ್ಜಿತ ತಾಲಿಬಾನ್ ಉಗ್ರರು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಭೀಕರ ಗುಂಡಿನ ದಾಳಿಯನ್ನು ನಡೆಸಿದ್ದು, ಕನಿಷ್ಠ 25 ಜನರು ಕೊಲ್ಲಲ್ಪಟ್ಟಿದ್ದಾರೆ. ಇತರ 50ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಪೇಷಾವರದ ನೈಋತ್ಯಕ್ಕೆ ಸುಮಾರು 50 ಕಿ.ಮೀ.ದೂರದಲ್ಲಿರುವ ವಿವಿಗೆ ನುಗ್ಗಿದ ಉಗ್ರರು ತರಗತಿ ಕೋಣೆಗಳು ಮತ್ತು ಹಾಸ್ಟೆಲ್‌ಗಳಲ್ಲಿದ್ದವರ ಮೇಲೆ ಯದ್ವಾತದ್ವಾ ಗುಂಡುಗಳನ್ನು ಹಾರಿಸಿದರೆಂದು ಮಾಧ್ಯಮ ವರದಿಗಳು ತಿಳಿಸಿವೆ.


ವಿವಿ ಕ್ಯಾಂಪಸ್‌ನೊಳಗಿನಿಂದ ಭಾರೀ ಸ್ಫೋಟ ಮತ್ತು ಗುಂಡು ಹಾರಾಟದ ಶಬ್ದಗಳು ಕೇಳಿ ಬರುತ್ತಿದ್ದವು ಎಂದು ವರದಿಗಳು ತಿಳಿಸಿವೆ.


ಓರ್ವ ಪ್ರೊಫೆಸರ್ ಸೇರಿದಂತೆ 25 ಜನರು ಕೊಲ್ಲಲ್ಪಟ್ಟಿದ್ದು, ಇತರ 50 ಜನರು ಗಾಯಗೊಂಡಿದ್ದಾರೆಂದು ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್ ಪಕ್ಷದ ನಾಯಕ ಹಾಗೂ ಪ್ರಾಂತೀಯ ಶಾಸಕ ಶೌಕತ್ ಯೂಸುಫ್‌ಝಾಯಿ ತಿಳಿಸಿದರು.


ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದಲ್ಲಿಯ ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಸ್ಥಿತಿಯನ್ನು ಘೋಷಿಸಲಾಗಿದೆ. ಪ್ರದೇಶದಲ್ಲಿಯ ಎಲ್ಲ ಶಾಲಾಕಾಲೇಜುಗಳನ್ನು ಮುಚ್ಚಲಾಗಿದೆ.
4ರಿಂದ 10 ಭಯೋತ್ಪಾದಕರು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ ಯೂಸುಫ್‌ಜಾಯಿ, ಇಂತಹ ಹೇಡಿತನದ ದಾಳಿಯು ಭೀತಿವಾದದ ವಿರುದ್ಧ ಹೋರಾಡುವ ಸರಕಾರದ ನಿರ್ಧಾರವನ್ನು ದುರ್ಬಲಗೊಳಿಸದು ಎಂದರು.
ದಾಳಿಯ ಬೆನ್ನಲ್ಲೇ ಭಾರೀ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿದ ಭದ್ರತಾ ಪಡೆಗಳು ವಿದ್ಯಾರ್ಥಿಗಳನ್ನು ತೆರವುಗೊಳಿಸುವ ಕಾರ್ಯವನ್ನಾರಂಭಿಸಿದವು. ಪಾಕ್ ಸೇನಾ ಪಡೆಯ ಯೋಧರೂ ಪೇಷಾವರದಿಂದ ವಿವಿಗೆ ಧಾವಿಸಿ ಉಗ್ರರನ್ನು ದಮನಿಸಲು ಕಾರ್ಯಾಚರಣೆಯಲ್ಲಿ ತೊಡಗಿಕೊಂಡರು.
 
ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ವಿವಿಯ ಎಲ್ಲ ಕಟ್ಟಡಗಳು ಮತ್ತು ಛಾವಣಿಗಳು ಯೋಧರ ವಶದಲ್ಲಿವೆ ಎಂದು ಸೇನೆಯ ವಕ್ತಾರ ಲೆಜಆಸಿಂ ಸಲೀಂ ಬಾಜ್ವಾ ಟ್ವೀಟಿಸಿದ್ದಾರೆ. ತೆಹ್ರೀಕ್-ಎ-ತಾಲಿಬಾನ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ದಾಳಿಯ ವೇಳೆ ವಿವಿಯಲ್ಲಿ 3,000ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಕವಿ ಸಮ್ಮೇಳನವೊಂದಕ್ಕೆ ಆಹ್ವಾನಿತ 600 ಅತಿಥಿಗಳು ಉಪಸ್ಥಿತರಿದ್ದರು ಎಂದು ವಿವಿಯ ಕುಲಪತಿ ಡಾ.ಫಝಲ್ ರಹೀಂ ತಿಳಿಸಿದರು. 1988,ಜ.20ರಂದು ನಿಧನರಾಗಿರುವ ಖುದಾಯಿ ಖಿದ್ಮತ್‌ಗಾರ್ ಖಾನ್ ಅಬ್ದುಲ್ ಗಫಾರ್ ಖಾನ್ ಅಲಿಯಾಸ್ ಬಚಾ ಖಾನ್ ಅವರ ಪುಣ್ಯತಿಥಿಯ ಅಂಗವಾಗಿ ಈ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ದಾಳಿಯಲ್ಲಿ ವಿವಿಯ ನಾಲ್ವರು ಭದ್ರತಾ ಸಿಬ್ಬಂದಿಮತ್ತು ಓರ್ವ ಪೊಲೀಸ್ ಕಾನ್‌ಸ್ಟೇಬಲ್ ಕೊಲ್ಲಲ್ಪಟ್ಟಿದ್ದಾರೆ ಎಂದು ರಹೀಂ ತಿಳಿಸಿದರು. ರಸಾಯನ ಶಾಸ್ತ್ರ ವಿಭಾಗದ ಪ್ರೊಫೆಸರ್ ಹಮೀದ್ ಹುಸೇನ್ ಭಯೋತ್ಪಾದಕರ ದಾಳಿಗೆ ಬಲಿಯಾದವರಲ್ಲಿ ಸೇರಿದ್ದಾರೆ. ಭಯೋತ್ಪಾದಕರು ಅವರ ಕೊಠಡಿಗೆ ನುಗ್ಗಿ ತಲೆಗೆ ಗುಂಡಿಕ್ಕಿ ಕೊಂದಿದ್ದಾರೆ ಎಂದು ಜಿಯೊ ಟಿವಿ ವರದಿ ಮಾಡಿದೆ.


ಭಯೋತ್ಪಾದಕರು ಗೋಡೆಗಳನ್ನು ಹತ್ತಿ ವಿವಿ ಆವರಣವನ್ನು ಪ್ರವೇಶಿಸಿದ್ದರೆಂದು ಖೈಬರ್-ಫಖ್ತುಂಖ್ವಾ ಶಾಸಕ ಅರ್ಷದ್ ಅಲಿ ತಿಳಿಸಿದರು.
ವಿವಿಯೊಳಗೆ ಸಿಕ್ಕಿ ಹಾಕಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬಗಳು ಹೊರಗೆ ಸಾಲುಗಟ್ಟಿ ನಿಂತುಕೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗಳಿಗೆ ಸಾಗಿಸಲು 20ಕ್ಕೂ ಅಧಿಕ ಆ್ಯಂಬುಲನ್ಸ್‌ಗಳನ್ನು ಬಳಸಿಕೊಳ್ಳಲಾಗಿತ್ತು.


ಭಯೋತ್ಪಾದಕರು 18ರಿಂದ 25ವರ್ಷ ವಯೋಮಾನದವರು ಎನ್ನಲಾಗಿದೆ.


ಹೊಣೆಹೊತ್ತ ತಾಲಿಬಾನ್?: ಉಗ್ರರ ನೆಲೆಗಳ ಮೇಲೆ ಮಿಲಿಟರಿ ಕಾರ್ಯಾಚರಣೆಗೆ ಪ್ರತೀಕಾರವಾಗಿ ಇಂದಿನ ದಾಳಿಯನ್ನು ನಡೆಸಲಾಗಿದ್ದು, ನಾಲ್ವರು ಆತ್ಮಹತ್ಯಾ ದಾಳಿಕೋರರು ಭಾಗಿಯಾಗಿದ್ದರು ಎಂದು ಹಿರಿಯ ತಾಲಿಬಾನ್ ಕಮಾಂಡರ್ ಉಮರ್ ಮನ್ಸೂರ್ ಮಾಧ್ಯಮಗಳಿಗೆ ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X