Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಲಿತ ವಿದ್ಯಾರ್ಥಿ ರೋಹಿತ್ ವೇಮುಲು...

ದಲಿತ ವಿದ್ಯಾರ್ಥಿ ರೋಹಿತ್ ವೇಮುಲು ಆತ್ಮಹತ್ಯೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಕಾರಣ: ವಿ.ಎಸ್. ಉಗ್ರಪ್ಪ

ವಾರ್ತಾಭಾರತಿವಾರ್ತಾಭಾರತಿ21 Jan 2016 6:20 PM IST
share
ದಲಿತ ವಿದ್ಯಾರ್ಥಿ ರೋಹಿತ್ ವೇಮುಲು ಆತ್ಮಹತ್ಯೆ ಮಾಡಿಕೊಳ್ಳಲು ಕೇಂದ್ರ ಸರ್ಕಾರ ಕಾರಣ: ವಿ.ಎಸ್. ಉಗ್ರಪ್ಪ

ಬೆಂಗಳೂರು.ಜ.21: ಹೈದರಾಬಾದ್‌ನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಲಿತ ಸಮುದಾದಯ ವಿದ್ಯಾರ್ಥಿ ರೋಹಿತ್ ವೇಮುಲು ಆತ್ಮಹತ್ಯೆ ಮಾಡಿಕೊಳ್ಳಲು ಕೇಂದ್ರ ಸರ್ಕಾರವೇ ಮೂಲ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ದಲಿತ ಸಮುದಾಯದ ಕ್ಷಮೆಯಾಚಿಸಬೇಕೆಂದು ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮೇಲ್ಮನೆ ಸದಸ್ಯ ವಿ.ಎಸ್. ಉಗ್ರಪ್ಪ ಇಂದಿಲ್ಲಿ ಆಗ್ರಹಿಸಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆಪಾದನೆ ಎದುರಿಸುತ್ತಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಮತ್ತು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೆಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹಲವು ಮಂದಿ ಕಾರಣರಾಗಿದ್ದು, ಹೈದರಾಬಾದ್‌ನ ಮೇಲ್ಮನೆ ಸದಸ್ಯ ರಾಮಚಂದ್ರರಾವ್, ವಿ.ವಿ. ಕುಲಪತಿ ಮೇಲೂ ಕ್ರಮ ಕೈಗೊಳ್ಳಬೇಕು. ಇದು ಕೇಂದ್ರ ಸರ್ಕಾರದ ದಲಿತ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿರುವ ವಿ.ವಿ.ಗಳಲ್ಲಿ ಉಸಿರುಗಟ್ಟಿಸುವ ವಾತಾವರಣ ಇದೆ ಎಂದರು.

ರೋಹಿತ್ ಬರೆದ ಡೆತ್ ನೋಟ್ ನೋಡಿದರೆ ಆತ ಎಂತಹ ಒತ್ತಡದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದ ಎನ್ನವುದು ತಿಳಿಯುತ್ತದೆ. ದಲಿತರನ್ನು ಕೇಂದ್ರ ಸರ್ಕಾರ ಎರಡನೇ ದರ್ಜೆ ಪ್ರಜೆಗಳಂತೆ ನೋಡಿಕೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಯಾರ್ಯಾರ ಮೇಲೆ ಎಫ್.ಐ.ಆರ್ ದಾಖಲಾಗಿದೆಯೋ ಅವರೆಲ್ಲಾ ರಾಜೀನಾಮೆ ನೀಡಬೇಕೆಂದರು.

ಇಂತಹ ನೊಂದ ಕುಟುಂಬಕ್ಕೆ ಸಾಂತ್ವಾನ ಹೇಳಲು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತೆರಳಿದರೆ ಅದಕ್ಕೂ ರಾಜಕೀಯ ಬಣ್ಣ ಕಟ್ಟಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದ ಪ್ರತಿಭಟನೆಯನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ ಎಂದು ಉಗ್ರಪ್ಪ ಆಪಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X