Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿಮಾನ ನಿಲ್ದಾಣದ ಬಳಿ 6 ಸಾವಿರ ಜನರು...

ವಿಮಾನ ನಿಲ್ದಾಣದ ಬಳಿ 6 ಸಾವಿರ ಜನರು ಕುಳಿತುಕೊಳ್ಳಲು ಸಾಮರ್ಥ್ಯವಿರುವ ಬೃಹತ್ ಸಮ್ಮೇಳನ ಸಭಾಂಗಣ: ಆರ್ ವಿ ದೇಶಪಾಂಡೆ

ವಾರ್ತಾಭಾರತಿವಾರ್ತಾಭಾರತಿ21 Jan 2016 6:26 PM IST
share
ವಿಮಾನ ನಿಲ್ದಾಣದ ಬಳಿ 6 ಸಾವಿರ ಜನರು ಕುಳಿತುಕೊಳ್ಳಲು ಸಾಮರ್ಥ್ಯವಿರುವ ಬೃಹತ್ ಸಮ್ಮೇಳನ ಸಭಾಂಗಣ: ಆರ್ ವಿ ದೇಶಪಾಂಡೆ

ಬೆಂಗಳೂರು.ಜ.21:ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರವನ್ನು ಅತೀ ಶೀಘ್ರದಲ್ಲಿ ವಿಶ್ವದರ್ಜೆಯ ಮಟ್ಟಕ್ಕೆ ಏರಿಸಲಾಗುವುದು ಎಂದು ಮದ್ಯಮ ಮತ್ತು ಬೃಹತ್ ಕೈಗಾರಿಕೆ ಸಚಿವ ಆರ್ ವಿ ದೇಶಪಾಂಡೆ ಇಂದಿಲ್ಲಿ ತಿಳಿಸಿದರು.

ನಗರದಲ್ಲಿ 6 ದಿನಗಳ ಇಮ್ ಟೆಕ್ಸ್ ಹಾಗೂ ಉಪಕರಣಗಳ ತಂತ್ರಜ್ಞಾನ ಮೇಳ- 2016 ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 6 ಸಾವಿರ ಜನರು ಕುಳಿತುಕೊಳ್ಳಲು ಸಾಮರ್ಥ್ಯವಿರುವ ಬೃಹತ್ ಸಮ್ಮೇಳನ ಸಭಾಂಗಣವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.

ಉಪಕರಣಗಳ ತಯಾರಿಕೆಯಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ,ಕರ್ನಾಟಕ ರಾಜ್ಯ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು 2000 ಸಾಲನಲ್ಲಿಯೇ ಪ್ರಾರಂಭಿಸಿದೆ,ಅನೇಕ ಉಪಕರಣ ಉತ್ಪಾದನಾ ಕಂಪನಿಗಳು ಈ ಹಿಂದೆಯೇ ಬೆಂಗಳೂರಿನಲ್ಲಿ ಸ್ಥಾಪಿಸಲ್ಪಟ್ಟವೆ, ಬೆಳಗಾವಿ ನಗರ ಕೂಡ ಉಪಕರಣಗಳ ತಯಾರಿಕೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಕರ್ನಾಟಕ ಕೈಗಾರಿಕೆ ಹಾಗೂ ಉದ್ಯಮಗಳ ವಿಚಾರದಲ್ಲಿ ಸ್ಪರ್ದಾತ್ಮಕತೆಯನ್ನು ಹಾಗೂ ಗುಣಾತ್ಮಕತೆನ್ನು ಕಾಪಾಡಿಕೊಂಡು ಬಂದಿದೆ, ಹಾಗೇಯೇ ವಿಪುಲ ಉದ್ಯೋಗಾವಕಾಶ ಕಲ್ಪಿಸಿದೆ ಎಂದು ಹೇಳಿದ ಅವರು ಬಂಡವಾಳ ಹೂಡಿಕೆಗೆ ಕರ್ನಾಟಕ ಸರ್ಕಾರ ಮುಕ್ತವಾಗಿದ್ದು ಅಫಾರ ಮಾನವ ಸಂಪನ್ಮೂಲ ಹಾಗೂ ಮಾನವ ಸಾಮರ್ಥ್ಯವನ್ನು ಹೊಂದಿದೆ. ಕೈಗಾರಿಕೆ, ಮಾಹಿತಿ ತಂತ್ರಜ್ಞಾನ, ಉತ್ಪಾದನಾ ವಲಯದಲ್ಲಿ ಮುಂಚೂಣಿ ನಾಯಕತ್ವ ಹೊಂದಿದ್ದು, ಕರ್ನಾಟಕ ಎಲ್ಲ ವಿಚಾರದಲ್ಲಿ ಮುಂದಿದೆ ಎಂಬುದನ್ನು ಪ್ರಧಾನ ಮಂತ್ರಿಗಳಿಗೆ ಕೈಗಾರಿಕಾದ್ಯೋಮಿಗಳು ಮನವರಿಕೆ ಮಾಡಿಕೊಡಬೇಕು ಎಂದು ಕಿವಿ ಮಾತು ಹೇಳಿದರು.

ರಾಜ್ಯ ಸರ್ಕಾರ ದ್ವಿತೀಯ ದರ್ಜೆ ನಗರಗಳನ್ನು ಅಭಿವೃದ್ದಿ ಪಡಿಸುವ ಉದ್ದೇಶ ಹೊಂದಿದೆ ಬೆಳಗಾಂ, ಯಾದಗಿರಿ,ಮಂಗಳೂರು,ಕಲಬುರಗಿ,ತುಮಕೂರು,ಸೇರಿದಂತೆ ಹಲವಡೆ ಕೈಗಾರಿಕೆಗಳ ಸ್ಥಾಪನೆಗಾಗಿ 25ಸಾವಿರ ಎಕರೆ ಭೂ ಬ್ಯಾಂಕ್ ಹೊಂದಲಾಗಿದೆ, ಈಗಾಗಲೇ ಅಗತ್ಯ ಬಂಡವಾಳ ಹೂಡಿಕೆಗಾಗಿ ಯೋಜನಾ ನಕ್ಷೆ ತಯಾರಿಸಲಾಗಿದೆ ಎಂದು ತಿಳಿಸಿದರು.

ಬರುವ ಫೆಬ್ರವರಿಯಂದು ನಡೆಯಲ್ಲಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ 7ದೇಶಗಳು ಸಹಭಾಗಿತ್ವ ವಹಿಸಲ್ಲಿದ್ದು, ಈ ಸಮಾವೇಶಕ್ಕೆ ಭಾಗವಹಿಸುವಂತೆ ಮುಕ್ತ ಆಹ್ವಾನ ನೀಡಿದ ಅವರು ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾ ಘೋಷಣೆಯಂತೆ ’’ಆಹ್ವಾನ ಕರ್ನಾಟಕ,ಅವಿಷ್ಕಾರ ಕರ್ನಾಟಕ, ಹೂಡಿಕೆ ಕರ್ನಾಟಕ’’ಎಂಬ ಉದ್ದೇಶವನ್ನು ಹೊಂದಿದೆ, ಭವಿಷ್ಯ ಭಾರತದ ನಿರ್ಮಾಣಕ್ಕೆ ಕರ್ನಾಟಕ ನಾಂದಿ ಹಾಡಲಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಇಂಟೆಕ್ಸ್ ಅಧ್ಯಕ್ಷ ಜೇಮ್ಸ್ದ ಎನ್ ಗೋದ್ರೆಜ್, ಕೇಂದ್ರ ಸರ್ಕಾರದ ಜಂಟಿ ಕಾರ್ಯದರ್ಶಿ ವಿಶ್ವಜೀತ್ ಸಹಾಯ್, ನೀತಿ ಆಯೋಗದ ಡಾ. ವಿ.ಕೆ ಸರಸ್ವತ್ ಅನೇಕರು ಉಪಸ್ಥಿತರಿದ್ದರು, ಪ್ರದರ್ಶನದಲ್ಲಿ ಪ್ರಮುಖವಾಗಿ ಜಪಾನ್.ಚೈನಾ,ತೈವಾನ್ ಸೇರಿದಂತೆ 23 ದೇಶಗಳು ಭಾಗವಹಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X