Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು : ಕಾಯಿಲೆ ಪೀಡಿತ ಬಾಲಕನಿಗೆ...

ಮಂಗಳೂರು : ಕಾಯಿಲೆ ಪೀಡಿತ ಬಾಲಕನಿಗೆ ನೆರವಾದ ಹಿದಾಯ ಫೌಂಡೇಶನ್

ವಾರ್ತಾಭಾರತಿವಾರ್ತಾಭಾರತಿ21 Jan 2016 8:03 PM IST
share
ಮಂಗಳೂರು : ಕಾಯಿಲೆ ಪೀಡಿತ ಬಾಲಕನಿಗೆ ನೆರವಾದ ಹಿದಾಯ ಫೌಂಡೇಶನ್

ಮಂಗಳೂರು : ಮೂತ್ರಕೋಶ ಸಂಬಂಧಿಸಿದ ಕಾಯಿಲೆಯಿಂದ ಹಲವು ಸಮಯದಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ನೆಟ್ಲ ಮೂಡ್ನೂರು ಗ್ರಾಮದ ನೇರಳ ಕಟ್ಟೆ ನಿವಾಸಿ , ನಾರಾಯಣ ಮತ್ತು ಸಾವಿತ್ರಿ ದಂಪತಿಗಳ ಪುತ್ರ ಮಾಸ್ಟರ್ ಗಗನ್ (12 ವರ್ಷ) ಎಂಬ ಬಾಲಕನ ಚಿಕಿತ್ಸೆಗೆ ಮಂಗಳೂರಿನ ಹಿದಾಯ ಫೌಂಡೇಶನ್ ನೆರವು ನೀಡಿದೆ. ಬಾಲಕನ ಸುಧೀರ್ಘ ಸಮಯದ ಕಾಯಿಲೆಯಿಂದ ಅಪಾರ ಹಣ ಖರ್ಚು ಮಾಡಿ ಆರ್ಥಿಕವಾಗಿ ಕಂಗೆಟ್ಟಿದ್ದ ಕುಟುಂಬವು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಬಾಲಕನನ್ನು ದಾಖಲು ಮಾಡಿತ್ತು. ತಲಾ 37,500/- ರೂಪಾಯಿ ವೆಚ್ಚದ ಮೂರು ಚುಚ್ಚು ಮದ್ದುಗಳನ್ನು ಒಟ್ಟು ರೂಪಾಯಿ 1,12,500/- ವೆಚ್ಚದಲ್ಲಿ ನೀಡಿ ಮಾನವೀಯ ನೆರವು ನೀಡಿದೆ.

        ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿನ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ಹಿದಾಯ ಫೌಂಡೇಶನ್ ಸಹಾಯ ಕೇಂದ್ರವನ್ನು ಆರಂಭಿಸಿದ್ದು, ಇದರ ಮೂಲಕ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಿದೆ. ಹಿದಾಯ ಫೌಂಡೇಶನ್ ಮಂಗಳೂರು ಇದು ಕಳೆದ 8 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿ ವಿಭಿನ್ನ ರೀತಿಯಲ್ಲಿ ತನ್ನ ಸಾರ್ಥಕ ಸೇವೆಯನ್ನು ಮಾಡುತ್ತಿದೆ. ಈಗಾಗಲೇ ಹಲವಾರು ಬಡ ಜನರ ಹಸಿವು ನೀಗಿಸುವ ಸಾರ್ಥಕ ಕಾರ್ಯದಲ್ಲಿ ತೊಡಗಿದ್ದು ಸುಮಾರು 250ಕ್ಕಿಂತಲೂ ಅಧಿಕ ತೀರಾ ಬಡ ಅರ್ಹ ಕುಟುಂಬದವರಿಗೆ ತಿಂಗಳಿಗೆ ಬೇಕಾಗುವಂತಹ ಜಿನಸು (ರೇಶನ್) ಸಾಮಾನುಗಳನ್ನು ಅವರ ಮನೆ ಬಾಗಿಲಿಗೆ ಪ್ರತೀ ತಿಂಗಳೂ ಮುಟ್ಟಿಸುವ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದೆ. ಆರೋಗ್ಯ ಕ್ಷೇತ್ರದಲ್ಲೂ ತನ್ನ ಕಾರ್ಯಚಟುವಟಿಕೆ ಮುಂದುವರಿಸಿ ಹಲವಾರು ಮೆಡಿಕಲ್ ಕ್ಯಾಂಪ್ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಹಳ್ಳಿ ಪ್ರದೇಶದಲ್ಲಿ ಹಮ್ಮಿಕೊಂಡು ಬಡ ಕುಟುಂಬದ ತೀರಾ ಅಸಹಾಯಕ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಭರಿಸಲು ಹಲವು ರೀತಿಯಲ್ಲಿ ಸಹಕರಿಸಿ ಅಗತ್ಯವಿರುವಲ್ಲಿ ಹಣಕಾಸಿನ ಸಹಾಯವನ್ನು ಹಾಗೂ ಔಷಧಿಯನ್ನು ಖರೀದಿಸಿ ರೋಗಿಗಳಿಗೆ ವಿತರಿಸಿದೆ.

        ತುಮಕೂರಿನ ದಾದಾಪೀರ್ ಎಂಬವರ ಪುತ್ರ ಇಬ್ರಾಹಿಂ, ಉತ್ತರ ಕನ್ನಡದ ಸೋಮಯ್ಯ ಎಂಬವರ ಪುತ್ರ ಚಂದ್ರಕಾಂತ್ (13), ತರೀಕೆರೆ ರಾಮಪ್ಪ ಎಂಬವರ 6 ತಿಂಗಳ ಪುತ್ರ ರೋಹಿತ್, ಬೆಳ್ತಂಗಡಿಯ ವಸಂತ್ ಎಂಬವರ ಒಂದೂವರೆ ತಿಂಗಳ ಪ್ರಾಯದ ದೀಕ್ಷಿತ್, ಅಡ್ಯಾರ್ ಕಣ್ಣೂರಿನ ಅಬ್ದುಲ್ ಖಾದರ್ ಎಂಬವರ ಒಂದೂವರೆ ವರ್ಷ ಪ್ರಾಯದ ಪುತ್ರಿ ತಬಸ್ಸುಮ್, ಪುತ್ತೂರಿನ ಸುಂದರ ಎಂಬವರ 6 ವರ್ಷದ ಪುತ್ರ ಪ್ರಜ್ವಲ್, ಬೆಳ್ತಂಗಡಿಯ ಅಬ್ದುಲ್ ರೆಹಮಾನ್ (50 ವರ್ಷ ಪ್ರಾಯ) ಕಾಸರಗೋಡಿನ ನಾರಾಯಣ ಮತ್ತು ಲಾವಣ್ಯ ಎಂಬವರ ಒಂದು ತಿಂಗಳ ಪುತ್ರಿ, ಬಂಟ್ವಾಳದ ವಿಶ್ವನಾಥ ಬಂಗೇರ ದಂಪತಿಯ ಪುತ್ರಿ (2 ತಿಂಗಳು), ಕಾಜೂರಿನ ಅಬ್ದುಲ್ ರೆಹಮಾನ್ ಎಂಬವರ ಪತ್ನಿ 66 ವರ್ಷದ ಮರಿಯಮ್ಮ, ಎನ್.ಆರ್.ಪುರ ಶೃಂಗೇರಿಯ ರಮೇಶ್, ಶಿಲ್ಪ ದಂಪತಿಯ 13 ದಿನದ ಪುತ್ರಿ ಮತ್ತು ಮೂಡಿಗೆರೆಯ ರಾಮ, ಸರೋಜ ದಂಪತಿಯ 13 ವರ್ಷದ ಪುತ್ರಿ ಬೇಬಿ, ಚಿಕ್ಕಮಗಳೂರಿನ ರಾಮಪ್ಪ, ದಾಕ್ಷಾಯಿಣಿ ದಂಪತಿಯ ಪುತ್ರಿ 6 ವರ್ಷ ಪ್ರಾಯದ ಕಾವ್ಯ ಎಂಬ ರೋಗಿಯ ಸಹಿತ ಎಲ್ಲರಿಗೂ ಚಿಕಿತ್ಸಾ ವೆಚ್ಚವನ್ನು ಸಂಸ್ಥೆಯ ವತಿಯಿಂದ ವ್ಯಯಿಸಲಾಗಿದೆ. ಈ ಸೇವಾ ಕಾರ್ಯದಿಂದ ಸರಕಾರಿ ವೆನ್ಲಾಕ್ ಆಸ್ಪತ್ರೆಯ D.M.O. ಸಹಿತ ಹಲವು ವೈದ್ಯರಿಂದ ಶ್ಲಾಘನೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X