ಪ್ರಾಂಶುಪಾಲ ಆತ್ಯಹತ್ಯೆಗೆ ಶರಣು
ಮಂಗಳೂರು, ಜ.21: ಖಾಸಗಿ ಕಾಲೇಜಿನ ಪ್ರಾಂಶುಪಾಲರೋರ್ವರು ನಗರದ ಖಾಸಗಿ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಖಾಸಗಿ ಪಿ.ಯು. ಕಾಲೇಜು ಪ್ರಾಂಶುಪಾಲ ಮೂಲತಃ ಮಂಗಳೂರಿನ ತಲಪಾಡಿ ನಿವಾಸಿ ಸುದೇಶ್ (45) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ಸುದೇಶ್ ಅವರು ಸೋಮವಾರಪೇಟೆ ತಾಲೂಕು ಮಾದಾಪುರ ಬಿ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ 2001ರಿಂದ ಪ್ರಾಂಶುಪಾಲರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಇವರ ಪತ್ನಿ ನಗರದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದಾರೆ. ಮೃತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story