ನಾಳೆ ಮನೆಯಂಗಳದಲ್ಲಿ ಮಾತುಕತೆ
ಬೆಂಗಳೂರು, ಜ. 21: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಮನೆಯಂಗಳದಲ್ಲಿ ಮಾತುಕತೆ’ ಕಾರ್ಯಕ್ರಮ ನಡೆಯಲಿದೆ.
ಜ. 23ರಂದು ಸಂಜೆ 4 ಗಂಟೆಗೆ ಜೆ.ಸಿ.ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಟ ಚಂದ್ರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ 3 ಗಂಟೆಯಿಂದ 4 ಗಂಟೆಯವರೆಗೆ ಶಾಸ್ತ್ರೀಯ ಸಂಗೀತಗಾರ ಬಿ.ಆರ್.ಸಂಜಯ್ನಾಗ್ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆಂದು ಎಂದು ಪ್ರಕಟನೆ ತಿಳಿಸಿದೆ.
Next Story





